Homeಮುಖಪುಟಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

ಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

- Advertisement -
- Advertisement -

ಕಳೆದ ವಾರ ಉತ್ತರ ಪ್ರದೇಶದ ಮಥುರಾ ರೈಲ್ವೇ ನಿಲ್ದಾಣದಲ್ಲಿ ನಿದ್ದೆ ಮಾಡುತ್ತಿದ್ದ ತಂದೆ-ತಾಯಿಯ ಪಕ್ಕದಿಂದ ಕಳವು ಮಾಡಲಾದ ಏಳು ತಿಂಗಳ ಮಗು ಅಲ್ಲಿಂದ 100 ಕಿ.ಮೀ ದೂರದ ಫಿರೋಜಾಬಾದ್‌ನ ಬಿಜೆಪಿ ಕಾರ್ಪೊರೇಟರ್‌ನ ಮನೆಯಿಂದ ಪತ್ತೆಯಾಗಿದೆ. ಮಕ್ಕಳನ್ನು ಕದ್ದು ಮಾರಾಟ ಮಾಡುವ ದಂಧೆಯನ್ನು ಭೇದಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಜೆಪಿಯ ಕಾರ್ಪೋರೇಟರ್‌‌ ವಿನಿತಾ ಅಗರ್ವಾಲ್ ಮತ್ತು ಅವರ ಪತಿ ತಮಗೆ ಗಂಡು ಬೇಕೆಂದು ಮಕ್ಕಳ ಕಳ್ಳತನ ಮಾಡುವ ದೊಡ್ಡ ಗ್ಯಾಂಗ್‌‌ನ ಸದಸ್ಯರಾದ ಇಬ್ಬರು ವೈದ್ಯರಿಂದ 1.8 ಲಕ್ಷ ರೂ.ಗೆ ಮಗುವನ್ನು ಖರೀದಿಸಿದ್ದರು. ದಂಪತಿಗೆ ಈಗಾಗಲೇ ಮಗಳಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ಲಾಟ್‌ಫಾರ್ಮ್‌ನಿಂದ ಮಗುವನ್ನು ಎತ್ತಿಕೊಂಡು ಹೋಗುವ ದೃಶ್ಯಗಳು ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಇದೀಗ ಪೊಲೀಸರು ಮಗುವನ್ನು ಎತ್ತಿಕೊಂಡು ಹೋದ ವ್ಯಕ್ತಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ.

ಮಥುರಾದ ರೈಲ್ವೇ ಪೊಲೀಸರು ಮಗುವನ್ನು ಅವರ ತಾಯಿಗೆ ಹಸ್ತಾಂತರಿಸಿದ್ದಾರೆ. ಬಂಧಿತ ವೈದ್ಯರಿಂದ ದುಡ್ಡನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಈ ಬಗ್ಗೆ ಹೇಳಿಕೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಮುಷ್ತಾಕ್, ಹಣಕ್ಕಾಗಿ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್ ಮಗುವನ್ನು ಅಪಹರಣ ನಡೆಸಿದೆ ಎಂದು ಹೇಳಿದ್ದಾರೆ.

“ದೀಪ್ ಕುಮಾರ್ ಎಂಬ ವ್ಯಕ್ತಿ ಮಗುವನ್ನು ಕದ್ದೊಯ್ದಿದ್ದಾನೆ ಎಂದು ನಾವು ಕಂಡುಕೊಂಡಿದ್ದೇವೆ. ಅವನು ನೆರೆಯ ಹತ್ರಾಸ್ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಇಬ್ಬರು ವೈದ್ಯರನ್ನು ಒಳಗೊಂಡಿರುವ ಗ್ಯಾಂಗ್‌‌‌ವೊಂದರ ಭಾಗವಾಗಿದ್ದಾರೆ. ಇತರ ಕೆಲವು ಆರೋಗ್ಯ ಕಾರ್ಯಕರ್ತರು ಕೂಡಾ ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮಗು ಯಾರ ಮನೆಯಲ್ಲಿದೆ ಎಂದು ನಾವು ವಿಚಾರಣೆ ನಡೆಸಿದಾಗ ಮಗು ಪತ್ತೆಯಾಗಿದೆ. ಆರೋಪಿಗಳಿಗೆ ಒಬ್ಬಳೇ ಮಗಳಿದ್ದು, ಗಂಡು ಮಗುವೊಂದನ್ನು ಬಯಸಿದ್ದರು. ಅದಕ್ಕಾಗಿ ಅವರು ಮಕ್ಕಳ ಕಳ್ಳತನ ಮಾಡುವ ಗ್ಯಾಂಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು” ಎಂದು ಮುಷ್ತಾಕ್ ಪತ್ರಕರ್ತರಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

ಘಟೆನೆಯ ಬಗ್ಗೆ ಬಂಧಿತ ಕಾರ್ಪೊರೇಟರ್ ಹಾಗೂ ಬಿಜೆಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಆಗಸ್ಟ್ 23 ರ ರಾತ್ರಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು  ವ್ಯಕ್ತಿಯೊಬ್ಬ ಎತ್ತಿಕೊಂಡು ಹೋಗಿದ್ದನು. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...