Homeಮುಖಪುಟಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

ಯುಪಿ: ರೈಲು ನಿಲ್ದಾಣದಿಂದ ಕದ್ದ ಮಗು ಬಿಜೆಪಿ ನಾಯಕಿಯ ಮನೆಯಲ್ಲಿ ಪತ್ತೆ

- Advertisement -
- Advertisement -

ಕಳೆದ ವಾರ ಉತ್ತರ ಪ್ರದೇಶದ ಮಥುರಾ ರೈಲ್ವೇ ನಿಲ್ದಾಣದಲ್ಲಿ ನಿದ್ದೆ ಮಾಡುತ್ತಿದ್ದ ತಂದೆ-ತಾಯಿಯ ಪಕ್ಕದಿಂದ ಕಳವು ಮಾಡಲಾದ ಏಳು ತಿಂಗಳ ಮಗು ಅಲ್ಲಿಂದ 100 ಕಿ.ಮೀ ದೂರದ ಫಿರೋಜಾಬಾದ್‌ನ ಬಿಜೆಪಿ ಕಾರ್ಪೊರೇಟರ್‌ನ ಮನೆಯಿಂದ ಪತ್ತೆಯಾಗಿದೆ. ಮಕ್ಕಳನ್ನು ಕದ್ದು ಮಾರಾಟ ಮಾಡುವ ದಂಧೆಯನ್ನು ಭೇದಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಿಜೆಪಿಯ ಕಾರ್ಪೋರೇಟರ್‌‌ ವಿನಿತಾ ಅಗರ್ವಾಲ್ ಮತ್ತು ಅವರ ಪತಿ ತಮಗೆ ಗಂಡು ಬೇಕೆಂದು ಮಕ್ಕಳ ಕಳ್ಳತನ ಮಾಡುವ ದೊಡ್ಡ ಗ್ಯಾಂಗ್‌‌ನ ಸದಸ್ಯರಾದ ಇಬ್ಬರು ವೈದ್ಯರಿಂದ 1.8 ಲಕ್ಷ ರೂ.ಗೆ ಮಗುವನ್ನು ಖರೀದಿಸಿದ್ದರು. ದಂಪತಿಗೆ ಈಗಾಗಲೇ ಮಗಳಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ಲಾಟ್‌ಫಾರ್ಮ್‌ನಿಂದ ಮಗುವನ್ನು ಎತ್ತಿಕೊಂಡು ಹೋಗುವ ದೃಶ್ಯಗಳು ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಇದೀಗ ಪೊಲೀಸರು ಮಗುವನ್ನು ಎತ್ತಿಕೊಂಡು ಹೋದ ವ್ಯಕ್ತಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ.

ಮಥುರಾದ ರೈಲ್ವೇ ಪೊಲೀಸರು ಮಗುವನ್ನು ಅವರ ತಾಯಿಗೆ ಹಸ್ತಾಂತರಿಸಿದ್ದಾರೆ. ಬಂಧಿತ ವೈದ್ಯರಿಂದ ದುಡ್ಡನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಈ ಬಗ್ಗೆ ಹೇಳಿಕೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಮುಷ್ತಾಕ್, ಹಣಕ್ಕಾಗಿ ಕಳ್ಳಸಾಗಣೆಯಲ್ಲಿ ತೊಡಗಿರುವ ಗ್ಯಾಂಗ್ ಮಗುವನ್ನು ಅಪಹರಣ ನಡೆಸಿದೆ ಎಂದು ಹೇಳಿದ್ದಾರೆ.

“ದೀಪ್ ಕುಮಾರ್ ಎಂಬ ವ್ಯಕ್ತಿ ಮಗುವನ್ನು ಕದ್ದೊಯ್ದಿದ್ದಾನೆ ಎಂದು ನಾವು ಕಂಡುಕೊಂಡಿದ್ದೇವೆ. ಅವನು ನೆರೆಯ ಹತ್ರಾಸ್ ಜಿಲ್ಲೆಯಲ್ಲಿ ಆಸ್ಪತ್ರೆಯನ್ನು ನಡೆಸುತ್ತಿರುವ ಇಬ್ಬರು ವೈದ್ಯರನ್ನು ಒಳಗೊಂಡಿರುವ ಗ್ಯಾಂಗ್‌‌‌ವೊಂದರ ಭಾಗವಾಗಿದ್ದಾರೆ. ಇತರ ಕೆಲವು ಆರೋಗ್ಯ ಕಾರ್ಯಕರ್ತರು ಕೂಡಾ ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮಗು ಯಾರ ಮನೆಯಲ್ಲಿದೆ ಎಂದು ನಾವು ವಿಚಾರಣೆ ನಡೆಸಿದಾಗ ಮಗು ಪತ್ತೆಯಾಗಿದೆ. ಆರೋಪಿಗಳಿಗೆ ಒಬ್ಬಳೇ ಮಗಳಿದ್ದು, ಗಂಡು ಮಗುವೊಂದನ್ನು ಬಯಸಿದ್ದರು. ಅದಕ್ಕಾಗಿ ಅವರು ಮಕ್ಕಳ ಕಳ್ಳತನ ಮಾಡುವ ಗ್ಯಾಂಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು” ಎಂದು ಮುಷ್ತಾಕ್ ಪತ್ರಕರ್ತರಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ₹ 300 ಕಳ್ಳತನ ಆರೋಪ: ದಲಿತ ಬಾಲಕರ ಮೇಲೆ ಹಲ್ಲೆ ಮಾಡಿ 4 ಕಿ.ಮೀ. ನಡೆಸಿದ ದುಷ್ಕರ್ಮಿಗಳು

ಘಟೆನೆಯ ಬಗ್ಗೆ ಬಂಧಿತ ಕಾರ್ಪೊರೇಟರ್ ಹಾಗೂ ಬಿಜೆಪಿಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಆಗಸ್ಟ್ 23 ರ ರಾತ್ರಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು  ವ್ಯಕ್ತಿಯೊಬ್ಬ ಎತ್ತಿಕೊಂಡು ಹೋಗಿದ್ದನು. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...