Homeದಲಿತ್ ಫೈಲ್ಸ್ಯುಪಿ: ಲಖಿಂಪುರಖೇರಿಯ ಅಪ್ರಾಪ್ತ ದಲಿತ ಸಹೋದರಿಯರ ಅತ್ಯಾಚಾರ, ಹತ್ಯೆ - 6 ಮಂದಿ ಬಂಧನ

ಯುಪಿ: ಲಖಿಂಪುರಖೇರಿಯ ಅಪ್ರಾಪ್ತ ದಲಿತ ಸಹೋದರಿಯರ ಅತ್ಯಾಚಾರ, ಹತ್ಯೆ – 6 ಮಂದಿ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಲಖೀಂಪುರದಲ್ಲಿ 17 ಮತ್ತು 15ರ ಹರೆಯದ ಇಬ್ಬರು ದಲಿತ ಸಹೋದರಿಯರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆರು ಜನನ್ನು ಬಂಧಿಸಿದ್ದಾರೆ. ಸಹೋದರಿಯರಿಬ್ಬರ ಮೇಲೆ ಐವರು ಅತ್ಯಾಚಾರ ಎಸಗಿ, ಕೊಲೆ ಮಾಡಿ ನಂತರ ಮರಕ್ಕೆ ನೇಣು ಹಾಕಿದ್ದಾರೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಬಂಧಿತರನ್ನು ಸುಹೇಲ್, ಜುನೈದ್, ಹಫೀಜುಲ್ ರೆಹಮಾನ್, ಕರಿಮುದ್ದೀನ್, ಆರಿಫ್ ಮತ್ತು ಗೌತಮ್‌‌ ಛೋಟು ಎಂದು ಗುರುತಿಸಲಾಗಿದೆ. ಬಾಲಕಿಯರನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಸುಹೇಲ್ ಮತ್ತು ಜುನೈದ್ ಅತ್ಯಾಚಾರವೆಸಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸಂಜೀವ್ ಸುಮನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯರು ಮದುವೆಗೆ ಒತ್ತಾಯಿಸಿದಾಗ, ದುಷ್ಕರ್ಮಿಗಳು ಅವರ ದುಪಟ್ಟಾದಿಂದ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಕರೀಮುದ್ದೀನ್ ಮತ್ತು ಆರೀಫ್ ಕೊಲೆಯನ್ನು ಮುಚ್ಚಿಡಲು ಸಹಾಯ ಮಾಡಿದ್ದಾರೆ. “ಬಾಲಕಿಯರ ದೇಹವನ್ನು ಮರಕ್ಕೆ ನೇಣು ಹಾಕಿ ಇದು ಆತ್ಮಹತ್ಯೆ ಎಂದು ತೋರುವಂತೆ ಮಾಡಿದ್ದಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ಅಪ್ರಾಪ್ತ ದಲಿತ ಬಾಲಕಿಯರಿಬ್ಬರ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಅತ್ಯಾಚಾರ, ಕೊಲೆ ಎಂದ ಕುಟುಂಬ

“ಬಾಲಕಿಯರನ್ನು ದುಷ್ಕರ್ಮಿಗಳು ಅಪಹರಿಸಿರಲಿಲ್ಲ. ಸಹೋದರಿಯರು ಸುಹೇಲ್ ಮತ್ತು ಜುನೈದ್ ಅವರೊಂದಿಗೆ ಸ್ನೇಹಿತರಾಗಿದ್ದರಿಂದ, ಸ್ವಇಚ್ಛೆಯಿಂದ ಅವರೊಂದಿಗೆ ಬೈಕ್‌ನಲ್ಲಿ ತೆರಳಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. “ತಮ್ಮ ಹೆಣ್ಣು ಮಕ್ಕಳನ್ನು ಮನೆಯಲ್ಲಿ ಇರುವಾಗ ಮೂವರು ದುಷ್ಕರ್ಮಿಗಳು ಅವರನ್ನು ಅಪಹರಣ ನಡೆಸಿದ್ದಾರೆ” ಎಂದು ಹತ್ಯೆಗೀಡಾದ ಬಾಲಕಿಯರ ತಾಯಿ ಆರೋಪಿಸಿದ್ದರು.

ಆರೋಪಿಗಲ್ಲಿ ಚೇತರಾಮ್ ಎಂಬವರ ಮಗನಾದ ಗೌತಮ್‌‌ ಛೋಟು ಬಾಲಕಿಯರ ನರೆ ಮನೆಯವನಾಗಿದ್ದು, ದುಷ್ಕರ್ಮಿಗಳಿಗೆ ಬಾಲಕಿಯರನ್ನು ಪರಿಚಯಿಸಲು ಸಹಾಯ ಮಾಡಿದ್ದನು ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಬಂಧಿತರೆಲ್ಲರೂ ಪಕ್ಕದ ಗ್ರಾಮದವರಾಗಿದ್ದು, ಐವರನ್ನು ನಿನ್ನೆ ಬಂಧಿಸಲಾಗಿತ್ತು. ಒಬ್ಬನನ್ನು ಇಂದು ಬೆಳಗ್ಗೆ ಬಂಧಿಸುವಾಗ ಎನ್‌ಕೌಂಟರ್‌ ನಡೆಸಲಾಗಿದ್ದು, ಸಿಕ್ಕಿಬಿದ್ದಿದ್ದಾನೆ. “ಅಪರಾಧದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ನಾವು ಬಂಧಿಸಿದ್ದೇವೆ” ಎಂದು ಪೊಲೀಸ್‌ ಅಧಿಕಾರಿ ಸಂಜೀವ್ ಸುಮನ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:  ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಶವವಾಗಿ ಪತ್ತೆಯಾಗುವ ಮೂರು ಗಂಟೆಗಳ ಮೊದಲು ಅವರನ್ನು ಅಪಹರಿಸಲಾಗಿತ್ತು ಎಂದು ಬಾಲಕಿಯರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಮೂವರು ಯುವಕರು ತನ್ನ ಹೆಣ್ಣು ಮಕ್ಕಳನ್ನು ಮೋಟಾರ್ ಸೈಕಲ್‌ಗಳಲ್ಲಿ ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬಳಿಕ ಕುಟುಂಬದವರು ಕಬ್ಬಿನ ಗದ್ದೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯರ ಶವಗಳನ್ನು ಪತ್ತೆ ಮಾಡಿದ್ದಾರೆ. ಬಾಲಕಿಯರ ಶವ ತಮ್ಮ ದುಪಟ್ಟಾಗಳಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯಾವುದೇ ಗಾಯಗಳಿರಲಿಲ್ಲ ಎಂದು ಎನ್‌ಡಿಟಿವಿ ವರದ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...