Homeಮುಖಪುಟಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

- Advertisement -
- Advertisement -

ಗೋಹತ್ಯೆ ಶಂಕೆ ಮೇಲೆ ಸ್ವಘೋಷಿತ ಗೋರಕ್ಷಕರ ಗುಂಪು ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದಲ್ಲಿ ಸೋಮವಾರ (ಡಿ.30) ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶಹದೀನ್ ಖುರೇಷಿ (37) ಎಂದು ಗುರುತಿಸಲಾಗಿದೆ. ಗುಂಪು ಹಲ್ಲೆಗೊಳಗಾದ ಶಹದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಹದೀನ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಮಂಗಳವಾರ ಆರೋಪಿಗಳೇ ಹರಿಬಿಟ್ಟಿರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ವಿಡಿಯೋದಲ್ಲಿ, ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ಶಹದೀನ್ ಅವರಿಗೆ ಒದಿಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯವಿದೆ. ನೆಲದಲ್ಲಿ ಬಿದ್ದಿರುವ ಶಹದೀನ್ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಶಹದೀನ್ ಅವರ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಶಹದೀನ್ ಅವರೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ವರದಿ ವಿವರಿಸಿದೆ.

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ. ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

ಮಾಂಸದ ಅಂಗಡಿ ನಡೆಸುತ್ತಿರುವ ಶಹದೀದ್ ಅವರ ಸಹೋದರ ಶಹಝಾದ್ ಮಾತನಾಡಿದ್ದು “ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯಾಪಾರಕ್ಕೂ ಆತನಿಗೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಆತನ ವಿರುದ್ಧ ಯಾವುದೇ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಒಂದು ವರ್ಷದ ಹಿಂದೆ, ಅನಾರೋಗ್ಯಕ್ಕೆ ಒಳಗಾಗಿದ್ದ ಶಹದೀನ್ ಶ್ವಾಸಕೋಶಗಳು ದುರ್ಬಲಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಸುಮಾರು ಆರು ತಿಂಗಳ ಕಾಲ ಕಳೆದಿದ್ದರು. ಈ ವೇಳೆ ಅವರ ಕೆಲಸ ಹೋಗಿತ್ತು. ನನ್ನ ಸಹೋದರ ಎಂದಿಗೂ ತಪ್ಪು ಕೆಲಸ ಮಾಡುವವನಲ್ಲ. ಇತರರು ಮಾಡಿರುವುದಕ್ಕೆ ಈತ ಬೆಲೆ ತೆತ್ತಿದ್ದಾನೆ” ಎಂದು ಹೇಳಿದ್ದಾಗಿ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಶಹದೀನ್ ಅವರ ಪತ್ನಿ ರಿಝ್ವಾನಾ ಮಾತನಾಡಿ, “ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ನನ್ನ ಪತಿ ಮನೆಯಲ್ಲಿ ಮಲಗಿದ್ದಾಗ, ಅವರ ಸ್ನೇಹಿತರು ಕರೆದುಕೊಂಡು ಹೋಗಿದ್ದರು. ಕೆಲ ಗಂಟೆಗಳ ನಂತರ, ಗುಂಪೊಂದು ಶಹದೀನ್ ಅವರನ್ನು ಹತ್ಯೆಗೈದಿರುವುದು ನಮಗೆ ತಿಳಿಯಿತು. ಅಪರಾಧಿಗಳು ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋಗಳಿದ್ದರೂ, ಪೊಲೀಸರು ಅಪರಿಚಿತರ ವಿರುದ್ದ ಎಫ್‌ಐಅರ್ ದಾಖಲಿಸಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾಗಿ ವರದಿ ಹೇಳಿದೆ.

“ನಮ್ಮ ಗುಂಪಿನ ಸದಸ್ಯರೂ ಆಗಿರುವ ಸ್ಥಳೀಯ ಅಂಗಡಿಯವರಿಂದ ಒಬ್ಬ ವ್ಯಕ್ತಿ ಗೋಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ನಮಗೆ ತಿಳಿಯಿತು. ಅವರನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದು, ಗೋವಿನ ಕಳೇಬರದೊಂದಿಗೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಹಸುವನ್ನು ಹತ್ಯೆ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ ಮತ್ತು ಪೊಲೀಸರು ನಮಗೆ ಕಠಿಣ ಕ್ರಮದ ಭರವಸೆ ನೀಡಿದ್ದಾರೆ” ಎಂದು ರಾಷ್ಟ್ರೀಯ ಬಜರಂಗ ದಳದ ಕಾರ್ಯಾಧ್ಯಕ್ಷ ರೋಹನ್ ಸಕ್ಸೇನಾ ಹೇಳಿದ್ದಾರೆ.

ಅಸಲತ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶಹದೀನ್ ಖುರೇಷಿ ಅವರು ಪತ್ನಿ ರಿಝ್ವಾನಾ ಮತ್ತು ಮೂವರು ಪುತ್ರರಾದ ಆರಾಮ್ (13), ಆಶಿ (11) ಮತ್ತು ಇಬ್ಝಾನ್ (9) ಅವರನ್ನು ಅಗಲಿದ್ದಾರೆ. ಸೋಮವಾರ ರಾತ್ರಿ ಶಹದೀನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ, ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಲಾಗಿದೆ.

ಕೃಪೆ : timesofindia.indiatimes.com

ಇದನ್ನೂ ಓದಿ : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ : ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...