Homeಮುಖಪುಟಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

- Advertisement -
- Advertisement -

ಗೋಹತ್ಯೆ ಶಂಕೆ ಮೇಲೆ ಸ್ವಘೋಷಿತ ಗೋರಕ್ಷಕರ ಗುಂಪು ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದಲ್ಲಿ ಸೋಮವಾರ (ಡಿ.30) ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶಹದೀನ್ ಖುರೇಷಿ (37) ಎಂದು ಗುರುತಿಸಲಾಗಿದೆ. ಗುಂಪು ಹಲ್ಲೆಗೊಳಗಾದ ಶಹದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಹದೀನ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಮಂಗಳವಾರ ಆರೋಪಿಗಳೇ ಹರಿಬಿಟ್ಟಿರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ವಿಡಿಯೋದಲ್ಲಿ, ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ಶಹದೀನ್ ಅವರಿಗೆ ಒದಿಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯವಿದೆ. ನೆಲದಲ್ಲಿ ಬಿದ್ದಿರುವ ಶಹದೀನ್ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಶಹದೀನ್ ಅವರ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಶಹದೀನ್ ಅವರೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ವರದಿ ವಿವರಿಸಿದೆ.

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ. ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

ಮಾಂಸದ ಅಂಗಡಿ ನಡೆಸುತ್ತಿರುವ ಶಹದೀದ್ ಅವರ ಸಹೋದರ ಶಹಝಾದ್ ಮಾತನಾಡಿದ್ದು “ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯಾಪಾರಕ್ಕೂ ಆತನಿಗೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಆತನ ವಿರುದ್ಧ ಯಾವುದೇ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಒಂದು ವರ್ಷದ ಹಿಂದೆ, ಅನಾರೋಗ್ಯಕ್ಕೆ ಒಳಗಾಗಿದ್ದ ಶಹದೀನ್ ಶ್ವಾಸಕೋಶಗಳು ದುರ್ಬಲಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಸುಮಾರು ಆರು ತಿಂಗಳ ಕಾಲ ಕಳೆದಿದ್ದರು. ಈ ವೇಳೆ ಅವರ ಕೆಲಸ ಹೋಗಿತ್ತು. ನನ್ನ ಸಹೋದರ ಎಂದಿಗೂ ತಪ್ಪು ಕೆಲಸ ಮಾಡುವವನಲ್ಲ. ಇತರರು ಮಾಡಿರುವುದಕ್ಕೆ ಈತ ಬೆಲೆ ತೆತ್ತಿದ್ದಾನೆ” ಎಂದು ಹೇಳಿದ್ದಾಗಿ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಶಹದೀನ್ ಅವರ ಪತ್ನಿ ರಿಝ್ವಾನಾ ಮಾತನಾಡಿ, “ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ನನ್ನ ಪತಿ ಮನೆಯಲ್ಲಿ ಮಲಗಿದ್ದಾಗ, ಅವರ ಸ್ನೇಹಿತರು ಕರೆದುಕೊಂಡು ಹೋಗಿದ್ದರು. ಕೆಲ ಗಂಟೆಗಳ ನಂತರ, ಗುಂಪೊಂದು ಶಹದೀನ್ ಅವರನ್ನು ಹತ್ಯೆಗೈದಿರುವುದು ನಮಗೆ ತಿಳಿಯಿತು. ಅಪರಾಧಿಗಳು ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋಗಳಿದ್ದರೂ, ಪೊಲೀಸರು ಅಪರಿಚಿತರ ವಿರುದ್ದ ಎಫ್‌ಐಅರ್ ದಾಖಲಿಸಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾಗಿ ವರದಿ ಹೇಳಿದೆ.

“ನಮ್ಮ ಗುಂಪಿನ ಸದಸ್ಯರೂ ಆಗಿರುವ ಸ್ಥಳೀಯ ಅಂಗಡಿಯವರಿಂದ ಒಬ್ಬ ವ್ಯಕ್ತಿ ಗೋಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ನಮಗೆ ತಿಳಿಯಿತು. ಅವರನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದು, ಗೋವಿನ ಕಳೇಬರದೊಂದಿಗೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಹಸುವನ್ನು ಹತ್ಯೆ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ ಮತ್ತು ಪೊಲೀಸರು ನಮಗೆ ಕಠಿಣ ಕ್ರಮದ ಭರವಸೆ ನೀಡಿದ್ದಾರೆ” ಎಂದು ರಾಷ್ಟ್ರೀಯ ಬಜರಂಗ ದಳದ ಕಾರ್ಯಾಧ್ಯಕ್ಷ ರೋಹನ್ ಸಕ್ಸೇನಾ ಹೇಳಿದ್ದಾರೆ.

ಅಸಲತ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶಹದೀನ್ ಖುರೇಷಿ ಅವರು ಪತ್ನಿ ರಿಝ್ವಾನಾ ಮತ್ತು ಮೂವರು ಪುತ್ರರಾದ ಆರಾಮ್ (13), ಆಶಿ (11) ಮತ್ತು ಇಬ್ಝಾನ್ (9) ಅವರನ್ನು ಅಗಲಿದ್ದಾರೆ. ಸೋಮವಾರ ರಾತ್ರಿ ಶಹದೀನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ, ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಲಾಗಿದೆ.

ಕೃಪೆ : timesofindia.indiatimes.com

ಇದನ್ನೂ ಓದಿ : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ : ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...