Homeಮುಖಪುಟಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

- Advertisement -
- Advertisement -

ಗೋಹತ್ಯೆ ಶಂಕೆ ಮೇಲೆ ಸ್ವಘೋಷಿತ ಗೋರಕ್ಷಕರ ಗುಂಪು ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದಲ್ಲಿ ಸೋಮವಾರ (ಡಿ.30) ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶಹದೀನ್ ಖುರೇಷಿ (37) ಎಂದು ಗುರುತಿಸಲಾಗಿದೆ. ಗುಂಪು ಹಲ್ಲೆಗೊಳಗಾದ ಶಹದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಹದೀನ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಮಂಗಳವಾರ ಆರೋಪಿಗಳೇ ಹರಿಬಿಟ್ಟಿರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ವಿಡಿಯೋದಲ್ಲಿ, ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ಶಹದೀನ್ ಅವರಿಗೆ ಒದಿಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯವಿದೆ. ನೆಲದಲ್ಲಿ ಬಿದ್ದಿರುವ ಶಹದೀನ್ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಶಹದೀನ್ ಅವರ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಶಹದೀನ್ ಅವರೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ವರದಿ ವಿವರಿಸಿದೆ.

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ. ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

ಮಾಂಸದ ಅಂಗಡಿ ನಡೆಸುತ್ತಿರುವ ಶಹದೀದ್ ಅವರ ಸಹೋದರ ಶಹಝಾದ್ ಮಾತನಾಡಿದ್ದು “ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯಾಪಾರಕ್ಕೂ ಆತನಿಗೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಆತನ ವಿರುದ್ಧ ಯಾವುದೇ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಒಂದು ವರ್ಷದ ಹಿಂದೆ, ಅನಾರೋಗ್ಯಕ್ಕೆ ಒಳಗಾಗಿದ್ದ ಶಹದೀನ್ ಶ್ವಾಸಕೋಶಗಳು ದುರ್ಬಲಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಸುಮಾರು ಆರು ತಿಂಗಳ ಕಾಲ ಕಳೆದಿದ್ದರು. ಈ ವೇಳೆ ಅವರ ಕೆಲಸ ಹೋಗಿತ್ತು. ನನ್ನ ಸಹೋದರ ಎಂದಿಗೂ ತಪ್ಪು ಕೆಲಸ ಮಾಡುವವನಲ್ಲ. ಇತರರು ಮಾಡಿರುವುದಕ್ಕೆ ಈತ ಬೆಲೆ ತೆತ್ತಿದ್ದಾನೆ” ಎಂದು ಹೇಳಿದ್ದಾಗಿ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಶಹದೀನ್ ಅವರ ಪತ್ನಿ ರಿಝ್ವಾನಾ ಮಾತನಾಡಿ, “ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ನನ್ನ ಪತಿ ಮನೆಯಲ್ಲಿ ಮಲಗಿದ್ದಾಗ, ಅವರ ಸ್ನೇಹಿತರು ಕರೆದುಕೊಂಡು ಹೋಗಿದ್ದರು. ಕೆಲ ಗಂಟೆಗಳ ನಂತರ, ಗುಂಪೊಂದು ಶಹದೀನ್ ಅವರನ್ನು ಹತ್ಯೆಗೈದಿರುವುದು ನಮಗೆ ತಿಳಿಯಿತು. ಅಪರಾಧಿಗಳು ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋಗಳಿದ್ದರೂ, ಪೊಲೀಸರು ಅಪರಿಚಿತರ ವಿರುದ್ದ ಎಫ್‌ಐಅರ್ ದಾಖಲಿಸಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾಗಿ ವರದಿ ಹೇಳಿದೆ.

“ನಮ್ಮ ಗುಂಪಿನ ಸದಸ್ಯರೂ ಆಗಿರುವ ಸ್ಥಳೀಯ ಅಂಗಡಿಯವರಿಂದ ಒಬ್ಬ ವ್ಯಕ್ತಿ ಗೋಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ನಮಗೆ ತಿಳಿಯಿತು. ಅವರನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದು, ಗೋವಿನ ಕಳೇಬರದೊಂದಿಗೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಹಸುವನ್ನು ಹತ್ಯೆ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ ಮತ್ತು ಪೊಲೀಸರು ನಮಗೆ ಕಠಿಣ ಕ್ರಮದ ಭರವಸೆ ನೀಡಿದ್ದಾರೆ” ಎಂದು ರಾಷ್ಟ್ರೀಯ ಬಜರಂಗ ದಳದ ಕಾರ್ಯಾಧ್ಯಕ್ಷ ರೋಹನ್ ಸಕ್ಸೇನಾ ಹೇಳಿದ್ದಾರೆ.

ಅಸಲತ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶಹದೀನ್ ಖುರೇಷಿ ಅವರು ಪತ್ನಿ ರಿಝ್ವಾನಾ ಮತ್ತು ಮೂವರು ಪುತ್ರರಾದ ಆರಾಮ್ (13), ಆಶಿ (11) ಮತ್ತು ಇಬ್ಝಾನ್ (9) ಅವರನ್ನು ಅಗಲಿದ್ದಾರೆ. ಸೋಮವಾರ ರಾತ್ರಿ ಶಹದೀನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ, ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಲಾಗಿದೆ.

ಕೃಪೆ : timesofindia.indiatimes.com

ಇದನ್ನೂ ಓದಿ : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ : ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...