Homeಮುಖಪುಟಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

- Advertisement -
- Advertisement -

ಗೋಹತ್ಯೆ ಶಂಕೆ ಮೇಲೆ ಸ್ವಘೋಷಿತ ಗೋರಕ್ಷಕರ ಗುಂಪು ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದಲ್ಲಿ ಸೋಮವಾರ (ಡಿ.30) ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶಹದೀನ್ ಖುರೇಷಿ (37) ಎಂದು ಗುರುತಿಸಲಾಗಿದೆ. ಗುಂಪು ಹಲ್ಲೆಗೊಳಗಾದ ಶಹದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಹದೀನ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಮಂಗಳವಾರ ಆರೋಪಿಗಳೇ ಹರಿಬಿಟ್ಟಿರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ವಿಡಿಯೋದಲ್ಲಿ, ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ಶಹದೀನ್ ಅವರಿಗೆ ಒದಿಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯವಿದೆ. ನೆಲದಲ್ಲಿ ಬಿದ್ದಿರುವ ಶಹದೀನ್ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಶಹದೀನ್ ಅವರ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಶಹದೀನ್ ಅವರೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ವರದಿ ವಿವರಿಸಿದೆ.

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ. ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

ಮಾಂಸದ ಅಂಗಡಿ ನಡೆಸುತ್ತಿರುವ ಶಹದೀದ್ ಅವರ ಸಹೋದರ ಶಹಝಾದ್ ಮಾತನಾಡಿದ್ದು “ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯಾಪಾರಕ್ಕೂ ಆತನಿಗೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಆತನ ವಿರುದ್ಧ ಯಾವುದೇ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಒಂದು ವರ್ಷದ ಹಿಂದೆ, ಅನಾರೋಗ್ಯಕ್ಕೆ ಒಳಗಾಗಿದ್ದ ಶಹದೀನ್ ಶ್ವಾಸಕೋಶಗಳು ದುರ್ಬಲಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಸುಮಾರು ಆರು ತಿಂಗಳ ಕಾಲ ಕಳೆದಿದ್ದರು. ಈ ವೇಳೆ ಅವರ ಕೆಲಸ ಹೋಗಿತ್ತು. ನನ್ನ ಸಹೋದರ ಎಂದಿಗೂ ತಪ್ಪು ಕೆಲಸ ಮಾಡುವವನಲ್ಲ. ಇತರರು ಮಾಡಿರುವುದಕ್ಕೆ ಈತ ಬೆಲೆ ತೆತ್ತಿದ್ದಾನೆ” ಎಂದು ಹೇಳಿದ್ದಾಗಿ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಶಹದೀನ್ ಅವರ ಪತ್ನಿ ರಿಝ್ವಾನಾ ಮಾತನಾಡಿ, “ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ನನ್ನ ಪತಿ ಮನೆಯಲ್ಲಿ ಮಲಗಿದ್ದಾಗ, ಅವರ ಸ್ನೇಹಿತರು ಕರೆದುಕೊಂಡು ಹೋಗಿದ್ದರು. ಕೆಲ ಗಂಟೆಗಳ ನಂತರ, ಗುಂಪೊಂದು ಶಹದೀನ್ ಅವರನ್ನು ಹತ್ಯೆಗೈದಿರುವುದು ನಮಗೆ ತಿಳಿಯಿತು. ಅಪರಾಧಿಗಳು ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋಗಳಿದ್ದರೂ, ಪೊಲೀಸರು ಅಪರಿಚಿತರ ವಿರುದ್ದ ಎಫ್‌ಐಅರ್ ದಾಖಲಿಸಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾಗಿ ವರದಿ ಹೇಳಿದೆ.

“ನಮ್ಮ ಗುಂಪಿನ ಸದಸ್ಯರೂ ಆಗಿರುವ ಸ್ಥಳೀಯ ಅಂಗಡಿಯವರಿಂದ ಒಬ್ಬ ವ್ಯಕ್ತಿ ಗೋಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ನಮಗೆ ತಿಳಿಯಿತು. ಅವರನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದು, ಗೋವಿನ ಕಳೇಬರದೊಂದಿಗೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಹಸುವನ್ನು ಹತ್ಯೆ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ ಮತ್ತು ಪೊಲೀಸರು ನಮಗೆ ಕಠಿಣ ಕ್ರಮದ ಭರವಸೆ ನೀಡಿದ್ದಾರೆ” ಎಂದು ರಾಷ್ಟ್ರೀಯ ಬಜರಂಗ ದಳದ ಕಾರ್ಯಾಧ್ಯಕ್ಷ ರೋಹನ್ ಸಕ್ಸೇನಾ ಹೇಳಿದ್ದಾರೆ.

ಅಸಲತ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶಹದೀನ್ ಖುರೇಷಿ ಅವರು ಪತ್ನಿ ರಿಝ್ವಾನಾ ಮತ್ತು ಮೂವರು ಪುತ್ರರಾದ ಆರಾಮ್ (13), ಆಶಿ (11) ಮತ್ತು ಇಬ್ಝಾನ್ (9) ಅವರನ್ನು ಅಗಲಿದ್ದಾರೆ. ಸೋಮವಾರ ರಾತ್ರಿ ಶಹದೀನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ, ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಲಾಗಿದೆ.

ಕೃಪೆ : timesofindia.indiatimes.com

ಇದನ್ನೂ ಓದಿ : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ : ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...