Homeಮುಖಪುಟಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ...

ಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ ಹೋದ ವ್ಯಕ್ತಿ!

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿ ಹೆಚ್ಚಳವಾಗಿದೆ. ಸಾಮಾಜಿಕ ಮಾದ್ಯಮಗಳಲ್ಲಿ ಯಾರ್ಯಾರೋ ಸುಳ್ಳು ಸುದ್ದಿಗಳನ್ನು ಹಬ್ಬುತ್ತಾರೆ, ಆದರೆ ಸಮಾಜದ ಮೇಲೆ ಜವಾಬ್ಧಾರಿ ಇರುವ ಪತ್ರಿಕೆ, ಟಿವಿ, ವೆಬ್‌ ಮಾದ್ಯಮಗಳಲ್ಲೂ ಇತ್ತೀಚೆಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವುದು, ಪ್ರಕಟಿಸುವುದು, ಸಣ್ಣ ಸುದ್ದಿಗೆ ವಿಭಿನ್ನ ಬಣ್ಣ ಹಚ್ಚಿ ವೈಭವೀಕರಿಸುವುದು ಕಂಡು ಬರುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ ಉತ್ತಪ್ರದೇಶದಲ್ಲಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೋರ್ವ ‘ನನ್ನ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ ಮಾದ್ಯಮವನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ’ ಎಂದು ಮ್ಯಾಜಿಸ್ಟ್ರೇಟ್‌ ಮೊರೆ ಹೋಗಿದ್ದಾರೆ.

ತನ್ನ ವಿರುದ್ಧ ಮಾನಹಾನಿಕಾರಕ ಮತ್ತು ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿದ ಉತ್ತರಪ್ರದೇಶದ ಪ್ರತಾಪ್‌ಗಢದ ನಿವಾಸಿ ಪ್ರತೀಕ್ ಸಿನ್ಹಾ, ಪತ್ರಿಕೆಯೊಂದರ  ಕಚೇರಿಯ ಮುಂದೆ ಮೈಕ್‌ ಮೂಲಕ ನಿಂದಿಸಲು ಅನುಮತಿ ಕೊಡಿ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದಾರೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರದಲ್ಲಿ, ಜನವರಿ 15ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕೆ ಕಚೇರಿಯ ಹೊರಗಡೆ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೇಳುತ್ತೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಉತ್ತರಪ್ರದೇಶದ ಇತಿಹಾಸದಲ್ಲಿ ವ್ಯಕ್ತಿಯೋರ್ವರು ಮೊದಲ ಬಾರಿಗೆ ತನ್ನ ವಿರುದ್ಧ ಪತ್ರಿಕೆ ಮಾಡಿರುವ ವರದಿಯೊಂದರ ವಿರುದ್ಧ ಈ ರೀತಿ ಪ್ರತಿಭಟಿಸಲು ಅವಕಾಶವನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ದಿನಪತ್ರಿಕೆಯೊಂದರ ಲೇಖನವು ಪ್ರತೀಕ್ ಸಿನ್ಹಾ ಅವರನ್ನು ಭೂಕಬಳಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದೆ. ನಿಂದನೆಗೆ ಅವಕಾಶ ಕೋರುವ ಮೊದಲು ಅವರು ಪತ್ರಿಕಾ ಕಚೇರಿಗೆ ಮಾನನಷ್ಟದ ಕುರಿತು ನೊಟೀಸ್‌ನ್ನು ಕೂಡ ಕಳುಹಿಸಿದ್ದಾರೆ.

ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಯಾವುದೇ ಕಾರಣವಿಲ್ಲದೆ ಜನವರಿ 9ರಂದು ತನ್ನ ಜಮೀನಿನಲ್ಲಿ ಬುಲ್ಡೋಜರ್ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರತೀಕ್ ಸಿನ್ಹಾ ಉಲ್ಲೇಖಿಸಿದ್ದಾರೆ. ಇದನ್ನು ಉಲ್ಲೇಖಿಸಿ ಪತ್ರಿಕೆ ಅವನನ್ನು “ಮಾಫಿಯಾ” ಎಂದು ಕರೆದಿದೆ. ಪತ್ರಿಕೆಯಲ್ಲಿ ಬಂದಿರುವ ಲೇಖನ ಸಾಕ್ಷ್ಯಾಧಾರಗಳ ಕೊರತೆಯಿಂದ ಕೂಡಿದೆ ಮತ್ತು ತನ್ನ ಪ್ರತಿಷ್ಠೆಗೆ ಧಕ್ಕೆ ತಂದಿದೆ. ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೊಡಿ. ನಾನು ಬೇರೆ ಯಾವುದೇ ರೀತಿಯ ಹಿಂಸಾಚಾರ ನಡೆಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ ಎಂದು ವಿನಂತಿ ಪತ್ರದಲ್ಲಿ ಪ್ರತೀಕ್ ಸಿನ್ಹಾ ಹೇಳಿದ್ದಾರೆ.

 

ಇದನ್ನು ಓದಿ:‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...