Homeಮುಖಪುಟಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ...

ಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ ಹೋದ ವ್ಯಕ್ತಿ!

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿ ಹೆಚ್ಚಳವಾಗಿದೆ. ಸಾಮಾಜಿಕ ಮಾದ್ಯಮಗಳಲ್ಲಿ ಯಾರ್ಯಾರೋ ಸುಳ್ಳು ಸುದ್ದಿಗಳನ್ನು ಹಬ್ಬುತ್ತಾರೆ, ಆದರೆ ಸಮಾಜದ ಮೇಲೆ ಜವಾಬ್ಧಾರಿ ಇರುವ ಪತ್ರಿಕೆ, ಟಿವಿ, ವೆಬ್‌ ಮಾದ್ಯಮಗಳಲ್ಲೂ ಇತ್ತೀಚೆಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವುದು, ಪ್ರಕಟಿಸುವುದು, ಸಣ್ಣ ಸುದ್ದಿಗೆ ವಿಭಿನ್ನ ಬಣ್ಣ ಹಚ್ಚಿ ವೈಭವೀಕರಿಸುವುದು ಕಂಡು ಬರುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ ಉತ್ತಪ್ರದೇಶದಲ್ಲಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೋರ್ವ ‘ನನ್ನ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ ಮಾದ್ಯಮವನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ’ ಎಂದು ಮ್ಯಾಜಿಸ್ಟ್ರೇಟ್‌ ಮೊರೆ ಹೋಗಿದ್ದಾರೆ.

ತನ್ನ ವಿರುದ್ಧ ಮಾನಹಾನಿಕಾರಕ ಮತ್ತು ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿದ ಉತ್ತರಪ್ರದೇಶದ ಪ್ರತಾಪ್‌ಗಢದ ನಿವಾಸಿ ಪ್ರತೀಕ್ ಸಿನ್ಹಾ, ಪತ್ರಿಕೆಯೊಂದರ  ಕಚೇರಿಯ ಮುಂದೆ ಮೈಕ್‌ ಮೂಲಕ ನಿಂದಿಸಲು ಅನುಮತಿ ಕೊಡಿ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದಾರೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರದಲ್ಲಿ, ಜನವರಿ 15ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕೆ ಕಚೇರಿಯ ಹೊರಗಡೆ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೇಳುತ್ತೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಉತ್ತರಪ್ರದೇಶದ ಇತಿಹಾಸದಲ್ಲಿ ವ್ಯಕ್ತಿಯೋರ್ವರು ಮೊದಲ ಬಾರಿಗೆ ತನ್ನ ವಿರುದ್ಧ ಪತ್ರಿಕೆ ಮಾಡಿರುವ ವರದಿಯೊಂದರ ವಿರುದ್ಧ ಈ ರೀತಿ ಪ್ರತಿಭಟಿಸಲು ಅವಕಾಶವನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ದಿನಪತ್ರಿಕೆಯೊಂದರ ಲೇಖನವು ಪ್ರತೀಕ್ ಸಿನ್ಹಾ ಅವರನ್ನು ಭೂಕಬಳಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದೆ. ನಿಂದನೆಗೆ ಅವಕಾಶ ಕೋರುವ ಮೊದಲು ಅವರು ಪತ್ರಿಕಾ ಕಚೇರಿಗೆ ಮಾನನಷ್ಟದ ಕುರಿತು ನೊಟೀಸ್‌ನ್ನು ಕೂಡ ಕಳುಹಿಸಿದ್ದಾರೆ.

ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಯಾವುದೇ ಕಾರಣವಿಲ್ಲದೆ ಜನವರಿ 9ರಂದು ತನ್ನ ಜಮೀನಿನಲ್ಲಿ ಬುಲ್ಡೋಜರ್ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರತೀಕ್ ಸಿನ್ಹಾ ಉಲ್ಲೇಖಿಸಿದ್ದಾರೆ. ಇದನ್ನು ಉಲ್ಲೇಖಿಸಿ ಪತ್ರಿಕೆ ಅವನನ್ನು “ಮಾಫಿಯಾ” ಎಂದು ಕರೆದಿದೆ. ಪತ್ರಿಕೆಯಲ್ಲಿ ಬಂದಿರುವ ಲೇಖನ ಸಾಕ್ಷ್ಯಾಧಾರಗಳ ಕೊರತೆಯಿಂದ ಕೂಡಿದೆ ಮತ್ತು ತನ್ನ ಪ್ರತಿಷ್ಠೆಗೆ ಧಕ್ಕೆ ತಂದಿದೆ. ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೊಡಿ. ನಾನು ಬೇರೆ ಯಾವುದೇ ರೀತಿಯ ಹಿಂಸಾಚಾರ ನಡೆಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ ಎಂದು ವಿನಂತಿ ಪತ್ರದಲ್ಲಿ ಪ್ರತೀಕ್ ಸಿನ್ಹಾ ಹೇಳಿದ್ದಾರೆ.

 

ಇದನ್ನು ಓದಿ:‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...