Homeಮುಖಪುಟಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ...

ಪತ್ರಿಕೆ ಕಚೇರಿ ಬಳಿ ಮೈಕ್‌ನಲ್ಲಿ ಪತ್ರಕರ್ತರನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ: ಮ್ಯಾಜಿಸ್ಟ್ರೇಟ್‌ ಮೊರೆ ಹೋದ ವ್ಯಕ್ತಿ!

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗಿ ಹೆಚ್ಚಳವಾಗಿದೆ. ಸಾಮಾಜಿಕ ಮಾದ್ಯಮಗಳಲ್ಲಿ ಯಾರ್ಯಾರೋ ಸುಳ್ಳು ಸುದ್ದಿಗಳನ್ನು ಹಬ್ಬುತ್ತಾರೆ, ಆದರೆ ಸಮಾಜದ ಮೇಲೆ ಜವಾಬ್ಧಾರಿ ಇರುವ ಪತ್ರಿಕೆ, ಟಿವಿ, ವೆಬ್‌ ಮಾದ್ಯಮಗಳಲ್ಲೂ ಇತ್ತೀಚೆಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವುದು, ಪ್ರಕಟಿಸುವುದು, ಸಣ್ಣ ಸುದ್ದಿಗೆ ವಿಭಿನ್ನ ಬಣ್ಣ ಹಚ್ಚಿ ವೈಭವೀಕರಿಸುವುದು ಕಂಡು ಬರುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ ಉತ್ತಪ್ರದೇಶದಲ್ಲಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೋರ್ವ ‘ನನ್ನ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿದ ಮಾದ್ಯಮವನ್ನು ನಿಂದಿಸಲು 2 ಗಂಟೆ ಅವಕಾಶ ಕೊಡಿ’ ಎಂದು ಮ್ಯಾಜಿಸ್ಟ್ರೇಟ್‌ ಮೊರೆ ಹೋಗಿದ್ದಾರೆ.

ತನ್ನ ವಿರುದ್ಧ ಮಾನಹಾನಿಕಾರಕ ಮತ್ತು ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿದ ಉತ್ತರಪ್ರದೇಶದ ಪ್ರತಾಪ್‌ಗಢದ ನಿವಾಸಿ ಪ್ರತೀಕ್ ಸಿನ್ಹಾ, ಪತ್ರಿಕೆಯೊಂದರ  ಕಚೇರಿಯ ಮುಂದೆ ಮೈಕ್‌ ಮೂಲಕ ನಿಂದಿಸಲು ಅನುಮತಿ ಕೊಡಿ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದಾರೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರದಲ್ಲಿ, ಜನವರಿ 15ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕೆ ಕಚೇರಿಯ ಹೊರಗಡೆ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೇಳುತ್ತೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಉತ್ತರಪ್ರದೇಶದ ಇತಿಹಾಸದಲ್ಲಿ ವ್ಯಕ್ತಿಯೋರ್ವರು ಮೊದಲ ಬಾರಿಗೆ ತನ್ನ ವಿರುದ್ಧ ಪತ್ರಿಕೆ ಮಾಡಿರುವ ವರದಿಯೊಂದರ ವಿರುದ್ಧ ಈ ರೀತಿ ಪ್ರತಿಭಟಿಸಲು ಅವಕಾಶವನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ದಿನಪತ್ರಿಕೆಯೊಂದರ ಲೇಖನವು ಪ್ರತೀಕ್ ಸಿನ್ಹಾ ಅವರನ್ನು ಭೂಕಬಳಿಕೆಯಲ್ಲಿ ತೊಡಗಿದೆ ಎಂದು ಆರೋಪಿಸಿದೆ. ನಿಂದನೆಗೆ ಅವಕಾಶ ಕೋರುವ ಮೊದಲು ಅವರು ಪತ್ರಿಕಾ ಕಚೇರಿಗೆ ಮಾನನಷ್ಟದ ಕುರಿತು ನೊಟೀಸ್‌ನ್ನು ಕೂಡ ಕಳುಹಿಸಿದ್ದಾರೆ.

ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಯಾವುದೇ ಕಾರಣವಿಲ್ಲದೆ ಜನವರಿ 9ರಂದು ತನ್ನ ಜಮೀನಿನಲ್ಲಿ ಬುಲ್ಡೋಜರ್ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರತೀಕ್ ಸಿನ್ಹಾ ಉಲ್ಲೇಖಿಸಿದ್ದಾರೆ. ಇದನ್ನು ಉಲ್ಲೇಖಿಸಿ ಪತ್ರಿಕೆ ಅವನನ್ನು “ಮಾಫಿಯಾ” ಎಂದು ಕರೆದಿದೆ. ಪತ್ರಿಕೆಯಲ್ಲಿ ಬಂದಿರುವ ಲೇಖನ ಸಾಕ್ಷ್ಯಾಧಾರಗಳ ಕೊರತೆಯಿಂದ ಕೂಡಿದೆ ಮತ್ತು ತನ್ನ ಪ್ರತಿಷ್ಠೆಗೆ ಧಕ್ಕೆ ತಂದಿದೆ. ಪತ್ರಿಕೆಯ ಬ್ಯೂರೋ ಮುಖ್ಯಸ್ಥ ಮತ್ತು ವರದಿಗಾರರನ್ನು ಎರಡು ಗಂಟೆಗಳ ಕಾಲ ನಿಂದಿಸಲು ಅನುಮತಿ ಕೊಡಿ. ನಾನು ಬೇರೆ ಯಾವುದೇ ರೀತಿಯ ಹಿಂಸಾಚಾರ ನಡೆಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ ಎಂದು ವಿನಂತಿ ಪತ್ರದಲ್ಲಿ ಪ್ರತೀಕ್ ಸಿನ್ಹಾ ಹೇಳಿದ್ದಾರೆ.

 

ಇದನ್ನು ಓದಿ:‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...