Homeಮುಖಪುಟಉತ್ತರಪ್ರದೇಶದಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಸಜೀವ ದಹನ!

ಉತ್ತರಪ್ರದೇಶದಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಸಜೀವ ದಹನ!

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪಗಡ ಜಿಲ್ಲೆಯಲ್ಲಿ 22 ವರ್ಷದ ಯುವಕನನ್ನು ನೆರೆಹೊರೆಯವರು ಸೇರಿಕೊಂಡು ಮರಕ್ಕೆ ಕಟ್ಟಿ ಸೋಮವಾರ ರಾತ್ರಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ನೆರೆಯ ಮನೆಯ ಯುವತಿಯೊಂದಿಗೆ ಸಂಬಂಧ ಹೊಂದಿದ್ದಕ್ಕೆ ಕೋಪಗೊಂಡ ಜನರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ವರದಿಗಳು ಹೇಳುವಂತೆ ಯುವಕನಿಗೆ ಬೆಂಕಿ ಹಚ್ಚುವ ಮೊದಲು, ಯುವಕನ ಮನೆಗೆ ನುಗ್ಗಿದ ಹಲವಾರು ಜನರು, ಅವನನ್ನು ಹೊರಗೆ ಎಳೆದು ಥಳಿಸಿ, ಮರಕ್ಕೆ ಕಟ್ಟಿದ್ದರು ಎಂದಿದೆ.

ಗ್ರಾಮಸ್ಥರ ಗುಂಪೊಂದು ಘಟನೆಯ ನಂತರ ಹಳ್ಳಿಗೆ ಬಂದ ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿ ಎರಡು ವಾಹನಗಳು ಮತ್ತು ಮೋಟಾರ್ ಸೈಕಲ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಹತ್ಯೆಗೀಡಾದ ಯುವಕನನ್ನು ಅಂಬಿಕಾ ಪ್ರಸಾದ್ ಪಟೇಲ್ (22) ಎಂದು ಗುರುತಿಸಲಾಗಿದ್ದು, ಕಳೆದ ಒಂದು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎಂದು ವರದಿಯಾಗಿದೆ. ಆದರೆ, ಯುವತಿಯ ಕುಟುಂಬ ಇದಕ್ಕೆ ವಿರುದ್ಧವಾಗಿತ್ತು. ಕೆಲವು ತಿಂಗಳ ಹಿಂದೆ ಯುವತಿಯೂ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗೆ ಆಯ್ಕೆಯಾಗಿ ಕಾನ್ಪುರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆದರೆ ಕೆಲವು ವಾರಗಳ ಹಿಂದೆ, ಅವರಿಬ್ಬರ ಆತ್ಮೀಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

“ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಯುವತಿ ಹಾಗೂ ಆಕೆಯ ಪೋಷಕರು ಅಂಬಿಕಾ ಪಟೇಲ್ ಅವರನ್ನು ನಿಂದಿಸಿದ್ದರು. ಯುವತಿಯ ಮುಗ್ದತೆಯನ್ನು ಬಲತ್ಕಾರ ಮಾಡಲು ಬಳಸಿದ್ದಕ್ಕಾಗಿ ಪಟೇಲ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಕೂಡಾ ದಾಖಲಿಸಲಾಗಿತ್ತು. ಈಗ ನೆರೆಯ ಕೆಲವು ಜನರು ಅವರನ್ನು ಜೀವಂತ ಸುಟ್ಟುಹಾಕಲಾಗಿದೆ” ಎಂದು ಪ್ರತಾಪಗಡದ ಪೊಲೀಸ್ ಮುಖ್ಯಸ್ಥ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ತನ್ನ ಮೇಲೆ ಪ್ರಕರಣ ದಾಖಲಾದ ನಂತರ ಅಂಬಿಕಾ ಪ್ರಸಾದ್ ಪಟೇಲ್ ಜೈಲಿಗೆ ಹೋಗಿದ್ದರು, ಆದರೆ ಮೇ 1 ರಂದು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಕೊರೊನಾ ಹಿನ್ನಲೆಯಲ್ಲಿ 71 ಜೈಲುಗಳಲ್ಲಿ ದಾಖಲಾದ 11,000 ಕೈದಿಗಳನ್ನು ಮುಕ್ತಗೊಳಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿತ್ತು.

ಯುವತಿಯ ತಂದೆ ಸೇರಿದಂತೆ ಅಪರಾಧದಲ್ಲಿ ಭಾಗವಹಿಸಿದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  ಪಟೇಲ್ ಅವರ ಅರ್ಧ ಸುಟ್ಟ ಶವವನ್ನು ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಗ್ರಾಮದಲ್ಲಿ ಭಾರಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ.


ಓದಿ: ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...