Homeಮುಖಪುಟಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ತ್ಯಾಗಿ ಸಮುದಾಯ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

- Advertisement -
- Advertisement -

ಕೆಲವು ದಿನಗಳ ಹಿಂದೆ ಮಹಿಳೆಯನ್ನು ನಿಂದಿಸಿ, ಅಸಭ್ಯವಾಗಿ ವರ್ತಿಸಿ, ಪೊಲೀಸ್‌ ವಿಚಾರಣೆಗೆ ಒಳಪಟ್ಟಿರುವ ಹಾಗೂ ಬಿಜೆಪಿ ನಾಯಕ ಎಂದೇ ಗುರುತಿಸಿಕೊಂಡಿರುವ ಶ್ರೀಕಾಂತ್ ತ್ಯಾಗಿಯನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆದಿದೆ.

ದೆಹಲಿ ಸಮೀಪದ ನೋಯ್ಡಾದಲ್ಲಿ ಬೃಹತ್ ರ್ಯಾಲಿಯನ್ನು ತ್ಯಾಗಿ ಸಮುದಾಯ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

ಶ್ರೀಕಾಂತ್ ತ್ಯಾಗಿ ಆಡಳಿತರೂಢ ಬಿಜೆಪಿಯ ಸದಸ್ಯನಲ್ಲ ಎಂದು ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಗೌತಮ್ ಬುದ್ಧ ನಗರ ಸಂಸದರ ವಿರುದ್ಧ ತ್ಯಾಗಿ ಸಮುದಾಯವು ಅಸಮಾಧಾನ ಹೊರಹಾಕಿದೆ. ಆದರೆ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಮಹೇಶ್‌ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್‌ ತಿಂಗಳ ಮೊದಲ ವಾರ ಗ್ರಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಮೌನ ಪ್ರತಿಭಟನೆ ನಡೆಸಿದಾಗ ಬಳಸಲಾದ ಪೋಸ್ಟರ್‌ಗಳು ವಿವಾದಕ್ಕೆ ಕಾರಣವಾಗಿವೆ. ಆ ಪೋಸ್ಟರ್‌ಗಳಲ್ಲಿ ತ್ಯಾಗ ಸಮುದಾಯಕ್ಕೆ ಚ್ಯುತಿ ತರಲಾಗಿದೆ ಎಂದು ಆರೋಪಿಸಲಾಗಿದೆ.

ಶ್ರೀಕಾಂತ್ ತ್ಯಾಗಿ ಅವರನ್ನು ಬೆಂಬಲಿಸಿ ಸಂಯುಕ್ತ ತ್ಯಾಗಿ ಸ್ವಾಭಿಮಾನ್ ಮೋರ್ಚಾ ಆಯೋಜಿಸಿದ್ದ ಪ್ರತಿಭಟನಾ ಸಭೆಯು ಗೆಜ್ಜಾ ಗ್ರಾಮದ ರಾಮಲೀಲಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ತ್ಯಾಗಿ ಸಮುದಾಯದ ನೂರಾರು ಮಂದಿ ಇಲ್ಲಿಗೆ ಆಗಮಿಸಿದ್ದರು.

ಶ್ರೀಕಾಂತ್ ತ್ಯಾಗಿ ಅವರು ಮಾಡಿರುವ ಹಿಂಸೆ ಹಾಗೂ ನಿಂದನೆಗಳಿಗೆ ಸಂಬಂಧಿಸಿದಂತೆ ಶಿಕ್ಷೆಯಾಗಲಿ. ಆದರೆ ಅವರ ಪತ್ನಿ ಮತ್ತು ಚಿಕ್ಕಮ್ಮನನ್ನು ಪೊಲೀಸ್ ಠಾಣೆಗೆ ಕರೆಸಿರುವುದು ತಪ್ಪು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಪೊಲೀಸರು ಶ್ರೀಕಾಂತ್ ಅವರ ಚಿಕ್ಕಮ್ಮನನ್ನು ಜೀಪ್‌ನಲ್ಲಿ ಕರೆದೊಯ್ದು ನಾಲ್ಕು ದಿನಗಳ ಕಾಲ ಪಶ್ಚಿಮ ಯುಪಿಯಲ್ಲಿ ಸುತ್ತಾಡಿದರು. ಇದು ಅಮಾನವೀಯ ನಡೆ” ಎಂದು ರಾಷ್ಟ್ರೀಯ ಲೋಕದಳದ ಪ್ರಧಾನ ಕಾರ್ಯದರ್ಶಿ ತ್ರಿಲೋಕ್ ತ್ಯಾಗಿ ಹೇಳಿದ್ದಾರೆ.

ತ್ಯಾಗಿ ಅವರು ಸಮಾಜದ ನಿಯಮಗಳಿಗೆ ಬದ್ಧರಾಗಿದ್ದರೆ ಮತ್ತು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸದಿದ್ದರೆ ಸಮಸ್ಯೆ ದೊಡ್ಡದಾಗುತ್ತಿರಲಿಲ್ಲ ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಹೇಳಿದ್ದಾರೆ.

“ಸಮಾಜದ ನಿಯಮಗಳನ್ನು ಉಲ್ಲಂಘಿಸಿದ್ದು ಅವರ ಮೊದಲ ತಪ್ಪು. ಎರಡನೆಯದಾಗಿ, ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರು ಬಳಸಿದ ಭಾಷೆ ಸಮಸ್ಯೆಯನ್ನು ದೊಡ್ಡದಾಗಿಸಿತು” ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಪ್ರಧಾನ ಕಾರ್ಯದರ್ಶಿ ಮಹಿಮಾ ಜೋಶಿ ಹೇಳಿದ್ದಾರೆ.

ತಮ್ಮ ಪ್ರತಿಭಟನೆ ಕೇವಲ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧವೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಶ್ರೀಕಾಂತ್‌ ತ್ಯಾಗಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ದಾಖಲಾದ ಬಳಿಕ ಆತ ಪರಾರಿಯಾಗಿದ್ದನು.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ್ದರು. ಬಳಿಕ ತ್ಯಾಗಿ ಸಿಕ್ಕಿಬಿದ್ದಿದ್ದನು.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...