Homeಮುಖಪುಟಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ತ್ಯಾಗಿ ಸಮುದಾಯ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

- Advertisement -
- Advertisement -

ಕೆಲವು ದಿನಗಳ ಹಿಂದೆ ಮಹಿಳೆಯನ್ನು ನಿಂದಿಸಿ, ಅಸಭ್ಯವಾಗಿ ವರ್ತಿಸಿ, ಪೊಲೀಸ್‌ ವಿಚಾರಣೆಗೆ ಒಳಪಟ್ಟಿರುವ ಹಾಗೂ ಬಿಜೆಪಿ ನಾಯಕ ಎಂದೇ ಗುರುತಿಸಿಕೊಂಡಿರುವ ಶ್ರೀಕಾಂತ್ ತ್ಯಾಗಿಯನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆದಿದೆ.

ದೆಹಲಿ ಸಮೀಪದ ನೋಯ್ಡಾದಲ್ಲಿ ಬೃಹತ್ ರ್ಯಾಲಿಯನ್ನು ತ್ಯಾಗಿ ಸಮುದಾಯ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

ಶ್ರೀಕಾಂತ್ ತ್ಯಾಗಿ ಆಡಳಿತರೂಢ ಬಿಜೆಪಿಯ ಸದಸ್ಯನಲ್ಲ ಎಂದು ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಗೌತಮ್ ಬುದ್ಧ ನಗರ ಸಂಸದರ ವಿರುದ್ಧ ತ್ಯಾಗಿ ಸಮುದಾಯವು ಅಸಮಾಧಾನ ಹೊರಹಾಕಿದೆ. ಆದರೆ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಮಹೇಶ್‌ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್‌ ತಿಂಗಳ ಮೊದಲ ವಾರ ಗ್ರಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಮೌನ ಪ್ರತಿಭಟನೆ ನಡೆಸಿದಾಗ ಬಳಸಲಾದ ಪೋಸ್ಟರ್‌ಗಳು ವಿವಾದಕ್ಕೆ ಕಾರಣವಾಗಿವೆ. ಆ ಪೋಸ್ಟರ್‌ಗಳಲ್ಲಿ ತ್ಯಾಗ ಸಮುದಾಯಕ್ಕೆ ಚ್ಯುತಿ ತರಲಾಗಿದೆ ಎಂದು ಆರೋಪಿಸಲಾಗಿದೆ.

ಶ್ರೀಕಾಂತ್ ತ್ಯಾಗಿ ಅವರನ್ನು ಬೆಂಬಲಿಸಿ ಸಂಯುಕ್ತ ತ್ಯಾಗಿ ಸ್ವಾಭಿಮಾನ್ ಮೋರ್ಚಾ ಆಯೋಜಿಸಿದ್ದ ಪ್ರತಿಭಟನಾ ಸಭೆಯು ಗೆಜ್ಜಾ ಗ್ರಾಮದ ರಾಮಲೀಲಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ತ್ಯಾಗಿ ಸಮುದಾಯದ ನೂರಾರು ಮಂದಿ ಇಲ್ಲಿಗೆ ಆಗಮಿಸಿದ್ದರು.

ಶ್ರೀಕಾಂತ್ ತ್ಯಾಗಿ ಅವರು ಮಾಡಿರುವ ಹಿಂಸೆ ಹಾಗೂ ನಿಂದನೆಗಳಿಗೆ ಸಂಬಂಧಿಸಿದಂತೆ ಶಿಕ್ಷೆಯಾಗಲಿ. ಆದರೆ ಅವರ ಪತ್ನಿ ಮತ್ತು ಚಿಕ್ಕಮ್ಮನನ್ನು ಪೊಲೀಸ್ ಠಾಣೆಗೆ ಕರೆಸಿರುವುದು ತಪ್ಪು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಪೊಲೀಸರು ಶ್ರೀಕಾಂತ್ ಅವರ ಚಿಕ್ಕಮ್ಮನನ್ನು ಜೀಪ್‌ನಲ್ಲಿ ಕರೆದೊಯ್ದು ನಾಲ್ಕು ದಿನಗಳ ಕಾಲ ಪಶ್ಚಿಮ ಯುಪಿಯಲ್ಲಿ ಸುತ್ತಾಡಿದರು. ಇದು ಅಮಾನವೀಯ ನಡೆ” ಎಂದು ರಾಷ್ಟ್ರೀಯ ಲೋಕದಳದ ಪ್ರಧಾನ ಕಾರ್ಯದರ್ಶಿ ತ್ರಿಲೋಕ್ ತ್ಯಾಗಿ ಹೇಳಿದ್ದಾರೆ.

ತ್ಯಾಗಿ ಅವರು ಸಮಾಜದ ನಿಯಮಗಳಿಗೆ ಬದ್ಧರಾಗಿದ್ದರೆ ಮತ್ತು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸದಿದ್ದರೆ ಸಮಸ್ಯೆ ದೊಡ್ಡದಾಗುತ್ತಿರಲಿಲ್ಲ ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಹೇಳಿದ್ದಾರೆ.

“ಸಮಾಜದ ನಿಯಮಗಳನ್ನು ಉಲ್ಲಂಘಿಸಿದ್ದು ಅವರ ಮೊದಲ ತಪ್ಪು. ಎರಡನೆಯದಾಗಿ, ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರು ಬಳಸಿದ ಭಾಷೆ ಸಮಸ್ಯೆಯನ್ನು ದೊಡ್ಡದಾಗಿಸಿತು” ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಪ್ರಧಾನ ಕಾರ್ಯದರ್ಶಿ ಮಹಿಮಾ ಜೋಶಿ ಹೇಳಿದ್ದಾರೆ.

ತಮ್ಮ ಪ್ರತಿಭಟನೆ ಕೇವಲ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧವೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಶ್ರೀಕಾಂತ್‌ ತ್ಯಾಗಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ದಾಖಲಾದ ಬಳಿಕ ಆತ ಪರಾರಿಯಾಗಿದ್ದನು.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ್ದರು. ಬಳಿಕ ತ್ಯಾಗಿ ಸಿಕ್ಕಿಬಿದ್ದಿದ್ದನು.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...