Homeಮುಖಪುಟಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ತ್ಯಾಗಿ ಸಮುದಾಯ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

- Advertisement -
- Advertisement -

ಕೆಲವು ದಿನಗಳ ಹಿಂದೆ ಮಹಿಳೆಯನ್ನು ನಿಂದಿಸಿ, ಅಸಭ್ಯವಾಗಿ ವರ್ತಿಸಿ, ಪೊಲೀಸ್‌ ವಿಚಾರಣೆಗೆ ಒಳಪಟ್ಟಿರುವ ಹಾಗೂ ಬಿಜೆಪಿ ನಾಯಕ ಎಂದೇ ಗುರುತಿಸಿಕೊಂಡಿರುವ ಶ್ರೀಕಾಂತ್ ತ್ಯಾಗಿಯನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆದಿದೆ.

ದೆಹಲಿ ಸಮೀಪದ ನೋಯ್ಡಾದಲ್ಲಿ ಬೃಹತ್ ರ್ಯಾಲಿಯನ್ನು ತ್ಯಾಗಿ ಸಮುದಾಯ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಸಂಸದ ಮಹೇಶ್ ಶರ್ಮಾ ಅವರನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಗಿದೆ.

ಶ್ರೀಕಾಂತ್ ತ್ಯಾಗಿ ಆಡಳಿತರೂಢ ಬಿಜೆಪಿಯ ಸದಸ್ಯನಲ್ಲ ಎಂದು ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಗೌತಮ್ ಬುದ್ಧ ನಗರ ಸಂಸದರ ವಿರುದ್ಧ ತ್ಯಾಗಿ ಸಮುದಾಯವು ಅಸಮಾಧಾನ ಹೊರಹಾಕಿದೆ. ಆದರೆ ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಮಹೇಶ್‌ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಗಸ್ಟ್‌ ತಿಂಗಳ ಮೊದಲ ವಾರ ಗ್ರಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಮೌನ ಪ್ರತಿಭಟನೆ ನಡೆಸಿದಾಗ ಬಳಸಲಾದ ಪೋಸ್ಟರ್‌ಗಳು ವಿವಾದಕ್ಕೆ ಕಾರಣವಾಗಿವೆ. ಆ ಪೋಸ್ಟರ್‌ಗಳಲ್ಲಿ ತ್ಯಾಗ ಸಮುದಾಯಕ್ಕೆ ಚ್ಯುತಿ ತರಲಾಗಿದೆ ಎಂದು ಆರೋಪಿಸಲಾಗಿದೆ.

ಶ್ರೀಕಾಂತ್ ತ್ಯಾಗಿ ಅವರನ್ನು ಬೆಂಬಲಿಸಿ ಸಂಯುಕ್ತ ತ್ಯಾಗಿ ಸ್ವಾಭಿಮಾನ್ ಮೋರ್ಚಾ ಆಯೋಜಿಸಿದ್ದ ಪ್ರತಿಭಟನಾ ಸಭೆಯು ಗೆಜ್ಜಾ ಗ್ರಾಮದ ರಾಮಲೀಲಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ತ್ಯಾಗಿ ಸಮುದಾಯದ ನೂರಾರು ಮಂದಿ ಇಲ್ಲಿಗೆ ಆಗಮಿಸಿದ್ದರು.

ಶ್ರೀಕಾಂತ್ ತ್ಯಾಗಿ ಅವರು ಮಾಡಿರುವ ಹಿಂಸೆ ಹಾಗೂ ನಿಂದನೆಗಳಿಗೆ ಸಂಬಂಧಿಸಿದಂತೆ ಶಿಕ್ಷೆಯಾಗಲಿ. ಆದರೆ ಅವರ ಪತ್ನಿ ಮತ್ತು ಚಿಕ್ಕಮ್ಮನನ್ನು ಪೊಲೀಸ್ ಠಾಣೆಗೆ ಕರೆಸಿರುವುದು ತಪ್ಪು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಪೊಲೀಸರು ಶ್ರೀಕಾಂತ್ ಅವರ ಚಿಕ್ಕಮ್ಮನನ್ನು ಜೀಪ್‌ನಲ್ಲಿ ಕರೆದೊಯ್ದು ನಾಲ್ಕು ದಿನಗಳ ಕಾಲ ಪಶ್ಚಿಮ ಯುಪಿಯಲ್ಲಿ ಸುತ್ತಾಡಿದರು. ಇದು ಅಮಾನವೀಯ ನಡೆ” ಎಂದು ರಾಷ್ಟ್ರೀಯ ಲೋಕದಳದ ಪ್ರಧಾನ ಕಾರ್ಯದರ್ಶಿ ತ್ರಿಲೋಕ್ ತ್ಯಾಗಿ ಹೇಳಿದ್ದಾರೆ.

ತ್ಯಾಗಿ ಅವರು ಸಮಾಜದ ನಿಯಮಗಳಿಗೆ ಬದ್ಧರಾಗಿದ್ದರೆ ಮತ್ತು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸದಿದ್ದರೆ ಸಮಸ್ಯೆ ದೊಡ್ಡದಾಗುತ್ತಿರಲಿಲ್ಲ ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿಗಳು ಹೇಳಿದ್ದಾರೆ.

“ಸಮಾಜದ ನಿಯಮಗಳನ್ನು ಉಲ್ಲಂಘಿಸಿದ್ದು ಅವರ ಮೊದಲ ತಪ್ಪು. ಎರಡನೆಯದಾಗಿ, ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರು ಬಳಸಿದ ಭಾಷೆ ಸಮಸ್ಯೆಯನ್ನು ದೊಡ್ಡದಾಗಿಸಿತು” ಎಂದು ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ನಿವಾಸಿ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಪ್ರಧಾನ ಕಾರ್ಯದರ್ಶಿ ಮಹಿಮಾ ಜೋಶಿ ಹೇಳಿದ್ದಾರೆ.

ತಮ್ಮ ಪ್ರತಿಭಟನೆ ಕೇವಲ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧವೇ ಹೊರತು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಶ್ರೀಕಾಂತ್‌ ತ್ಯಾಗಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ದಾಖಲಾದ ಬಳಿಕ ಆತ ಪರಾರಿಯಾಗಿದ್ದನು.

ಇದನ್ನೂ ಓದಿರಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ್ದರು. ಬಳಿಕ ತ್ಯಾಗಿ ಸಿಕ್ಕಿಬಿದ್ದಿದ್ದನು.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...