Homeಮುಖಪುಟಹುತಾತ್ಮ ಯೋಧನ ತಾಯಿಗೆ ಚೆಕ್‌ ನೀಡಿ ಪೋಟೋಗೆ ಬಲವಂತ ಮಾಡಿದ ಬಿಜೆಪಿ ನಾಯಕರು

ಹುತಾತ್ಮ ಯೋಧನ ತಾಯಿಗೆ ಚೆಕ್‌ ನೀಡಿ ಪೋಟೋಗೆ ಬಲವಂತ ಮಾಡಿದ ಬಿಜೆಪಿ ನಾಯಕರು

- Advertisement -
- Advertisement -

ರಾಜೌರಿ ಎನ್ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನ ತಾಯಿಗೆ ಉತ್ತರಪ್ರದೇಶದ ಸಚಿವರು ಮತ್ತು ಬಿಜೆಪಿ ನಾಯಕರು ಪರಿಹಾರ ಚೆಕ್‌ ನೀಡುವ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗ ವೈರಲ್‌ ಆಗಿದ್ದು, ಭಾರೀ ಟೀಕೆಗೆ ಕಾರಣವಾಗಿದೆ.

ಉತ್ತರಪ್ರದೇಶ ಕ್ಯಾಬಿನೆಟ್ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಬಿಜೆಪಿ ಶಾಸಕ ಜಿಎಸ್ ಧರ್ಮೇಶ್ ಅವರು ಕ್ಯಾಪ್ಟನ್ ಗುಪ್ತಾ ಅವರ ತಾಯಿಗೆ ಆಗ್ರಾ ನಿವಾಸದಲ್ಲಿ ಚೆಕ್ ಹಸ್ತಾಂತರಿಸುವಾಗ ಅವರ ತಾಯಿಯೊಂದಿಗೆ ತಮ್ಮ ಫೋಟೋ ತೆಗೆಸಿಕೊಂಡಿದ್ದಾರೆ. ಇದಕ್ಕೆ ವಿರೋಧಿಸಿ ಯೋಧನ ತಾಯಿ ಗದ್ಗದಿತರಾಗಿ ಅಳುತ್ತಿರುವುದು ಕಂಡು ಬಂದಿದೆ.

ಈ ಕುರಿತ ವಿಡಿಯೋವನ್ನು ವಿರೋಧ ಪಕ್ಷದ ನಾಯಕರು ಹಂಚಿಕೊಂಡಿದ್ದು, ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೋದಲ್ಲಿ ಉತ್ತರಪ್ರದೇಶದ ಕ್ಯಾಬಿನೆಟ್ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಬಿಜೆಪಿ ಶಾಸಕ ಜಿಎಸ್ ಧರ್ಮೇಶ್ ಅವರು ಹುತಾತ್ಮ ಯೋಧ ಕ್ಯಾಪ್ಟನ್ ಗುಪ್ತಾ ಅವರ ತಾಯಿಗೆ ಪರಿಹಾರ ಚೆಕ್ ಹಸ್ತಾಂತರಿಸುವುದು ಮತ್ತು ಫೋಟೋ ತೆಗೆಸಿಕೊಳುವುದು ಕಂಡು ಬಂದಿದೆ. ಈ ವೇಳೆ ಗದ್ಗದಿತಳಾದ ತಾಯಿ ತನ್ನ ಕೈಗಳನ್ನು ಹಿಂದಕ್ಕೆ ಎಳೆದು ಇದನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಬೇಡಿ. ನನ್ನ ಮಗನನ್ನು ವಾಪಾಸ್ಸು ಕೊಡಿ, ನನಗೆ ಇದೆಲ್ಲವೂ ಬೇಡ ಎಂದು ಹೇಳುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಬಿಜೆಪಿ ನಾಯಕರು ಇದನ್ನು ಕೇಳಿಯೂ ಕೇಳಿಸದ ರೀತಿ ವಿಡಿಯೋವನ್ನು ಮಾಡಿದ್ದಾರೆ. ಪೋಟೋವನ್ನು ತೆಗೆಸಿಕೊಂಡಿದ್ದಾರೆ.

ಯುದ್ಧದಲ್ಲಿ ಹತ್ಯೆಯಾದ ಸೇನಾ ಕ್ಯಾಪ್ಟನ್‌ನ ತಾಯಿಯ ದುಃಖದ ವೇಳೆ ಫೋಟೋ ತೆಗೆಸಿಕೊಂಡಿದ್ದಕ್ಕೆ ಬಿಜೆಪಿ ನಾಯಕರನ್ನು ಸಾಮಾಜಿಕ ಜಾಲತಾಣಗಳ ಬಳಕೆದಾರರು ಟೀಕಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡು ರಣಹದ್ದುಗಳು ಎಂದು ಬರೆದುಕೊಂಡಿದೆ.

ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಇದು ನಾಚಿಕೆಗೇಡು. ತಾಯಿ ತನ್ನ ಮಗನ ಶವಕ್ಕಾಗಿ ಕಾಯುತ್ತಿರುವಾಗ, ಪ್ರಚಾರ ಉದ್ದೇಶಗಳಿಗಾಗಿ ಪೋಟೋ ತೆಗೆಯಲು ಸಚಿವರು ಹೆಚ್ಚು ಆಸಕ್ತಿ ವಹಿಸಿದ್ದರು ಎಂದು ಹೇಳಿದ್ದಾರೆ.

ರಾಜೌರಿ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕ್ಯಾಪ್ಟನ್ ಶುಭಂ ಗುಪ್ತಾ ಅವರು ಕರ್ತವ್ಯದಲ್ಲಿದ್ದಾಗಲೇ ಪ್ರಾಣ ತ್ಯಾಗ ಮಾಡಿದರು. ಅವನ ತಾಯಿ ದುಃಖಿಸುತ್ತಿದ್ದಾರೆ ಮತ್ತು ತನ್ನ ಮಗನ ಮೃತದೇಹಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಆಕೆಯ ಅಸಹನೀಯ ದುಃಖದ ಮಧ್ಯೆ, ಯುಪಿ ಸರ್ಕಾರದ ಬಿಜೆಪಿ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು ತಮ್ಮ ಪ್ರಚಾರಕ್ಕಾಗಿ ಫೋಟೋ ತೆಗೆಸಿಕೊಳ್ಳಲು ನಾಚಿಕೆಯಿಲ್ಲದೆ ಪಟ್ಟುಹಿಡಿದಿದ್ದಾರೆ. ಎಂದು ಚಡ್ಡಾ ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಶಿವಸೇನೆ ಉದ್ಧವ್ ಬಣದ ನಾಯಕಿ ಪ್ರಿಯಾಂಕಾ ಚತುರ್ವೇದಿ ಕೂಡ ವೀಡಿಯೊವನ್ನು ಪೋಸ್ಟ್ ಮಾಡಿದ್ದು,  ಇದು ನಾಚಿಕೆಗೇಡು ಎಂದು ಬರೆದಿದ್ದಾರೆ.

ಇದನ್ನು ಓದಿ: ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...