Homeಮುಖಪುಟಹುತಾತ್ಮ ಯೋಧನ ತಾಯಿಗೆ ಚೆಕ್‌ ನೀಡಿ ಪೋಟೋಗೆ ಬಲವಂತ ಮಾಡಿದ ಬಿಜೆಪಿ ನಾಯಕರು

ಹುತಾತ್ಮ ಯೋಧನ ತಾಯಿಗೆ ಚೆಕ್‌ ನೀಡಿ ಪೋಟೋಗೆ ಬಲವಂತ ಮಾಡಿದ ಬಿಜೆಪಿ ನಾಯಕರು

- Advertisement -
- Advertisement -

ರಾಜೌರಿ ಎನ್ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನ ತಾಯಿಗೆ ಉತ್ತರಪ್ರದೇಶದ ಸಚಿವರು ಮತ್ತು ಬಿಜೆಪಿ ನಾಯಕರು ಪರಿಹಾರ ಚೆಕ್‌ ನೀಡುವ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗ ವೈರಲ್‌ ಆಗಿದ್ದು, ಭಾರೀ ಟೀಕೆಗೆ ಕಾರಣವಾಗಿದೆ.

ಉತ್ತರಪ್ರದೇಶ ಕ್ಯಾಬಿನೆಟ್ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಬಿಜೆಪಿ ಶಾಸಕ ಜಿಎಸ್ ಧರ್ಮೇಶ್ ಅವರು ಕ್ಯಾಪ್ಟನ್ ಗುಪ್ತಾ ಅವರ ತಾಯಿಗೆ ಆಗ್ರಾ ನಿವಾಸದಲ್ಲಿ ಚೆಕ್ ಹಸ್ತಾಂತರಿಸುವಾಗ ಅವರ ತಾಯಿಯೊಂದಿಗೆ ತಮ್ಮ ಫೋಟೋ ತೆಗೆಸಿಕೊಂಡಿದ್ದಾರೆ. ಇದಕ್ಕೆ ವಿರೋಧಿಸಿ ಯೋಧನ ತಾಯಿ ಗದ್ಗದಿತರಾಗಿ ಅಳುತ್ತಿರುವುದು ಕಂಡು ಬಂದಿದೆ.

ಈ ಕುರಿತ ವಿಡಿಯೋವನ್ನು ವಿರೋಧ ಪಕ್ಷದ ನಾಯಕರು ಹಂಚಿಕೊಂಡಿದ್ದು, ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೋದಲ್ಲಿ ಉತ್ತರಪ್ರದೇಶದ ಕ್ಯಾಬಿನೆಟ್ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಬಿಜೆಪಿ ಶಾಸಕ ಜಿಎಸ್ ಧರ್ಮೇಶ್ ಅವರು ಹುತಾತ್ಮ ಯೋಧ ಕ್ಯಾಪ್ಟನ್ ಗುಪ್ತಾ ಅವರ ತಾಯಿಗೆ ಪರಿಹಾರ ಚೆಕ್ ಹಸ್ತಾಂತರಿಸುವುದು ಮತ್ತು ಫೋಟೋ ತೆಗೆಸಿಕೊಳುವುದು ಕಂಡು ಬಂದಿದೆ. ಈ ವೇಳೆ ಗದ್ಗದಿತಳಾದ ತಾಯಿ ತನ್ನ ಕೈಗಳನ್ನು ಹಿಂದಕ್ಕೆ ಎಳೆದು ಇದನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಬೇಡಿ. ನನ್ನ ಮಗನನ್ನು ವಾಪಾಸ್ಸು ಕೊಡಿ, ನನಗೆ ಇದೆಲ್ಲವೂ ಬೇಡ ಎಂದು ಹೇಳುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಬಿಜೆಪಿ ನಾಯಕರು ಇದನ್ನು ಕೇಳಿಯೂ ಕೇಳಿಸದ ರೀತಿ ವಿಡಿಯೋವನ್ನು ಮಾಡಿದ್ದಾರೆ. ಪೋಟೋವನ್ನು ತೆಗೆಸಿಕೊಂಡಿದ್ದಾರೆ.

ಯುದ್ಧದಲ್ಲಿ ಹತ್ಯೆಯಾದ ಸೇನಾ ಕ್ಯಾಪ್ಟನ್‌ನ ತಾಯಿಯ ದುಃಖದ ವೇಳೆ ಫೋಟೋ ತೆಗೆಸಿಕೊಂಡಿದ್ದಕ್ಕೆ ಬಿಜೆಪಿ ನಾಯಕರನ್ನು ಸಾಮಾಜಿಕ ಜಾಲತಾಣಗಳ ಬಳಕೆದಾರರು ಟೀಕಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡು ರಣಹದ್ದುಗಳು ಎಂದು ಬರೆದುಕೊಂಡಿದೆ.

ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಇದು ನಾಚಿಕೆಗೇಡು. ತಾಯಿ ತನ್ನ ಮಗನ ಶವಕ್ಕಾಗಿ ಕಾಯುತ್ತಿರುವಾಗ, ಪ್ರಚಾರ ಉದ್ದೇಶಗಳಿಗಾಗಿ ಪೋಟೋ ತೆಗೆಯಲು ಸಚಿವರು ಹೆಚ್ಚು ಆಸಕ್ತಿ ವಹಿಸಿದ್ದರು ಎಂದು ಹೇಳಿದ್ದಾರೆ.

ರಾಜೌರಿ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕ್ಯಾಪ್ಟನ್ ಶುಭಂ ಗುಪ್ತಾ ಅವರು ಕರ್ತವ್ಯದಲ್ಲಿದ್ದಾಗಲೇ ಪ್ರಾಣ ತ್ಯಾಗ ಮಾಡಿದರು. ಅವನ ತಾಯಿ ದುಃಖಿಸುತ್ತಿದ್ದಾರೆ ಮತ್ತು ತನ್ನ ಮಗನ ಮೃತದೇಹಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಆಕೆಯ ಅಸಹನೀಯ ದುಃಖದ ಮಧ್ಯೆ, ಯುಪಿ ಸರ್ಕಾರದ ಬಿಜೆಪಿ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು ತಮ್ಮ ಪ್ರಚಾರಕ್ಕಾಗಿ ಫೋಟೋ ತೆಗೆಸಿಕೊಳ್ಳಲು ನಾಚಿಕೆಯಿಲ್ಲದೆ ಪಟ್ಟುಹಿಡಿದಿದ್ದಾರೆ. ಎಂದು ಚಡ್ಡಾ ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಶಿವಸೇನೆ ಉದ್ಧವ್ ಬಣದ ನಾಯಕಿ ಪ್ರಿಯಾಂಕಾ ಚತುರ್ವೇದಿ ಕೂಡ ವೀಡಿಯೊವನ್ನು ಪೋಸ್ಟ್ ಮಾಡಿದ್ದು,  ಇದು ನಾಚಿಕೆಗೇಡು ಎಂದು ಬರೆದಿದ್ದಾರೆ.

ಇದನ್ನು ಓದಿ: ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...