Homeಮುಖಪುಟಹುತಾತ್ಮ ಯೋಧನ ತಾಯಿಗೆ ಚೆಕ್‌ ನೀಡಿ ಪೋಟೋಗೆ ಬಲವಂತ ಮಾಡಿದ ಬಿಜೆಪಿ ನಾಯಕರು

ಹುತಾತ್ಮ ಯೋಧನ ತಾಯಿಗೆ ಚೆಕ್‌ ನೀಡಿ ಪೋಟೋಗೆ ಬಲವಂತ ಮಾಡಿದ ಬಿಜೆಪಿ ನಾಯಕರು

- Advertisement -
- Advertisement -

ರಾಜೌರಿ ಎನ್ಕೌಂಟರ್‌ನಲ್ಲಿ ಹುತಾತ್ಮರಾದ ಯೋಧನ ತಾಯಿಗೆ ಉತ್ತರಪ್ರದೇಶದ ಸಚಿವರು ಮತ್ತು ಬಿಜೆಪಿ ನಾಯಕರು ಪರಿಹಾರ ಚೆಕ್‌ ನೀಡುವ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗ ವೈರಲ್‌ ಆಗಿದ್ದು, ಭಾರೀ ಟೀಕೆಗೆ ಕಾರಣವಾಗಿದೆ.

ಉತ್ತರಪ್ರದೇಶ ಕ್ಯಾಬಿನೆಟ್ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಬಿಜೆಪಿ ಶಾಸಕ ಜಿಎಸ್ ಧರ್ಮೇಶ್ ಅವರು ಕ್ಯಾಪ್ಟನ್ ಗುಪ್ತಾ ಅವರ ತಾಯಿಗೆ ಆಗ್ರಾ ನಿವಾಸದಲ್ಲಿ ಚೆಕ್ ಹಸ್ತಾಂತರಿಸುವಾಗ ಅವರ ತಾಯಿಯೊಂದಿಗೆ ತಮ್ಮ ಫೋಟೋ ತೆಗೆಸಿಕೊಂಡಿದ್ದಾರೆ. ಇದಕ್ಕೆ ವಿರೋಧಿಸಿ ಯೋಧನ ತಾಯಿ ಗದ್ಗದಿತರಾಗಿ ಅಳುತ್ತಿರುವುದು ಕಂಡು ಬಂದಿದೆ.

ಈ ಕುರಿತ ವಿಡಿಯೋವನ್ನು ವಿರೋಧ ಪಕ್ಷದ ನಾಯಕರು ಹಂಚಿಕೊಂಡಿದ್ದು, ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೋದಲ್ಲಿ ಉತ್ತರಪ್ರದೇಶದ ಕ್ಯಾಬಿನೆಟ್ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಬಿಜೆಪಿ ಶಾಸಕ ಜಿಎಸ್ ಧರ್ಮೇಶ್ ಅವರು ಹುತಾತ್ಮ ಯೋಧ ಕ್ಯಾಪ್ಟನ್ ಗುಪ್ತಾ ಅವರ ತಾಯಿಗೆ ಪರಿಹಾರ ಚೆಕ್ ಹಸ್ತಾಂತರಿಸುವುದು ಮತ್ತು ಫೋಟೋ ತೆಗೆಸಿಕೊಳುವುದು ಕಂಡು ಬಂದಿದೆ. ಈ ವೇಳೆ ಗದ್ಗದಿತಳಾದ ತಾಯಿ ತನ್ನ ಕೈಗಳನ್ನು ಹಿಂದಕ್ಕೆ ಎಳೆದು ಇದನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಬೇಡಿ. ನನ್ನ ಮಗನನ್ನು ವಾಪಾಸ್ಸು ಕೊಡಿ, ನನಗೆ ಇದೆಲ್ಲವೂ ಬೇಡ ಎಂದು ಹೇಳುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ ಬಿಜೆಪಿ ನಾಯಕರು ಇದನ್ನು ಕೇಳಿಯೂ ಕೇಳಿಸದ ರೀತಿ ವಿಡಿಯೋವನ್ನು ಮಾಡಿದ್ದಾರೆ. ಪೋಟೋವನ್ನು ತೆಗೆಸಿಕೊಂಡಿದ್ದಾರೆ.

ಯುದ್ಧದಲ್ಲಿ ಹತ್ಯೆಯಾದ ಸೇನಾ ಕ್ಯಾಪ್ಟನ್‌ನ ತಾಯಿಯ ದುಃಖದ ವೇಳೆ ಫೋಟೋ ತೆಗೆಸಿಕೊಂಡಿದ್ದಕ್ಕೆ ಬಿಜೆಪಿ ನಾಯಕರನ್ನು ಸಾಮಾಜಿಕ ಜಾಲತಾಣಗಳ ಬಳಕೆದಾರರು ಟೀಕಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡು ರಣಹದ್ದುಗಳು ಎಂದು ಬರೆದುಕೊಂಡಿದೆ.

ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಇದು ನಾಚಿಕೆಗೇಡು. ತಾಯಿ ತನ್ನ ಮಗನ ಶವಕ್ಕಾಗಿ ಕಾಯುತ್ತಿರುವಾಗ, ಪ್ರಚಾರ ಉದ್ದೇಶಗಳಿಗಾಗಿ ಪೋಟೋ ತೆಗೆಯಲು ಸಚಿವರು ಹೆಚ್ಚು ಆಸಕ್ತಿ ವಹಿಸಿದ್ದರು ಎಂದು ಹೇಳಿದ್ದಾರೆ.

ರಾಜೌರಿ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕ್ಯಾಪ್ಟನ್ ಶುಭಂ ಗುಪ್ತಾ ಅವರು ಕರ್ತವ್ಯದಲ್ಲಿದ್ದಾಗಲೇ ಪ್ರಾಣ ತ್ಯಾಗ ಮಾಡಿದರು. ಅವನ ತಾಯಿ ದುಃಖಿಸುತ್ತಿದ್ದಾರೆ ಮತ್ತು ತನ್ನ ಮಗನ ಮೃತದೇಹಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಆಕೆಯ ಅಸಹನೀಯ ದುಃಖದ ಮಧ್ಯೆ, ಯುಪಿ ಸರ್ಕಾರದ ಬಿಜೆಪಿ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು ತಮ್ಮ ಪ್ರಚಾರಕ್ಕಾಗಿ ಫೋಟೋ ತೆಗೆಸಿಕೊಳ್ಳಲು ನಾಚಿಕೆಯಿಲ್ಲದೆ ಪಟ್ಟುಹಿಡಿದಿದ್ದಾರೆ. ಎಂದು ಚಡ್ಡಾ ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಶಿವಸೇನೆ ಉದ್ಧವ್ ಬಣದ ನಾಯಕಿ ಪ್ರಿಯಾಂಕಾ ಚತುರ್ವೇದಿ ಕೂಡ ವೀಡಿಯೊವನ್ನು ಪೋಸ್ಟ್ ಮಾಡಿದ್ದು,  ಇದು ನಾಚಿಕೆಗೇಡು ಎಂದು ಬರೆದಿದ್ದಾರೆ.

ಇದನ್ನು ಓದಿ: ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...