ಹಿಂದುತ್ವ ವಿಚಾರವಾಗಿ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ ‘ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾದರಿಯನ್ನು ಜಾರಿ ಮಾಡುತ್ತೇವೆ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ಅವರನ್ನು ಎನ್ಕೌಂಟರ್ ಮಾಡುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಹಿರೇಹರಕುಣಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಜಾರಿಗೆ ಬರುತ್ತದೆ ಎಂದು ಹೇಳಿದ್ದಾರೆ. ಮುಂದುವರೆದು, ”ಹಿಂದೂ ಮತ್ತು ದೇಶದ ವಿರುದ್ಧ ಯಾರಾದರು ಮಾತಾಡಿದರೆ ಶೂಟ್ ಮಾಡುವುದು ಖಚಿತ, ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ಎನ್ಕೌಂಟರ್ ನಿಶ್ಚಿತ, ರಸ್ತೆ ಮಧ್ಯೆಯೇ ನಿಲ್ಲಿಸಿ ಗುಂಡು ಹಾರಿಸಲಾಗುತ್ತದೆ ಎಂದು ವಿವಾದ ಎಬ್ಬಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಅಣ್ಣತಮ್ಮಂದಿರ (ಮುಸ್ಲಿಂ ಮಾಫಿಯಾ) ಎನ್ಕೌಂಟರ್ ಆಯ್ತು. ಹೀಗಾಗಿ ಕೆಲವರು ಜೈಲಿನಿಂದ ಹೊರಬರಲು ಹೆದರುತ್ತಿದ್ದಾರೆ ಎಂದು ಗ್ಯಾಂಗ್ಸ್ಟರ್, ಮಾಜಿ ಸಂಸದ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಪೊಲೀಸರ ಬಿಗಿ ಭದ್ರತೆಯಲ್ಲಿ ದುಷ್ಕರ್ಮಿಗಳು ಗುಂಡುಹಾರಿಸಿ ಕೊಂದ ಘಟನೆಯನ್ನು ನೆನಪಿಸಿದ್ದಾರೆ.
ಇದನ್ನೂ ಓದಿ: ‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ
ಉತ್ತರ ಪ್ರದೇಶದಲ್ಲಿ ವಾಹನಗಳು ಪಲ್ಟಿಯಾಗುತ್ತಲೇ ಇರುತ್ತದೆ. ಹಾದಿಬೀದಿಯಲ್ಲಿ ರೌಡಿಗಳ ಹೆಣಗಳು ಉರುಳುತ್ತಲೇ ಇರುತ್ತದೆ ಎಂದು ಹೇಳುವ ಮೂಲಕ ಸರ್ಕಾರವೇ ಆ ಅಪಘಾತಗಳನ್ನು ಮಾಡಿಸುತ್ತದೆ ಎನ್ನುವ ಅನುಮಾನ ಹುಟ್ಟುಹಾಕಿದ್ದಾರೆ. ಕರ್ನಾಟಕದಲ್ಲಿ ಯಾರಾದರು ಹಾರಾಡಿದರೆ ಎನ್ಕೌಂಟರ್ ಖಚಿತ ಎಂದಿದ್ದಾರೆ.
”ಟಿಪ್ಪು ಸುಲ್ತಾನ ಹರಾಂ ಕೋರ್”: ಯತ್ನಾಳ್ ಹೇಳಿಕೆ
ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದೂಗಳನ್ನು ಕೊಂದಿದ್ದಾನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ಟಿಪ್ಪು ಫೋಟೋ ತೆಗೆದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಫೋಟೋ ಹಾಕುತ್ತೇವೆ ಎಂದು ಹೇಳಿದ್ದಾರೆ.
ಈ ವೇಳೆ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ”ಮೂರು ಬಿಟ್ಟವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ. ಇವತ್ತು ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಗ ಮಾತನಾಡಿದ್ದಾನೆ. ಎಲ್ಲ ಬಿಟ್ಟು ನಿಂತ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಾಂಗ್ರೆಸ್ನಲ್ಲಿದ್ದಾರೆ. ದೇಶದ ಜನರ ಆಶೀರ್ವಾದದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಇಂತಹ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ, ಈ ಬಗ್ಗೆ ಯೋಚನೆ ಮಾಡಿ” ಎಂದು ಕಿಡಿಕಾರಿದರು.
Mooru bittu commission hodedu jailinalli irabekadavaru eega BJP yolage serikondiddare,addarinda mooru bittavaru bere pakshadalli siguvudilla.