Homeಮುಖಪುಟಯುಪಿ: ತಿರಂಗ ಯಾತ್ರೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಫೋಟೋ ಮೆರವಣಿಗೆ

ಯುಪಿ: ತಿರಂಗ ಯಾತ್ರೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಫೋಟೋ ಮೆರವಣಿಗೆ

- Advertisement -
- Advertisement -

ಅಖಿಲ ಭಾರತೀಯ ಹಿಂದೂ ಮಹಾಸಭಾವು ಸೋಮವಾರ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಾಥೂರಾಂ ಗೋಡ್ಸೆಯ ಫೋಟೋದೊಂದಿಗೆ ತಿರಂಗಾ ಯಾತ್ರೆಯನ್ನು ನಡೆಸಿದೆ.

ಗಾಂಧಿ ಹಂತಕ ಗೋಡ್ಸೆಯ ಭಾವಚಿತ್ರದೊಂದಿಗೆ ರಾಷ್ಟ್ರಧ್ವಜದ ಮೆರವಣಿಗೆ ಮಾಡಿರುವುದು ಟೀಕೆಗಳಿಗೆ ಕಾರಣವಾಗಿದೆ. ತಿರಂಗ ಯಾತ್ರೆಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ರಾತ್ರಿ ವೈರಲ್ ಆದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ದಾರ್ಸಲ್ ಹಿಂದೂ ಮಹಾಸಭಾದ ಕಾರ್ಯಾಧ್ಯಕ್ಷ ಯೋಗೇಂದ್ರ ವರ್ಮಾ ನೇತೃತ್ವದಲ್ಲಿ ಸೋಮವಾರ ಸಂಜೆ ತ್ರಿವರ್ಣ ಯಾತ್ರೆಯನ್ನು ನಡೆಸಲಾಗಿದೆ. ರಾಷ್ಟ್ರಧ್ವಜದ ಯಾತ್ರೆಯಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಹಲವು ಕ್ರಾಂತಿಕಾರಿಗಳ ಚಿತ್ರಗಳಿದ್ದರೂ ಅವುಗಳ ಜೊತೆಗೆ ಮಹಾತ್ಮ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯ ಚಿತ್ರವನ್ನೂ ಅಳವಡಿಸಲಾಗಿತ್ತು.

ಹಿಂದೂ ಮಹಾಸಭಾ ಮುಖಂಡ ಯೋಗೇಂದ್ರ ವರ್ಮಾ ಮಾತನಾಡಿ, “ಸ್ವಾತಂತ್ರ್ಯ ದಿನಾಚರಣೆಯಂದು ತಿರಂಗ ಯಾತ್ರೆ ಹಮ್ಮಿಕೊಂಡಿದ್ದು, ರ್‍ಯಾಲಿ ಜಿಲ್ಲೆಯಾದ್ಯಂತ ಸಂಚರಿಸಿದೆ. ಎಲ್ಲಾ ಪ್ರಮುಖ ಹಿಂದೂ ಮುಖಂಡರು ಇದರಲ್ಲಿ ಭಾಗವಹಿಸಿದ್ದರು. ನಾವು ಹಲವಾರು ಕ್ರಾಂತಿಕಾರಿಗಳ ಛಾಯಾಚಿತ್ರಗಳನ್ನು ಹಾಕಿದ್ದೆವು. ಅವರಲ್ಲಿ ಗೋಡ್ಸೆ ಕೂಡ ಒಬ್ಬ” ಎಂದಿದ್ದಾರೆ.

ಗಾಂಧಿ ಅನುಸರಿಸಿದ ನೀತಿಗಳೇ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡುವಂತೆ ಗೋಡ್ಸೆಯನ್ನು ಪ್ರೇರೇಪಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

“ಗೋಡ್ಸೆ ತನ್ನದೇ ಆದ ಪ್ರಕರಣದಲ್ಲಿ ಹೋರಾಡಿದ್ದಾನೆ. ನ್ಯಾಯಾಲಯದಲ್ಲಿ ಆತ ಹೇಳಿದ ಎಲ್ಲವನ್ನೂ ಸರ್ಕಾರವು ಸಾರ್ವಜನಿಕಗೊಳಿಸಬೇಕು. ಗಾಂಧಿಯನ್ನು ಏಕೆ ಹತ್ಯೆ ಮಾಡಲಾಯಿತು ಎಂಬುದನ್ನು ಜನರಿಗೆ ತಿಳಿಸುವುದಕ್ಕೆ ಸರ್ಕಾರಕ್ಕೆ ಇಷ್ಟವಿಲ್ಲ” ಎಂದು ತಿಳಿಸಿದ್ದಾರೆ.

“ಗಾಂಧಿಯವರ ಕೆಲವು ನೀತಿಗಳು ಹಿಂದೂ ವಿರೋಧಿಯಾಗಿದ್ದವು. ವಿಭಜನೆಯ ಸಮಯದಲ್ಲಿ 30 ಲಕ್ಷ ಹಿಂದೂಗಳು ಮತ್ತು ಮುಸ್ಲಿಮರು ಕೊಲ್ಲಲ್ಪಟ್ಟರು. ಇದಕ್ಕೆ ಗಾಂಧಿಯೇ ಕಾರಣ” ಎಂದು ದೂರಿದ್ದಾರೆ.

ಗೋಡ್ಸೆ ಗಾಂಧಿಯನ್ನು ಹತ್ಯೆ ಮಾಡಿದ್ದಕ್ಕೆ ಮರಣದಂಡನೆ ಅನುಭವಿಸಿದ ಎಂದಿರುವ ಯೋಗೇಂದ್ರ ವರ್ಮಾ, “ಗಾಂಧಿ ನಮ್ಮ ಸ್ಫೂರ್ತಿ ಎಂದು ಕೆಲವರು ಭಾವಿಸುವಂತೆಯೇ, ಗೋಡ್ಸೆಯ ಮೇಲೆ ನಮಗೆ ಅಭಿಮಾನವಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಾಂಧಿಯ ಸ್ಥಾನಕ್ಕೆ ಗೋಡ್ಸೆ ಬಂದಿದ್ದಾನೆ, ಈ ದೇಶಕ್ಕೆ ಏನೋ ಕೇಡುಗಾಲ ಕಾದಿದೆ ಎಂದೇ ಅರ್ಥ.

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...