Homeಮುಖಪುಟಯುಪಿ: ತಿರಂಗ ಯಾತ್ರೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಫೋಟೋ ಮೆರವಣಿಗೆ

ಯುಪಿ: ತಿರಂಗ ಯಾತ್ರೆಯಲ್ಲಿ ಗಾಂಧಿ ಹಂತಕ ಗೋಡ್ಸೆಯ ಫೋಟೋ ಮೆರವಣಿಗೆ

- Advertisement -
- Advertisement -

ಅಖಿಲ ಭಾರತೀಯ ಹಿಂದೂ ಮಹಾಸಭಾವು ಸೋಮವಾರ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಾಥೂರಾಂ ಗೋಡ್ಸೆಯ ಫೋಟೋದೊಂದಿಗೆ ತಿರಂಗಾ ಯಾತ್ರೆಯನ್ನು ನಡೆಸಿದೆ.

ಗಾಂಧಿ ಹಂತಕ ಗೋಡ್ಸೆಯ ಭಾವಚಿತ್ರದೊಂದಿಗೆ ರಾಷ್ಟ್ರಧ್ವಜದ ಮೆರವಣಿಗೆ ಮಾಡಿರುವುದು ಟೀಕೆಗಳಿಗೆ ಕಾರಣವಾಗಿದೆ. ತಿರಂಗ ಯಾತ್ರೆಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ರಾತ್ರಿ ವೈರಲ್ ಆದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ದಾರ್ಸಲ್ ಹಿಂದೂ ಮಹಾಸಭಾದ ಕಾರ್ಯಾಧ್ಯಕ್ಷ ಯೋಗೇಂದ್ರ ವರ್ಮಾ ನೇತೃತ್ವದಲ್ಲಿ ಸೋಮವಾರ ಸಂಜೆ ತ್ರಿವರ್ಣ ಯಾತ್ರೆಯನ್ನು ನಡೆಸಲಾಗಿದೆ. ರಾಷ್ಟ್ರಧ್ವಜದ ಯಾತ್ರೆಯಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಹಲವು ಕ್ರಾಂತಿಕಾರಿಗಳ ಚಿತ್ರಗಳಿದ್ದರೂ ಅವುಗಳ ಜೊತೆಗೆ ಮಹಾತ್ಮ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯ ಚಿತ್ರವನ್ನೂ ಅಳವಡಿಸಲಾಗಿತ್ತು.

ಹಿಂದೂ ಮಹಾಸಭಾ ಮುಖಂಡ ಯೋಗೇಂದ್ರ ವರ್ಮಾ ಮಾತನಾಡಿ, “ಸ್ವಾತಂತ್ರ್ಯ ದಿನಾಚರಣೆಯಂದು ತಿರಂಗ ಯಾತ್ರೆ ಹಮ್ಮಿಕೊಂಡಿದ್ದು, ರ್‍ಯಾಲಿ ಜಿಲ್ಲೆಯಾದ್ಯಂತ ಸಂಚರಿಸಿದೆ. ಎಲ್ಲಾ ಪ್ರಮುಖ ಹಿಂದೂ ಮುಖಂಡರು ಇದರಲ್ಲಿ ಭಾಗವಹಿಸಿದ್ದರು. ನಾವು ಹಲವಾರು ಕ್ರಾಂತಿಕಾರಿಗಳ ಛಾಯಾಚಿತ್ರಗಳನ್ನು ಹಾಕಿದ್ದೆವು. ಅವರಲ್ಲಿ ಗೋಡ್ಸೆ ಕೂಡ ಒಬ್ಬ” ಎಂದಿದ್ದಾರೆ.

ಗಾಂಧಿ ಅನುಸರಿಸಿದ ನೀತಿಗಳೇ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡುವಂತೆ ಗೋಡ್ಸೆಯನ್ನು ಪ್ರೇರೇಪಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

“ಗೋಡ್ಸೆ ತನ್ನದೇ ಆದ ಪ್ರಕರಣದಲ್ಲಿ ಹೋರಾಡಿದ್ದಾನೆ. ನ್ಯಾಯಾಲಯದಲ್ಲಿ ಆತ ಹೇಳಿದ ಎಲ್ಲವನ್ನೂ ಸರ್ಕಾರವು ಸಾರ್ವಜನಿಕಗೊಳಿಸಬೇಕು. ಗಾಂಧಿಯನ್ನು ಏಕೆ ಹತ್ಯೆ ಮಾಡಲಾಯಿತು ಎಂಬುದನ್ನು ಜನರಿಗೆ ತಿಳಿಸುವುದಕ್ಕೆ ಸರ್ಕಾರಕ್ಕೆ ಇಷ್ಟವಿಲ್ಲ” ಎಂದು ತಿಳಿಸಿದ್ದಾರೆ.

“ಗಾಂಧಿಯವರ ಕೆಲವು ನೀತಿಗಳು ಹಿಂದೂ ವಿರೋಧಿಯಾಗಿದ್ದವು. ವಿಭಜನೆಯ ಸಮಯದಲ್ಲಿ 30 ಲಕ್ಷ ಹಿಂದೂಗಳು ಮತ್ತು ಮುಸ್ಲಿಮರು ಕೊಲ್ಲಲ್ಪಟ್ಟರು. ಇದಕ್ಕೆ ಗಾಂಧಿಯೇ ಕಾರಣ” ಎಂದು ದೂರಿದ್ದಾರೆ.

ಗೋಡ್ಸೆ ಗಾಂಧಿಯನ್ನು ಹತ್ಯೆ ಮಾಡಿದ್ದಕ್ಕೆ ಮರಣದಂಡನೆ ಅನುಭವಿಸಿದ ಎಂದಿರುವ ಯೋಗೇಂದ್ರ ವರ್ಮಾ, “ಗಾಂಧಿ ನಮ್ಮ ಸ್ಫೂರ್ತಿ ಎಂದು ಕೆಲವರು ಭಾವಿಸುವಂತೆಯೇ, ಗೋಡ್ಸೆಯ ಮೇಲೆ ನಮಗೆ ಅಭಿಮಾನವಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಾಂಧಿಯ ಸ್ಥಾನಕ್ಕೆ ಗೋಡ್ಸೆ ಬಂದಿದ್ದಾನೆ, ಈ ದೇಶಕ್ಕೆ ಏನೋ ಕೇಡುಗಾಲ ಕಾದಿದೆ ಎಂದೇ ಅರ್ಥ.

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...