Homeಮುಖಪುಟ‘ಯುಪಿ ಪ್ಲಸ್ ಯೋಗಿ ತುಂಬಾ ಉಪಯೋಗಿ’: ಪ್ರಧಾನಿ ಮೋದಿ

‘ಯುಪಿ ಪ್ಲಸ್ ಯೋಗಿ ತುಂಬಾ ಉಪಯೋಗಿ’: ಪ್ರಧಾನಿ ಮೋದಿ

ಆದಿತ್ಯನಾಥ್ ಅವರು ಮಾಫಿಯಾಗಳನ್ನು ತೊಡೆದುಹಾಕಲು ಮತ್ತು ಅಭಿವೃದ್ಧಿ ಮಾಡಲು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮಾಫಿಯಾಗಳನ್ನು ತೊಡೆದುಹಾಕಲು ಮತ್ತು ಅಭಿವೃದ್ಧಿ ಮಾಡಲು ಬೇಕಾಗಿ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. “ಹಾಗಾಗಿಯೆ ಜನರು ‘ಯುಪಿ ಪ್ಲಸ್ ಯೋಗಿ ತುಂಬಾ ಉಪಯೋಗಿ’ ಎಂದು ಹೇಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ 594 ಕಿಮೀ ಉದ್ದದ ಗಂಗಾ ಎಕ್ಸ್‌ಪ್ರೆಸ್‌ ವೇಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಪ್ರಧಾನಿ ಮಾತನಾಡುತ್ತಿದ್ದರು. “ಕಾನೂನು ಮತ್ತು ಸುವ್ಯವಸ್ಥೆಯನ್ನು ಕಳಪೆಯಾಗಿ ನಿರ್ವಹಿಸಿದ್ದರಿಂದ ಉತ್ತರ ಪ್ರದೇಶದಿಂದ ಜನರು ಹಿಂದೆ ಸರಿಯಯುತ್ತಿದ್ದರು. ಆದರೆ ಕಳೆದ 4.5 ವರ್ಷಗಳಲ್ಲಿ ಬುಲ್ಡೋಜರ್‌ಗಳು ಮಾಫಿಯಾಗಳ ಅನಧಿಕೃತ ಆಸ್ತಿಗಳನ್ನು ಧ್ವಂಸಗೊಳಿಸಿದ್ದು, ಅವರನ್ನು ಬೆಂಬಲಿಸುವವರಿಗೆ ನೋವುಂಟು ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ:ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 70 ಮಂದಿ ಎಸ್‌ಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಉತ್ತರ ಪ್ರದೇಶದ ಹಿಂದಿನ ಆಡಳಿತದ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, “ಐದು ವರ್ಷಗಳ ಹಿಂದಿನ ಸ್ಥಿತಿಯನ್ನು ನೆನಪಿಸಿಕೊಳ್ಳಿ. ರಾಜ್ಯದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ಇತರ ನಗರಗಳು ಮತ್ತು ಹಳ್ಳಿಗಳಲ್ಲಿ ವಿದ್ಯುತ್ ಲಭ್ಯವಿರಲಿಲ್ಲ. ಸಾರ್ವಜನಿಕ ಹಣವನ್ನು ಹೇಗೆ ಬಳಸಲಾಗಿದೆ ಎಂಬುದನ್ನು ಜನರು ಚೆನ್ನಾಗಿ ನೋಡಿದ್ದಾರೆ” ಎಂದು ಹೇಳಿದ್ದಾರೆ.

“ಇಂದು ಉತ್ತರ ಪ್ರದೇಶದ ಹಣವನ್ನು ರಾಜ್ಯದ ಅಭಿವೃದ್ಧಿಗೆ ಹೂಡಿಕೆ ಮಾಡಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಮೂಲಸೌಕರ್ಯವು ಸಂಪನ್ಮೂಲಗಳನ್ನು ಹೇಗೆ ಸರಿಯಾಗಿ ಬಳಸುತ್ತದೆ ಎಂಬುದನ್ನು ಇದು ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಮುಂದುವರೆದ ಮೂಲಸೌಕರ್ಯಗಳೊಂದಿಗೆ ಉತ್ತರಪ್ರದೇಶವು ಅತ್ಯಂತ ಆಧುನಿಕ ರಾಜ್ಯವಾಗಿ ಗುರುತಿಸಲ್ಪಡುವ ದಿನ ದೂರವಿಲ್ಲ. ಯುಪಿಯಲ್ಲಿ ಎಕ್ಸ್‌ಪ್ರೆಸ್‌ವೇಗಳ ಜಾಲ, ನಿರ್ಮಿಸಲಾಗುತ್ತಿರುವ ಹೊಸ ವಿಮಾನ ನಿಲ್ದಾಣಗಳು, ಹೊಸ ರೈಲು ಮಾರ್ಗಗಳು ಯುಪಿಯ ಜನರಿಗೆ ಏಕಕಾಲದಲ್ಲಿ ಹಲವಾರು ಪ್ರಯೋಜನಗಳನ್ನು ತರುತ್ತಿವೆ” ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಧಾನಿ ಮೋದಿ ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಹಲವಾರು ಬಾರಿ ಭೇಟಿ ನೀಡುತ್ತಿದ್ದಾರೆ. ಗಮನಿಸಬೇಕಾದ ಅಂಶವೆಂದರೆ, ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್‌ಗೆ ಬೆಂಬಲಿಸಲು ವಾರಣಾಸಿಗೆ ತೆರಳಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...