Homeಚಳವಳಿಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ ತಪ್ಪಿಸಿಕೊಳ್ಳಲು ಯುಪಿ ಪೊಲೀಸರೇ ಅನುಕೂಲ ಮಾಡಿಕೊಟ್ಟರು- ಎಸ್‌ಕೆಎಂ

- Advertisement -
- Advertisement -

ಉತ್ತರ ಪ್ರದೇಶ ಪೊಲೀಸರು ಆಶಿಶ್ ಮಿಶ್ರಾ ಮತ್ತು ಸಹಚರರನ್ನು ಭಾನುವಾರ ಅಪರಾಧದ ಸ್ಥಳದಿಂದ ತಪ್ಪಿಸಿಕೊಳ್ಳಲು ಮತ್ತು ಈಗ ಬಂಧನ ತಪ್ಪಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ.

ಮುಗ್ಧ ರೈತರ ಕೊಲೆಗಾರರನ್ನು ರಕ್ಷಿಸಲು ಉತ್ತರ ಪ್ರದೇಶ ಸರ್ಕಾರವು ಸುಳ್ಳು ಮತ್ತು ವಂಚನೆಯ ಜಾಲ ಮುಂದುವರಿಸಿದೆ ಎಂದು ಇಂದಿನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

3 ಪೊಲೀಸ್ ತಂಡಗಳು ಕಾಣೆಯಾದ ಆರೋಪಿ ಆಶಿಶ್ ಮಿಶ್ರಾ ಅವರನ್ನು ಹುಡುಕುತ್ತಿವೆ. ಇಬ್ಬರನ್ನು ಬಂಧಿಸಲಾಗಿದೆ ಮತ್ತು ಮೂರು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆದರೆ ಯುಪಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುವ ಕೊಳಕು ಆಟಗಳನ್ನು ನಿಲ್ಲಿಸಬೇಕು ಎಂದು ಎಸ್‌ಕೆಎಂ ಹೇಳಿದ್ದು, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಲು ಈಗ ಇನ್ನೊಂದು ಕಾರಣ ದೊರೆತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ರೈತ ಪರ ದನಿ ಎತ್ತಿದ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಗೇಟ್‌ಪಾಸ್

ಯುಪಿ ಸರ್ಕಾರ, ಒಕ್ಕೂಟ ಸರ್ಕಾರ ಮತ್ತು ಭಾರತದ ರಾಷ್ಟ್ರಪತಿಗಳಿಂದ ಆಶಿಶ್ ಮಿಶ್ರಾ ಬಂಧನ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ವಜಾಗೊಳಿಸುವುದು ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪದಚ್ಯುತಿಗಾಗಿ ಕ್ರಮ ತೆಗೆದುಕೊಳ್ಳುವುದಕ್ಕಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕಾಯುತ್ತಿದೆ ಎಂದಿದೆ.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ಕ್ರಮದ ನಿರ್ಧಾರವನ್ನು ಅಂತಿಮ್ ಅರ್ದಾಸ್ (antim ardaas) ದಿನದಂದು (ಅಕ್ಟೋಬರ್ 12) ಘೋಷಿಸಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.

ಲಖಿಂಪುರ್ ಖೇರಿ ಹತ್ಯಾಕಾಂಡದ ಕುರಿತು ಉತ್ತರ ಪ್ರದೇಶದಿಂದ ತನಿಖೆಯ ವರದಿಯನ್ನು ಸುಪ್ರೀಂಕೋರ್ಟ್ ಕೇಳಿರುವುದನ್ನು ಎಸ್‌ಕೆಎಂ ಉಲ್ಲೇಖಿಸಿದೆ.

ಹರಿಯಾಣದಲ್ಲಿಯೂ ಬಿಜೆಪಿ ಸಂಸದ ನಯೀಬ್ ಸೈನಿ ಎಂಬುವವರಿಗೆ ಸೇರಿದ ಕಾರು ಅಂಬಾಲ ಬಳಿಯ ನರೈನ್‌ಗರ್‌ ಬಳಿ ಪ್ರತಿಭಟನಾನಿರತರಿಗೆ ಗುದ್ದಿದ್ದು ಒಬ್ಬ ರೈತ ತೀವ್ರವಾಗಿ ಗಾಯಗೊಂಡಿದ್ದಾರೆ. . ಗಾಯಗೊಂಡ ರೈತನನ್ನು ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದೆ.

ಇನ್ನು, ಲಖಿಂಪುರ್ ಖೇರಿ ರೈತರ ಹತ್ಯಾಕಾಂಡ ಖಂಡಿಸಿ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಅಕ್ಟೋಬರ್ 11 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಮಾಹಿತಿ ನೀಡಿದೆ.


ಇದನ್ನೂ ಓದಿ: ಲಖಿಂಪುರ್‌ ಖೇರಿಗೆ ಪಾದಯಾತ್ರೆ: ಆರೋಪಿಗಳನ್ನು ಬಂಧಿಸದಿದ್ದರೇ ಉಪವಾಸ ಸತ್ಯಾಗ್ರಹ-ನವಜೋತ್ ಸಿಂಗ್ ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...