Homeಮುಖಪುಟಕೇರಳದ ಮೂವರು ಮಹಿಳೆಯರನ್ನು ಬಂಧಿಸಿದ ಯುಪಿ ಪೊಲೀಸರು

ಕೇರಳದ ಮೂವರು ಮಹಿಳೆಯರನ್ನು ಬಂಧಿಸಿದ ಯುಪಿ ಪೊಲೀಸರು

- Advertisement -
- Advertisement -

ಯುಎಪಿಎ ಕಾಯ್ದೆ ಅಡಿ ಬಂಧಿತರಾಗಿದ್ದ ತಮ್ಮ ಸಂಬಂಧಿಕರನ್ನು ನೋಡಲು ಉತ್ತರ ಪ್ರದೇಶಕ್ಕೆ ತೆರಳಿದ್ದ ಕೇರಳದ ಮೂವರು ಮಹಿಳೆಯರನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ನಕಲಿ ಆರ್‌ಟಿ-ಪಿಸಿಆರ್ ಕೋವಿಡ್‌ ಪರೀಕ್ಷಾ ಪ್ರಮಾಣಪತ್ರಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿ ಪೊಲೀಸರು ಮಹಿಳೆಯರನ್ನು ಬಂಧಿಸಿದ್ದಾರೆ. ಮುಹ್ಸಿನಾ (31), ಆಕೆಯ ಅತ್ತೆ ನಸೀಮಾ (62) ಮತ್ತು ಹಲೀಮಾ (65) ಬಂಧಿತರು. ಮುಹ್ಸಿನಾ ಮತ್ತು ನಸೀಮಾ ಪತ್ತನಂತಿಟ್ಟ ಜಿಲ್ಲೆಯವರಾಗಿದ್ದರೆ, ಹಲೀಮಾ ಮಲಪ್ಪುರಂನವರಾಗಿದ್ದಾರೆ. ವಂಚನೆ ಮತ್ತು ನಕಲಿಗೆ ಸಂಬಂಧಿಸಿದಂತೆ ಈ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯರು ಕೋವಿಡ್‌ ಪರೀಕ್ಷೆಗಳನ್ನು ಮಾಡಿರುವುದಾಗಿ ನೀಡಿರುವ ಗಾಜಿಯಾಬಾದ್‌ನ ಪ್ರಯೋಗಾಲಯದ ವರದಿಗಳನ್ನು ನಕಲಿ ಎಂದು ಪೊಲೀಸರು ನಿರಾಕರಿಸಿದ್ದಾರೆ ಎಂಬುದು ಎಫ್‌ಐಆರ್‌‌ನಿಂದ ತಿಳಿದುಬಂದಿದೆ. ಎಫ್ಐಆರ್‌ನಲ್ಲಿ ಪ್ರಯೋಗಾಲಯದ ಹೆಸರನ್ನು ಉಲ್ಲೇಖಿಸಿಲ್ಲ.

ಮುಹ್ಸಿನಾ ಅವರ ಪತಿ ಅಂಶಾದ್ ಬದ್ರುದ್ದೀನ್ ಮತ್ತು ಹಲೀಮಾ ಅವರ ಮಗ ಫಿರೋಜ್ ಖಾನ್ ಫೆಬ್ರವರಿಯಿಂದ ಉತ್ತರ ಪ್ರದೇಶದ ಜೈಲಿನಲ್ಲಿ ಇದ್ದಾರೆ. ಉತ್ತರ ಪ್ರದೇಶದಲ್ಲಿ ಅವರು ಬಾಂಬ್ ಸ್ಫೋಟಗಳನ್ನು ಯೋಜಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಬದ್ರುದ್ದೀನ್ ಸಹೋದರ ಅಜರ್, ಮಹಿಳೆಯರನ್ನು ಬಂಧಿಸಲು ಸಂಚು ರೂಪಿಸಿದ್ದಾರೆ ಎಂಬುದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸೆಪ್ಟೆಂಬರ್ 24ರಂದು ಬದ್ರುದ್ದೀನ್ ಮತ್ತು ಖಾನ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಪೊಲೀಸರು ಹಾಗೆ ಮಾಡಲಿಲ್ಲ. ಸೆಪ್ಟೆಂಬರ್ 25ರಂದು ಕುಟುಂಬ ಸದಸ್ಯರು ತಮ್ಮವರನ್ನು ಇರಿಸಲಾಗಿರುವ ಜೈಲಿಗೆ ಹೋದರು. ಬಂಧಿತರನ್ನು ಭೇಟಿಯಾಗಲು ಬಯಸಿದ್ದರು. ಆದರೆ ಪೊಲೀಸರು ಇದಕ್ಕೂ ಅವಕಾಶ ನೀಡಲಿಲ್ಲ. ಹಾಗಾಗಿ ಅವರು ತಂಗಿದ್ದ ಕೋಣೆಗೆ ಮರಳಿದರು. ಆ ಸಂಜೆ ನಂತರ, ಪೊಲೀಸರು ಹಿಂತಿರುಗಿ ಬಂದು ಅವರಲ್ಲಿ ಮೂವರನ್ನು ಬಂಧಿಸಿದ್ದಾರೆ. ಯುಎಪಿಎ ಅಡಿಯಲ್ಲಿ ಬಂಧಿಯಾಗಿರುವ ಸಂಬಂಧಿಕರನ್ನು ಭೇಟಿ ಮಾಡಲು ಹೋದ ಗುಂಪಿನ ಭಾಗವಾಗಿದ್ದ ಇತರರಲ್ಲಿ ಫಿರೋಜ್ ಖಾನ್ ಅವರ ಪತ್ನಿ ಸೌಜತ್ ಮತ್ತು ಆಕೆಯ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಮಕ್ತೂಬ್ ಮೀಡಿಯಾ ತಿಳಿಸಿದೆ.

 ಇದನ್ನೂ ಓದಿರಿ: ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...