Homeಕರೋನಾ ತಲ್ಲಣಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

ಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

- Advertisement -
- Advertisement -

ಟ್ವಿಟ್ಟರ್ ಮೂಲಕ ಆಕ್ಸಿಜನ್ ಸಿಲಿಂಡರ್‌ಗಾಗಿ ಮನವಿ ಮಾಡಿದ ಯುವಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಮೆಥಿ ಪೊಲೀಸರು ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ.

“ಭಯ ಉಂಟುಮಾಡುವ ಉದ್ದೇಶದಿಂದ, ವದಂತಿಯನ್ನು ಪ್ರಸಾರ ಮಾಡಿದ್ದಾರೆ. ಅವರ ಟ್ವೀಟ್‌ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಗೆ ತೊಂದರೆ ಉಂಟು ಮಾಡಿ ಅಪರಾಧ ಮಾಡಲು ಪ್ರೇರೇಪಿಸಲ್ಪಡಬಹುದು” ಎಂದು ಪೊಲೀಸರು ಅವರ ಮೇಲೆ ಆರೋಪವನ್ನು ಹೊರಿಸಿದ್ದಾರೆ.

ಸೋಮವಾರ ಸಂಜೆ, ಶಶಾಂಕ್ ಯಾದವ್ ಎಂಬವರು ನಟ ಸೋನು ಸೂದ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿ ಆಕ್ಸಿಜನ್ ಸಿಲಿಂಡರ್‌ಗೆ ಮನವಿ ಮಾಡಿದ್ದರು. ಆದರೆ ಅವರು ಕೊರೊನಾ ಅಥವಾ ಇನ್ಯಾವುದೆ ಕಾಯಿಲೆಯ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಅವರ ಸ್ನೇಹಿತರಲ್ಲೊಬ್ಬರಾದ ಅಂಕಿತ್ ಎಂಬವರು, ರಾತ್ರಿ 8: 33 ಕ್ಕೆ ಶಶಾಂಕ್‌ ಯಾದವ್ ಅವರ ಮನವಿಯನ್ನು ರಿಟ್ವೀಟ್ ಮಾಡಿದ್ದಾರೆ. ಜೊತೆಗೆ ಟ್ವಿಟರ್‌ನಲ್ಲಿ ದಿ ವೈರ್‌ನ ಹಿರಿಯ ಸಂಪಾದಕಿ ಅರ್ಫಾ ಖಾನೂಮ್ ಶೆರ್ವಾನಿ ಅವರಿಗೆ ಸಹಾಯ ಕೋರಿ ನೇರ ಸಂದೇಶವನ್ನು ಕಳುಹಿಸಿದ್ದರು.

ಕೊರೊನಾ ತೀವ್ರಗೊಂಡ ಹಿನ್ನಲೆಯಲ್ಲಿ ವೈರ್‌ ಸಂಪಾದಕಿ ಅರ್ಫಾ ಖಾನೂಂ ಅವರು ತನ್ನ ಸಾಮಾಜಿಕ ಜಾಲತಾಣವನ್ನು ಕೊರೊನಾ ಚಿಕಿತ್ಸೆಗೆ ಸಹಾಯ ಕೇಳುತ್ತಿರುವವರಿಗೆ ಸಹಾಯ ಮಾಡುವಂತೆ ಹೇಳಿಕೊಳ್ಳಲು ಬಳಸುತ್ತಿದ್ದಾರೆ. ಅವರು ಈ ರೀತಿಯ ಸಂದೇಶಗಳನ್ನು ಹಂಚಿ ಪ್ರಭಾವಿಗಳ ಗಮನಕ್ಕೆ ತರುತ್ತಿದ್ದರು. ಅದರಂತೆ ಮಧ್ಯರಾತ್ರಿ ಈ ಟ್ವೀಟ್‌ ಅನ್ನು ಅವರು ನೋಡಿದ್ದು, ನಂತರ ಅದನ್ನು ರೀಟ್ವೀಟ್ ಮಾಡಿದ್ದಾರೆ.

ನಂತರದ ಟ್ವೀಟ್‌‌ಗಳಲ್ಲಿ, ಅಮೆಥಿಯಿಂದ ಸಂಸದರಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಕೊರೊನಾ ರೋಗಿಗಳಿಗೆ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿರುವ ಲಕ್ನೋ ಮೂಲದ ಪ್ರಮುಖ ಸಂಪಾದಕ ಮತ್ತು ಸಮಾಜವಾದಿ ರಾಜಕಾರಣಿಯನ್ನು ಟ್ಯಾಗ್ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಇದಕ್ಕೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ತಾನು ಶಶಾಂಕ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ, ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ರಾತ್ರೆ 12:44 ಕ್ಕೆ ಅರ್ಫಾ ಖಾನೂಂ ಅವರಿಗೆ, ತನ್ನ ಸ್ನೇಹಿತನ ಅಜ್ಜ ನಿಧನರಾದರು ಎಂದು ಹೇಳಿ ಆಮ್ಲಜನಕ ಬೇಕೆಂದು ಕೇಳಿದ್ದ ಅಂಕಿತ್‌‌ ಅವರು ಸಂದೇಶ ಕಳುಹಿಸಿದ್ದಾರೆ.

ಜೊತೆಗೆ ಅರ್ಫಾ ಖಾನೂಂ ಅವರು ಸ್ಮೃತಿ ಇರಾನಿಗೆ ಈ ಮಾಹಿತಿಯನ್ನು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವೆ, “ಅವರ ಸಂಖ್ಯೆಗೆ CMO, ಅಮೇಥಿ ಪೊಲೀಸ್ ಸೇರಿದಂತೆ ನಾವೆಲ್ಲರೂ ಕರೆ ಮಾಡಿದ್ದೇವೆ. ಅವರು ತನ್ನ ಫೋನ್ ರಿಸೀವ್ ಮಾಡಬೇಕೆಂದು ನಾನು ಬಯಸಿದ್ದೆ. ನನ್ನ ಸಂತಾಪ” ಎಂದು ಹೇಳಿದ್ದರು.

ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್ ಎಚ್ಚರಿಕೆಗೆ ಎಚ್ಚೆತ್ತ ಚುನಾವಣಾ ಆಯೋಗ: ವಿಜಯೋತ್ಸವಗಳಿಗೆ ನಿಷೇಧ

ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ಪ್ರಯತ್ನಿಸಿದ್ದಕ್ಕೆ ಅಂಕಿತ್ ಅವರು ಸ್ಮೃತಿ ಇರಾನಿ ಮತ್ತು ಅರ್ಫಾ ಖಾನೂಂ ಅವರಿಗೆ ಧನ್ಯವಾದ ಕೂಡಾ ಅರ್ಪಿಸಿದ್ದರು.

ಇದಾಗಿ, ಏಪ್ರಿಲ್ 27 ರಂದು ಮಧ್ಯಾಹ್ನದ ಸಮಯದ ನಂತರ, ಅಮೆಥಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಅಮೆಥಿ ಮುಖ್ಯ ವೈದ್ಯಾಧಿಕಾರಿಯ ವರದಿಯನ್ನು ಅರ್ಫಾ ಖಾನೂಂ ಅವರ ಟ್ವೀಟ್‌ಗೆ ಉತ್ತರವಾಗಿ ಟ್ವೀಟ್ ಮಾಡಿದ್ದರು. ಈ ವರದಿಯು, ಯಾರಿಗೆ ಆಕ್ಸಿಜನ್‌ ಸಿಲಿಂಡರ್‌ ಬೇಕೆಂದು ಕೇಳಿದ್ದರೋ, ಆ ವ್ಯಕ್ತಿಯು ಕೊರೊನಾದಿಂದ ಬಳಲುತ್ತಿರಲಿಲ್ಲ ಹಾಗೂ ದುರ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿಸಿತ್ತು.

ಶಶಾಂಕ್ ಯಾದವ್ ಅಥವಾ ಅರ್ಫಾ ಖಾನೂಂ ಎಲ್ಲಿಯೂ, ‘ಕೊರೊನಾ ರೋಗಿ’ಗೆ ಆಮ್ಲಜನಕದ ಅಗತ್ಯವಿದೆ ಎಂದು ಹೇಳಿಲ್ಲವಾದರೂ, ಪೊಲೀಸರು ಇಬ್ಬರು ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘ

ಮಂಗಳವಾರ ಸಂಜೆ, ಅಮೆಥಿ ಪೊಲೀಸರು ಶಶಾಂಕ್‌ ಯಾದವ್ ಮತ್ತು ಅರ್ಫಾ ಖಾನೂಂ ಅವರು ಮೂಲ ಸಂದೇಶಗಳಿಗೆ ಪ್ರತ್ಯುತ್ತರವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ “ಅಜ್ಜ ಕೋವಿಡ್‌ನಿಂದ ಬಳಲುತ್ತಿರಲಿಲ್ಲ. ಅವರಿಗೆ ಆಮ್ಲಜನಕದ ಪ್ರಿಸ್ಕ್ರಿಪ್ಷನ್ ಕೂಡಾ ಇರಲಿಲ್ಲ, ಅವರು ‘ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ರೀತಿಯ ವದಂತಿಗಳನ್ನು ಹರಡುವುದು ಖಂಡನೀಯ ಮಾತ್ರವಲ್ಲ, ಕ್ರಿಮಿನಲ್ ಅಪರಾಧವಾಗಿದೆ” ಎಂದು ಬರೆದಿದ್ದರು.

ಪೊಲೀಸರ ಈ ಎಚ್ಚರಿಕೆಗೆ ಅರ್ಫಾ ಖಾನೂಂ ಅವರು ಪ್ರತಿಕ್ರಿಯಿಸಿ, “ಜನರು ಸಹಾಯ ಕೇಳುತ್ತಿದ್ದಾರೆ, ಜವಾಬ್ದಾರಿಯುತ ಪ್ರಜೆಯಾಗಿ ನನ್ನಲ್ಲಿ ಸಹಾಯ ಕೇಳುವ ಜನರಿಗಾಗಿ ನಾನು ಟ್ವೀಟ್ ಮಾಡುತ್ತೇನೆ. ಸತ್ಯವನ್ನು ಹುಡುಕುವುದು ಪೊಲೀಸರ ಕೆಲಸ. ನಾನು ಟ್ವೀಟ್ ಮಾಡಿರುವ 99% ಜನರ ಬಗ್ಗೆ ನನಗೆ ವೈಯಕ್ತಿಕ ಪರಿಚಯ ಇಲ್ಲ. ಆದರೆ ಭಾರತೀಯ ಪ್ರಜೆಯ ಕರ್ತವ್ಯವನ್ನು ನಿರ್ವಹಿಸುತ್ತಾ ನಾನು ಅವರ ಸಂದೇಶವನ್ನು ಜನರಿಗೆ ಹರಡುತ್ತಿದ್ದೇನೆ” ಎಂದು ತನ್ನೊಂದಿಗೆ ಸಹಾಯ ಕೋರಿದ್ದ ಸಂದೇಶದ ಸ್ಕ್ರೀನ್‌ಶಾಟ್‌ನೊಂದಿಗೆ ಬರೆದಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಇದರ ನಂತರ ಪೊಲೀಸರು ಶಶಾಂಕ್‌ ಯಾದವ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಂಕ್ರಾಮಿಕ ಕಾಯ್ದೆಯ ಸೆಕ್ಷನ್ 3 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 54 ರೊಂದಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269 ಮತ್ತು 505 (1) (ಬಿ) ಅಡಿಯಲ್ಲಿ  ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ದಾರ್ಥ್, ಪೊಲೀಸರ ಈ ಕ್ರಮವು ವೈದ್ಯಕೀಯ ಸಹಾಯಕ್ಕಾಗಿ ಹತಾಶರಾಗಿ ಕೇಳುವ ರೋಗಿಗಳ ಕುಟುಂಬಗಳನ್ನು ಬೆದರಿಸುವ ಪ್ರಯತ್ನವಾಗಿದೆ ಎಂದು ಖಂಡಿಸಿದ್ದಾರೆ.

“ಶಶಾಂಕ್‌ ಯಾದವ್ ವಿರುದ್ಧ ಪೊಲೀಸರು ಮಾಡಿರುವ ಆರೋಪಗಳು ಗಂಭೀರವಾಗಿದ್ದು, ಪೊಲೀಸರು ಈ ಪ್ರಕರಣವನ್ನು ಮುಂದುವರೆಸಿದರೆ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಚಿಕಿತ್ಸೆ ಪಡೆಯುವಲ್ಲಿನ ತೊಂದರೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಉತ್ತರ ಪ್ರದೇಶದಾದ್ಯಂತ ಶಶಾಂಕ್‌ ಯಾದವ್ ಅವರಂತಹ ಕುಟುಂಬಗಳಿಗೆ ಸಂದೇಶ ಕಳುಹಿಸುವುದು ಇದರ ಉದ್ದೇಶವಾಗಿದೆ” ಎಂದು ಸಿದ್ದಾರ್ಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...