Homeಕರೋನಾ ತಲ್ಲಣಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

ಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

- Advertisement -
- Advertisement -

ಟ್ವಿಟ್ಟರ್ ಮೂಲಕ ಆಕ್ಸಿಜನ್ ಸಿಲಿಂಡರ್‌ಗಾಗಿ ಮನವಿ ಮಾಡಿದ ಯುವಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಮೆಥಿ ಪೊಲೀಸರು ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ.

“ಭಯ ಉಂಟುಮಾಡುವ ಉದ್ದೇಶದಿಂದ, ವದಂತಿಯನ್ನು ಪ್ರಸಾರ ಮಾಡಿದ್ದಾರೆ. ಅವರ ಟ್ವೀಟ್‌ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಗೆ ತೊಂದರೆ ಉಂಟು ಮಾಡಿ ಅಪರಾಧ ಮಾಡಲು ಪ್ರೇರೇಪಿಸಲ್ಪಡಬಹುದು” ಎಂದು ಪೊಲೀಸರು ಅವರ ಮೇಲೆ ಆರೋಪವನ್ನು ಹೊರಿಸಿದ್ದಾರೆ.

ಸೋಮವಾರ ಸಂಜೆ, ಶಶಾಂಕ್ ಯಾದವ್ ಎಂಬವರು ನಟ ಸೋನು ಸೂದ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿ ಆಕ್ಸಿಜನ್ ಸಿಲಿಂಡರ್‌ಗೆ ಮನವಿ ಮಾಡಿದ್ದರು. ಆದರೆ ಅವರು ಕೊರೊನಾ ಅಥವಾ ಇನ್ಯಾವುದೆ ಕಾಯಿಲೆಯ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಅವರ ಸ್ನೇಹಿತರಲ್ಲೊಬ್ಬರಾದ ಅಂಕಿತ್ ಎಂಬವರು, ರಾತ್ರಿ 8: 33 ಕ್ಕೆ ಶಶಾಂಕ್‌ ಯಾದವ್ ಅವರ ಮನವಿಯನ್ನು ರಿಟ್ವೀಟ್ ಮಾಡಿದ್ದಾರೆ. ಜೊತೆಗೆ ಟ್ವಿಟರ್‌ನಲ್ಲಿ ದಿ ವೈರ್‌ನ ಹಿರಿಯ ಸಂಪಾದಕಿ ಅರ್ಫಾ ಖಾನೂಮ್ ಶೆರ್ವಾನಿ ಅವರಿಗೆ ಸಹಾಯ ಕೋರಿ ನೇರ ಸಂದೇಶವನ್ನು ಕಳುಹಿಸಿದ್ದರು.

ಕೊರೊನಾ ತೀವ್ರಗೊಂಡ ಹಿನ್ನಲೆಯಲ್ಲಿ ವೈರ್‌ ಸಂಪಾದಕಿ ಅರ್ಫಾ ಖಾನೂಂ ಅವರು ತನ್ನ ಸಾಮಾಜಿಕ ಜಾಲತಾಣವನ್ನು ಕೊರೊನಾ ಚಿಕಿತ್ಸೆಗೆ ಸಹಾಯ ಕೇಳುತ್ತಿರುವವರಿಗೆ ಸಹಾಯ ಮಾಡುವಂತೆ ಹೇಳಿಕೊಳ್ಳಲು ಬಳಸುತ್ತಿದ್ದಾರೆ. ಅವರು ಈ ರೀತಿಯ ಸಂದೇಶಗಳನ್ನು ಹಂಚಿ ಪ್ರಭಾವಿಗಳ ಗಮನಕ್ಕೆ ತರುತ್ತಿದ್ದರು. ಅದರಂತೆ ಮಧ್ಯರಾತ್ರಿ ಈ ಟ್ವೀಟ್‌ ಅನ್ನು ಅವರು ನೋಡಿದ್ದು, ನಂತರ ಅದನ್ನು ರೀಟ್ವೀಟ್ ಮಾಡಿದ್ದಾರೆ.

ನಂತರದ ಟ್ವೀಟ್‌‌ಗಳಲ್ಲಿ, ಅಮೆಥಿಯಿಂದ ಸಂಸದರಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಕೊರೊನಾ ರೋಗಿಗಳಿಗೆ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿರುವ ಲಕ್ನೋ ಮೂಲದ ಪ್ರಮುಖ ಸಂಪಾದಕ ಮತ್ತು ಸಮಾಜವಾದಿ ರಾಜಕಾರಣಿಯನ್ನು ಟ್ಯಾಗ್ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಇದಕ್ಕೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ತಾನು ಶಶಾಂಕ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ, ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ರಾತ್ರೆ 12:44 ಕ್ಕೆ ಅರ್ಫಾ ಖಾನೂಂ ಅವರಿಗೆ, ತನ್ನ ಸ್ನೇಹಿತನ ಅಜ್ಜ ನಿಧನರಾದರು ಎಂದು ಹೇಳಿ ಆಮ್ಲಜನಕ ಬೇಕೆಂದು ಕೇಳಿದ್ದ ಅಂಕಿತ್‌‌ ಅವರು ಸಂದೇಶ ಕಳುಹಿಸಿದ್ದಾರೆ.

ಜೊತೆಗೆ ಅರ್ಫಾ ಖಾನೂಂ ಅವರು ಸ್ಮೃತಿ ಇರಾನಿಗೆ ಈ ಮಾಹಿತಿಯನ್ನು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವೆ, “ಅವರ ಸಂಖ್ಯೆಗೆ CMO, ಅಮೇಥಿ ಪೊಲೀಸ್ ಸೇರಿದಂತೆ ನಾವೆಲ್ಲರೂ ಕರೆ ಮಾಡಿದ್ದೇವೆ. ಅವರು ತನ್ನ ಫೋನ್ ರಿಸೀವ್ ಮಾಡಬೇಕೆಂದು ನಾನು ಬಯಸಿದ್ದೆ. ನನ್ನ ಸಂತಾಪ” ಎಂದು ಹೇಳಿದ್ದರು.

ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್ ಎಚ್ಚರಿಕೆಗೆ ಎಚ್ಚೆತ್ತ ಚುನಾವಣಾ ಆಯೋಗ: ವಿಜಯೋತ್ಸವಗಳಿಗೆ ನಿಷೇಧ

ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ಪ್ರಯತ್ನಿಸಿದ್ದಕ್ಕೆ ಅಂಕಿತ್ ಅವರು ಸ್ಮೃತಿ ಇರಾನಿ ಮತ್ತು ಅರ್ಫಾ ಖಾನೂಂ ಅವರಿಗೆ ಧನ್ಯವಾದ ಕೂಡಾ ಅರ್ಪಿಸಿದ್ದರು.

ಇದಾಗಿ, ಏಪ್ರಿಲ್ 27 ರಂದು ಮಧ್ಯಾಹ್ನದ ಸಮಯದ ನಂತರ, ಅಮೆಥಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಅಮೆಥಿ ಮುಖ್ಯ ವೈದ್ಯಾಧಿಕಾರಿಯ ವರದಿಯನ್ನು ಅರ್ಫಾ ಖಾನೂಂ ಅವರ ಟ್ವೀಟ್‌ಗೆ ಉತ್ತರವಾಗಿ ಟ್ವೀಟ್ ಮಾಡಿದ್ದರು. ಈ ವರದಿಯು, ಯಾರಿಗೆ ಆಕ್ಸಿಜನ್‌ ಸಿಲಿಂಡರ್‌ ಬೇಕೆಂದು ಕೇಳಿದ್ದರೋ, ಆ ವ್ಯಕ್ತಿಯು ಕೊರೊನಾದಿಂದ ಬಳಲುತ್ತಿರಲಿಲ್ಲ ಹಾಗೂ ದುರ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿಸಿತ್ತು.

ಶಶಾಂಕ್ ಯಾದವ್ ಅಥವಾ ಅರ್ಫಾ ಖಾನೂಂ ಎಲ್ಲಿಯೂ, ‘ಕೊರೊನಾ ರೋಗಿ’ಗೆ ಆಮ್ಲಜನಕದ ಅಗತ್ಯವಿದೆ ಎಂದು ಹೇಳಿಲ್ಲವಾದರೂ, ಪೊಲೀಸರು ಇಬ್ಬರು ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘ

ಮಂಗಳವಾರ ಸಂಜೆ, ಅಮೆಥಿ ಪೊಲೀಸರು ಶಶಾಂಕ್‌ ಯಾದವ್ ಮತ್ತು ಅರ್ಫಾ ಖಾನೂಂ ಅವರು ಮೂಲ ಸಂದೇಶಗಳಿಗೆ ಪ್ರತ್ಯುತ್ತರವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ “ಅಜ್ಜ ಕೋವಿಡ್‌ನಿಂದ ಬಳಲುತ್ತಿರಲಿಲ್ಲ. ಅವರಿಗೆ ಆಮ್ಲಜನಕದ ಪ್ರಿಸ್ಕ್ರಿಪ್ಷನ್ ಕೂಡಾ ಇರಲಿಲ್ಲ, ಅವರು ‘ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ರೀತಿಯ ವದಂತಿಗಳನ್ನು ಹರಡುವುದು ಖಂಡನೀಯ ಮಾತ್ರವಲ್ಲ, ಕ್ರಿಮಿನಲ್ ಅಪರಾಧವಾಗಿದೆ” ಎಂದು ಬರೆದಿದ್ದರು.

ಪೊಲೀಸರ ಈ ಎಚ್ಚರಿಕೆಗೆ ಅರ್ಫಾ ಖಾನೂಂ ಅವರು ಪ್ರತಿಕ್ರಿಯಿಸಿ, “ಜನರು ಸಹಾಯ ಕೇಳುತ್ತಿದ್ದಾರೆ, ಜವಾಬ್ದಾರಿಯುತ ಪ್ರಜೆಯಾಗಿ ನನ್ನಲ್ಲಿ ಸಹಾಯ ಕೇಳುವ ಜನರಿಗಾಗಿ ನಾನು ಟ್ವೀಟ್ ಮಾಡುತ್ತೇನೆ. ಸತ್ಯವನ್ನು ಹುಡುಕುವುದು ಪೊಲೀಸರ ಕೆಲಸ. ನಾನು ಟ್ವೀಟ್ ಮಾಡಿರುವ 99% ಜನರ ಬಗ್ಗೆ ನನಗೆ ವೈಯಕ್ತಿಕ ಪರಿಚಯ ಇಲ್ಲ. ಆದರೆ ಭಾರತೀಯ ಪ್ರಜೆಯ ಕರ್ತವ್ಯವನ್ನು ನಿರ್ವಹಿಸುತ್ತಾ ನಾನು ಅವರ ಸಂದೇಶವನ್ನು ಜನರಿಗೆ ಹರಡುತ್ತಿದ್ದೇನೆ” ಎಂದು ತನ್ನೊಂದಿಗೆ ಸಹಾಯ ಕೋರಿದ್ದ ಸಂದೇಶದ ಸ್ಕ್ರೀನ್‌ಶಾಟ್‌ನೊಂದಿಗೆ ಬರೆದಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಇದರ ನಂತರ ಪೊಲೀಸರು ಶಶಾಂಕ್‌ ಯಾದವ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಂಕ್ರಾಮಿಕ ಕಾಯ್ದೆಯ ಸೆಕ್ಷನ್ 3 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 54 ರೊಂದಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269 ಮತ್ತು 505 (1) (ಬಿ) ಅಡಿಯಲ್ಲಿ  ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ದಾರ್ಥ್, ಪೊಲೀಸರ ಈ ಕ್ರಮವು ವೈದ್ಯಕೀಯ ಸಹಾಯಕ್ಕಾಗಿ ಹತಾಶರಾಗಿ ಕೇಳುವ ರೋಗಿಗಳ ಕುಟುಂಬಗಳನ್ನು ಬೆದರಿಸುವ ಪ್ರಯತ್ನವಾಗಿದೆ ಎಂದು ಖಂಡಿಸಿದ್ದಾರೆ.

“ಶಶಾಂಕ್‌ ಯಾದವ್ ವಿರುದ್ಧ ಪೊಲೀಸರು ಮಾಡಿರುವ ಆರೋಪಗಳು ಗಂಭೀರವಾಗಿದ್ದು, ಪೊಲೀಸರು ಈ ಪ್ರಕರಣವನ್ನು ಮುಂದುವರೆಸಿದರೆ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಚಿಕಿತ್ಸೆ ಪಡೆಯುವಲ್ಲಿನ ತೊಂದರೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಉತ್ತರ ಪ್ರದೇಶದಾದ್ಯಂತ ಶಶಾಂಕ್‌ ಯಾದವ್ ಅವರಂತಹ ಕುಟುಂಬಗಳಿಗೆ ಸಂದೇಶ ಕಳುಹಿಸುವುದು ಇದರ ಉದ್ದೇಶವಾಗಿದೆ” ಎಂದು ಸಿದ್ದಾರ್ಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...