Homeಕರೋನಾ ತಲ್ಲಣಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

ಟ್ವಿಟರ್‌ನಲ್ಲಿ ಆಕ್ಸಿಜನ್ ಕೇಳಿದ ಯುವಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿದ ಯುಪಿ ಪೊಲೀಸ್!

- Advertisement -
- Advertisement -

ಟ್ವಿಟ್ಟರ್ ಮೂಲಕ ಆಕ್ಸಿಜನ್ ಸಿಲಿಂಡರ್‌ಗಾಗಿ ಮನವಿ ಮಾಡಿದ ಯುವಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಮೆಥಿ ಪೊಲೀಸರು ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ.

“ಭಯ ಉಂಟುಮಾಡುವ ಉದ್ದೇಶದಿಂದ, ವದಂತಿಯನ್ನು ಪ್ರಸಾರ ಮಾಡಿದ್ದಾರೆ. ಅವರ ಟ್ವೀಟ್‌ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಗೆ ತೊಂದರೆ ಉಂಟು ಮಾಡಿ ಅಪರಾಧ ಮಾಡಲು ಪ್ರೇರೇಪಿಸಲ್ಪಡಬಹುದು” ಎಂದು ಪೊಲೀಸರು ಅವರ ಮೇಲೆ ಆರೋಪವನ್ನು ಹೊರಿಸಿದ್ದಾರೆ.

ಸೋಮವಾರ ಸಂಜೆ, ಶಶಾಂಕ್ ಯಾದವ್ ಎಂಬವರು ನಟ ಸೋನು ಸೂದ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿ ಆಕ್ಸಿಜನ್ ಸಿಲಿಂಡರ್‌ಗೆ ಮನವಿ ಮಾಡಿದ್ದರು. ಆದರೆ ಅವರು ಕೊರೊನಾ ಅಥವಾ ಇನ್ಯಾವುದೆ ಕಾಯಿಲೆಯ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಅವರ ಸ್ನೇಹಿತರಲ್ಲೊಬ್ಬರಾದ ಅಂಕಿತ್ ಎಂಬವರು, ರಾತ್ರಿ 8: 33 ಕ್ಕೆ ಶಶಾಂಕ್‌ ಯಾದವ್ ಅವರ ಮನವಿಯನ್ನು ರಿಟ್ವೀಟ್ ಮಾಡಿದ್ದಾರೆ. ಜೊತೆಗೆ ಟ್ವಿಟರ್‌ನಲ್ಲಿ ದಿ ವೈರ್‌ನ ಹಿರಿಯ ಸಂಪಾದಕಿ ಅರ್ಫಾ ಖಾನೂಮ್ ಶೆರ್ವಾನಿ ಅವರಿಗೆ ಸಹಾಯ ಕೋರಿ ನೇರ ಸಂದೇಶವನ್ನು ಕಳುಹಿಸಿದ್ದರು.

ಕೊರೊನಾ ತೀವ್ರಗೊಂಡ ಹಿನ್ನಲೆಯಲ್ಲಿ ವೈರ್‌ ಸಂಪಾದಕಿ ಅರ್ಫಾ ಖಾನೂಂ ಅವರು ತನ್ನ ಸಾಮಾಜಿಕ ಜಾಲತಾಣವನ್ನು ಕೊರೊನಾ ಚಿಕಿತ್ಸೆಗೆ ಸಹಾಯ ಕೇಳುತ್ತಿರುವವರಿಗೆ ಸಹಾಯ ಮಾಡುವಂತೆ ಹೇಳಿಕೊಳ್ಳಲು ಬಳಸುತ್ತಿದ್ದಾರೆ. ಅವರು ಈ ರೀತಿಯ ಸಂದೇಶಗಳನ್ನು ಹಂಚಿ ಪ್ರಭಾವಿಗಳ ಗಮನಕ್ಕೆ ತರುತ್ತಿದ್ದರು. ಅದರಂತೆ ಮಧ್ಯರಾತ್ರಿ ಈ ಟ್ವೀಟ್‌ ಅನ್ನು ಅವರು ನೋಡಿದ್ದು, ನಂತರ ಅದನ್ನು ರೀಟ್ವೀಟ್ ಮಾಡಿದ್ದಾರೆ.

ನಂತರದ ಟ್ವೀಟ್‌‌ಗಳಲ್ಲಿ, ಅಮೆಥಿಯಿಂದ ಸಂಸದರಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಕೊರೊನಾ ರೋಗಿಗಳಿಗೆ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿರುವ ಲಕ್ನೋ ಮೂಲದ ಪ್ರಮುಖ ಸಂಪಾದಕ ಮತ್ತು ಸಮಾಜವಾದಿ ರಾಜಕಾರಣಿಯನ್ನು ಟ್ಯಾಗ್ ಮಾಡಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು ‘ಸಂಕೇಶ್ವರ್‌’!

ಇದಕ್ಕೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ತಾನು ಶಶಾಂಕ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ, ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ರಾತ್ರೆ 12:44 ಕ್ಕೆ ಅರ್ಫಾ ಖಾನೂಂ ಅವರಿಗೆ, ತನ್ನ ಸ್ನೇಹಿತನ ಅಜ್ಜ ನಿಧನರಾದರು ಎಂದು ಹೇಳಿ ಆಮ್ಲಜನಕ ಬೇಕೆಂದು ಕೇಳಿದ್ದ ಅಂಕಿತ್‌‌ ಅವರು ಸಂದೇಶ ಕಳುಹಿಸಿದ್ದಾರೆ.

ಜೊತೆಗೆ ಅರ್ಫಾ ಖಾನೂಂ ಅವರು ಸ್ಮೃತಿ ಇರಾನಿಗೆ ಈ ಮಾಹಿತಿಯನ್ನು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವೆ, “ಅವರ ಸಂಖ್ಯೆಗೆ CMO, ಅಮೇಥಿ ಪೊಲೀಸ್ ಸೇರಿದಂತೆ ನಾವೆಲ್ಲರೂ ಕರೆ ಮಾಡಿದ್ದೇವೆ. ಅವರು ತನ್ನ ಫೋನ್ ರಿಸೀವ್ ಮಾಡಬೇಕೆಂದು ನಾನು ಬಯಸಿದ್ದೆ. ನನ್ನ ಸಂತಾಪ” ಎಂದು ಹೇಳಿದ್ದರು.

ಇದನ್ನೂ ಓದಿ: ಮದ್ರಾಸ್ ಹೈಕೋರ್ಟ್ ಎಚ್ಚರಿಕೆಗೆ ಎಚ್ಚೆತ್ತ ಚುನಾವಣಾ ಆಯೋಗ: ವಿಜಯೋತ್ಸವಗಳಿಗೆ ನಿಷೇಧ

ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ಪ್ರಯತ್ನಿಸಿದ್ದಕ್ಕೆ ಅಂಕಿತ್ ಅವರು ಸ್ಮೃತಿ ಇರಾನಿ ಮತ್ತು ಅರ್ಫಾ ಖಾನೂಂ ಅವರಿಗೆ ಧನ್ಯವಾದ ಕೂಡಾ ಅರ್ಪಿಸಿದ್ದರು.

ಇದಾಗಿ, ಏಪ್ರಿಲ್ 27 ರಂದು ಮಧ್ಯಾಹ್ನದ ಸಮಯದ ನಂತರ, ಅಮೆಥಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಅಮೆಥಿ ಮುಖ್ಯ ವೈದ್ಯಾಧಿಕಾರಿಯ ವರದಿಯನ್ನು ಅರ್ಫಾ ಖಾನೂಂ ಅವರ ಟ್ವೀಟ್‌ಗೆ ಉತ್ತರವಾಗಿ ಟ್ವೀಟ್ ಮಾಡಿದ್ದರು. ಈ ವರದಿಯು, ಯಾರಿಗೆ ಆಕ್ಸಿಜನ್‌ ಸಿಲಿಂಡರ್‌ ಬೇಕೆಂದು ಕೇಳಿದ್ದರೋ, ಆ ವ್ಯಕ್ತಿಯು ಕೊರೊನಾದಿಂದ ಬಳಲುತ್ತಿರಲಿಲ್ಲ ಹಾಗೂ ದುರ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿಸಿತ್ತು.

ಶಶಾಂಕ್ ಯಾದವ್ ಅಥವಾ ಅರ್ಫಾ ಖಾನೂಂ ಎಲ್ಲಿಯೂ, ‘ಕೊರೊನಾ ರೋಗಿ’ಗೆ ಆಮ್ಲಜನಕದ ಅಗತ್ಯವಿದೆ ಎಂದು ಹೇಳಿಲ್ಲವಾದರೂ, ಪೊಲೀಸರು ಇಬ್ಬರು ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘ

ಮಂಗಳವಾರ ಸಂಜೆ, ಅಮೆಥಿ ಪೊಲೀಸರು ಶಶಾಂಕ್‌ ಯಾದವ್ ಮತ್ತು ಅರ್ಫಾ ಖಾನೂಂ ಅವರು ಮೂಲ ಸಂದೇಶಗಳಿಗೆ ಪ್ರತ್ಯುತ್ತರವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ “ಅಜ್ಜ ಕೋವಿಡ್‌ನಿಂದ ಬಳಲುತ್ತಿರಲಿಲ್ಲ. ಅವರಿಗೆ ಆಮ್ಲಜನಕದ ಪ್ರಿಸ್ಕ್ರಿಪ್ಷನ್ ಕೂಡಾ ಇರಲಿಲ್ಲ, ಅವರು ‘ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ರೀತಿಯ ವದಂತಿಗಳನ್ನು ಹರಡುವುದು ಖಂಡನೀಯ ಮಾತ್ರವಲ್ಲ, ಕ್ರಿಮಿನಲ್ ಅಪರಾಧವಾಗಿದೆ” ಎಂದು ಬರೆದಿದ್ದರು.

ಪೊಲೀಸರ ಈ ಎಚ್ಚರಿಕೆಗೆ ಅರ್ಫಾ ಖಾನೂಂ ಅವರು ಪ್ರತಿಕ್ರಿಯಿಸಿ, “ಜನರು ಸಹಾಯ ಕೇಳುತ್ತಿದ್ದಾರೆ, ಜವಾಬ್ದಾರಿಯುತ ಪ್ರಜೆಯಾಗಿ ನನ್ನಲ್ಲಿ ಸಹಾಯ ಕೇಳುವ ಜನರಿಗಾಗಿ ನಾನು ಟ್ವೀಟ್ ಮಾಡುತ್ತೇನೆ. ಸತ್ಯವನ್ನು ಹುಡುಕುವುದು ಪೊಲೀಸರ ಕೆಲಸ. ನಾನು ಟ್ವೀಟ್ ಮಾಡಿರುವ 99% ಜನರ ಬಗ್ಗೆ ನನಗೆ ವೈಯಕ್ತಿಕ ಪರಿಚಯ ಇಲ್ಲ. ಆದರೆ ಭಾರತೀಯ ಪ್ರಜೆಯ ಕರ್ತವ್ಯವನ್ನು ನಿರ್ವಹಿಸುತ್ತಾ ನಾನು ಅವರ ಸಂದೇಶವನ್ನು ಜನರಿಗೆ ಹರಡುತ್ತಿದ್ದೇನೆ” ಎಂದು ತನ್ನೊಂದಿಗೆ ಸಹಾಯ ಕೋರಿದ್ದ ಸಂದೇಶದ ಸ್ಕ್ರೀನ್‌ಶಾಟ್‌ನೊಂದಿಗೆ ಬರೆದಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ಇದರ ನಂತರ ಪೊಲೀಸರು ಶಶಾಂಕ್‌ ಯಾದವ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಂಕ್ರಾಮಿಕ ಕಾಯ್ದೆಯ ಸೆಕ್ಷನ್ 3 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 54 ರೊಂದಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188, 269 ಮತ್ತು 505 (1) (ಬಿ) ಅಡಿಯಲ್ಲಿ  ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ದಾರ್ಥ್, ಪೊಲೀಸರ ಈ ಕ್ರಮವು ವೈದ್ಯಕೀಯ ಸಹಾಯಕ್ಕಾಗಿ ಹತಾಶರಾಗಿ ಕೇಳುವ ರೋಗಿಗಳ ಕುಟುಂಬಗಳನ್ನು ಬೆದರಿಸುವ ಪ್ರಯತ್ನವಾಗಿದೆ ಎಂದು ಖಂಡಿಸಿದ್ದಾರೆ.

“ಶಶಾಂಕ್‌ ಯಾದವ್ ವಿರುದ್ಧ ಪೊಲೀಸರು ಮಾಡಿರುವ ಆರೋಪಗಳು ಗಂಭೀರವಾಗಿದ್ದು, ಪೊಲೀಸರು ಈ ಪ್ರಕರಣವನ್ನು ಮುಂದುವರೆಸಿದರೆ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಚಿಕಿತ್ಸೆ ಪಡೆಯುವಲ್ಲಿನ ತೊಂದರೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಉತ್ತರ ಪ್ರದೇಶದಾದ್ಯಂತ ಶಶಾಂಕ್‌ ಯಾದವ್ ಅವರಂತಹ ಕುಟುಂಬಗಳಿಗೆ ಸಂದೇಶ ಕಳುಹಿಸುವುದು ಇದರ ಉದ್ದೇಶವಾಗಿದೆ” ಎಂದು ಸಿದ್ದಾರ್ಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...