HomeUncategorized'ಗೋರಕ್‌ಪುರ ಆಸ್ಪತ್ರೆ ದುರಂತ' ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಮಾಜಿ ವೈದ್ಯ ಕಫೀಲ್ ಖಾನ್ ವಿರುದ್ದ ಮತ್ತು ಅವರ ಪುಸ್ತಕ ಪ್ರಕಟಿಸಿದ ಐವರ ವಿರುದ್ಧ ಗೋರಖ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ದಿ ಗೋರಖ್‌ಪುರ ಆಸ್ಪಿಟಲ್‌ ಟ್ರಾಜಿಡಿ: ಎ ಡಾಕ್ಟರ್ಸ್ ಮೆಮೊಯಿರ್ ಆಫ್ ಎ ಡೆಡ್ಲಿ ಮೆಡಿಕಲ್ ಕ್ರೈಸಿಸ್’ (The Gorakhpur Hospital Tragedy: A Doctor’s Memoir of a Deadly Medical Crisis) ಪುಸ್ತಕವನ್ನು ಕಫೀಲ್ ಖಾನ್ ಬರೆದಿದ್ದರು. ಪುಸ್ತಕವನ್ನು 2021ರಲ್ಲಿ ಪ್ರಕಟಿಸಲಾಗಿದ್ದು, ಹಲವಾರು ಭಾರತೀಯ ಭಾಷೆಗಳಿಗೆ ಅದನ್ನು ಅನುವಾದಿಸಲಾಗಿತ್ತು.

ಲಕ್ನೋದ ಕೃಷ್ಣನಗರದ ಸ್ಟೇಷನ್ ಹೌಸ್ ಅಧಿಕಾರಿ ಜಿತೇಂದ್ರ ಪ್ರತಾಪ್ ಸಿಂಗ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕೃಷ್ಣನಗರದ ಉದ್ಯಮಿ ಮನೀಶ್ ಶುಕ್ಲಾ ಅವರ ದೂರಿನ ಮೇರೆಗೆ ಪುಸ್ತಕಗಳ ಮುದ್ರಣ ಮತ್ತು ನೋಂದಣಿ ಕಾಯ್ದೆಯ ಉಲ್ಲಂಘನೆಯ ಆರೋಪದಡಿ ಕಫೀಲ್ ಖಾನ್ ವಿರುದ್ದ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ದೂರಿನಲ್ಲಿ ಡಾ.ಕಫೀಲ್ ಅವರ ಪುಸ್ತಕವನ್ನು ಹಣ ಸಂಗ್ರಹಿಸುವ, ರಾಜ್ಯ ಸರ್ಕಾರವನ್ನು ಉರುಳಿಸುವ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯುವ ಸಾಧನವಾಗಿ ಬಳಸಲಾಗಿದೆ. ಸಮುದಾಯಗಳ ನಡುವೆ ಸಂಘರ್ಷದ ಪಿತೂರಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಫೀಲ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ 10 ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದರಲ್ಲಿ ವಿವಿಧ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೃತ್ಯಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳು, 295A , 153B ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಮುದ್ರಣದ ಹೆಸರು ಮತ್ತು ಮುದ್ರಣದ ಸ್ಥಳವನ್ನು ಸರಿಯಾಗಿ ಪ್ರಕಟಿಸದ ಆರೋಪದಲ್ಲಿ ಕಫೀಲ್ ಖಾನ್ ವಿರುದ್ಧ 1867ರ ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್‌ನ ಸೆಕ್ಷನ್ 3 ಮತ್ತು 1ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2017ರಲ್ಲಿ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುವಾಗ ಆಮ್ಲಜನಕದ ಕೊರತೆಯಿಂದಾಗಿ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಫೀಲ್ ಖಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರು ಆಕ್ಸಿಜನ್‌ ದುರಂತದ ವೇಳೆ  ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಅವರನ್ನು ಜೀವ ಸಂರಕ್ಷಕ ಎಂದು ಪ್ರಶಂಸಿಸಲಾಗಿತ್ತು. ಆದರೆ ಕರ್ತವ್ಯ ಲೋಪದ ಹೆಸರಿನಲ್ಲಿ ಕ್ರಮವನ್ನು ಎದುರಿಸಬೇಕಾಯಿತು ಮತ್ತು 6 ತಿಂಗಳು ಜೈಲಿನಲ್ಲಿ ಕಳೆಯಬೇಕಾಯಿತು. ಅಲಹಾಬಾದ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಅವರ ವಿರುದ್ಧದ ಆರೋಪಗಳನ್ನು ರದ್ದುಗೊಳಿಸಿತ್ತು.

ಏನಿದು ಗೋರಖ್‌ಪುರ ಆಸ್ಪತ್ರೆ ದುರಂತ?

ಗೋರಖ್‌ಪುರ ಆಸ್ಪತ್ರೆಯಲ್ಲಿ 60 ಮಕ್ಕಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದರು. ಈ ವೇಳೆ ಕಫೀಲ್ ಖಾನ್ ಅವರು ಶಿಶು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಸ್ಪತ್ರೆಯು ಬಾಕಿ ಮೊತ್ತ ಪಾವತಿಸದ ಕಾರಣ ಎಲ್ಲಾ ಆಮ್ಲಜನಕ ಪೂರೈಕೆದಾರ ಸಂಸ್ಥೆಗಳು ಸರಬರಾಜು ಸ್ಥಗಿತಗೊಳಿಸಿದ್ದವು. ಘಟನೆಯ ವೇಳೆ ಖಾನ್‌ ಅವರು ಮಕ್ಕಳ ಜೀವವನ್ನು ಉಳಿಸಲು ಪ್ರಯತ್ನಿಸಿದ್ದರು ಆದರೆ ದುರದೃಷ್ಟಾವಶಾತ್‌ ಘಟನೆಗೆ ಕಫೀಲ್ ಖಾನ್ ಅವರು ಕಾರಣ ಎಂದು 2017ರಲ್ಲಿ ಡಾ.ಕಪೀಲ್‌ ಖಾನ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ಕಫೀಲ್ ಖಾನ್ ಅವರು ವಾಸ್ತವವಾಗಿ ಈ ಮುಗ್ಧ ಮಕ್ಕಳ ಪ್ರಾಣ ಉಳಿಸಲು ಪ್ರಯತ್ನಿಸಿದ್ದರು. ಆದರೆ ಆಡಳಿತ ಮಂಡಳಿ ಮತ್ತು ಸರ್ಕಾರ ಅವರಿಗೆ ಸ್ಪಂದಿಸಿರಲಿಲ್ಲ. ಕೊನೆಗೆ ಪ್ರಕರಣದಲ್ಲಿ ಅವರು ತಪ್ಪಿತಸ್ಥರು ಎಂದು ಆಪಾದನೆ ಹೊರಿಸಲಾಗಿತ್ತು. ಈ ಮೂಲಕ ಉತ್ತರ ಪ್ರದೇಶ ಸರ್ಕಾರ ತನ್ನ ತಪ್ಪನ್ನು ಮರೆಮಾಚಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...