HomeUncategorized'ಗೋರಕ್‌ಪುರ ಆಸ್ಪತ್ರೆ ದುರಂತ' ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಮಾಜಿ ವೈದ್ಯ ಕಫೀಲ್ ಖಾನ್ ವಿರುದ್ದ ಮತ್ತು ಅವರ ಪುಸ್ತಕ ಪ್ರಕಟಿಸಿದ ಐವರ ವಿರುದ್ಧ ಗೋರಖ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ದಿ ಗೋರಖ್‌ಪುರ ಆಸ್ಪಿಟಲ್‌ ಟ್ರಾಜಿಡಿ: ಎ ಡಾಕ್ಟರ್ಸ್ ಮೆಮೊಯಿರ್ ಆಫ್ ಎ ಡೆಡ್ಲಿ ಮೆಡಿಕಲ್ ಕ್ರೈಸಿಸ್’ (The Gorakhpur Hospital Tragedy: A Doctor’s Memoir of a Deadly Medical Crisis) ಪುಸ್ತಕವನ್ನು ಕಫೀಲ್ ಖಾನ್ ಬರೆದಿದ್ದರು. ಪುಸ್ತಕವನ್ನು 2021ರಲ್ಲಿ ಪ್ರಕಟಿಸಲಾಗಿದ್ದು, ಹಲವಾರು ಭಾರತೀಯ ಭಾಷೆಗಳಿಗೆ ಅದನ್ನು ಅನುವಾದಿಸಲಾಗಿತ್ತು.

ಲಕ್ನೋದ ಕೃಷ್ಣನಗರದ ಸ್ಟೇಷನ್ ಹೌಸ್ ಅಧಿಕಾರಿ ಜಿತೇಂದ್ರ ಪ್ರತಾಪ್ ಸಿಂಗ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕೃಷ್ಣನಗರದ ಉದ್ಯಮಿ ಮನೀಶ್ ಶುಕ್ಲಾ ಅವರ ದೂರಿನ ಮೇರೆಗೆ ಪುಸ್ತಕಗಳ ಮುದ್ರಣ ಮತ್ತು ನೋಂದಣಿ ಕಾಯ್ದೆಯ ಉಲ್ಲಂಘನೆಯ ಆರೋಪದಡಿ ಕಫೀಲ್ ಖಾನ್ ವಿರುದ್ದ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ದೂರಿನಲ್ಲಿ ಡಾ.ಕಫೀಲ್ ಅವರ ಪುಸ್ತಕವನ್ನು ಹಣ ಸಂಗ್ರಹಿಸುವ, ರಾಜ್ಯ ಸರ್ಕಾರವನ್ನು ಉರುಳಿಸುವ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಂತೆ ತಡೆಯುವ ಸಾಧನವಾಗಿ ಬಳಸಲಾಗಿದೆ. ಸಮುದಾಯಗಳ ನಡುವೆ ಸಂಘರ್ಷದ ಪಿತೂರಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಫೀಲ್ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ 10 ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದರಲ್ಲಿ ವಿವಿಧ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೃತ್ಯಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳು, 295A , 153B ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಮುದ್ರಣದ ಹೆಸರು ಮತ್ತು ಮುದ್ರಣದ ಸ್ಥಳವನ್ನು ಸರಿಯಾಗಿ ಪ್ರಕಟಿಸದ ಆರೋಪದಲ್ಲಿ ಕಫೀಲ್ ಖಾನ್ ವಿರುದ್ಧ 1867ರ ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್‌ನ ಸೆಕ್ಷನ್ 3 ಮತ್ತು 1ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2017ರಲ್ಲಿ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುವಾಗ ಆಮ್ಲಜನಕದ ಕೊರತೆಯಿಂದಾಗಿ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಫೀಲ್ ಖಾನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರು ಆಕ್ಸಿಜನ್‌ ದುರಂತದ ವೇಳೆ  ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಅವರನ್ನು ಜೀವ ಸಂರಕ್ಷಕ ಎಂದು ಪ್ರಶಂಸಿಸಲಾಗಿತ್ತು. ಆದರೆ ಕರ್ತವ್ಯ ಲೋಪದ ಹೆಸರಿನಲ್ಲಿ ಕ್ರಮವನ್ನು ಎದುರಿಸಬೇಕಾಯಿತು ಮತ್ತು 6 ತಿಂಗಳು ಜೈಲಿನಲ್ಲಿ ಕಳೆಯಬೇಕಾಯಿತು. ಅಲಹಾಬಾದ್ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಅವರ ವಿರುದ್ಧದ ಆರೋಪಗಳನ್ನು ರದ್ದುಗೊಳಿಸಿತ್ತು.

ಏನಿದು ಗೋರಖ್‌ಪುರ ಆಸ್ಪತ್ರೆ ದುರಂತ?

ಗೋರಖ್‌ಪುರ ಆಸ್ಪತ್ರೆಯಲ್ಲಿ 60 ಮಕ್ಕಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದರು. ಈ ವೇಳೆ ಕಫೀಲ್ ಖಾನ್ ಅವರು ಶಿಶು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಸ್ಪತ್ರೆಯು ಬಾಕಿ ಮೊತ್ತ ಪಾವತಿಸದ ಕಾರಣ ಎಲ್ಲಾ ಆಮ್ಲಜನಕ ಪೂರೈಕೆದಾರ ಸಂಸ್ಥೆಗಳು ಸರಬರಾಜು ಸ್ಥಗಿತಗೊಳಿಸಿದ್ದವು. ಘಟನೆಯ ವೇಳೆ ಖಾನ್‌ ಅವರು ಮಕ್ಕಳ ಜೀವವನ್ನು ಉಳಿಸಲು ಪ್ರಯತ್ನಿಸಿದ್ದರು ಆದರೆ ದುರದೃಷ್ಟಾವಶಾತ್‌ ಘಟನೆಗೆ ಕಫೀಲ್ ಖಾನ್ ಅವರು ಕಾರಣ ಎಂದು 2017ರಲ್ಲಿ ಡಾ.ಕಪೀಲ್‌ ಖಾನ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ಕಫೀಲ್ ಖಾನ್ ಅವರು ವಾಸ್ತವವಾಗಿ ಈ ಮುಗ್ಧ ಮಕ್ಕಳ ಪ್ರಾಣ ಉಳಿಸಲು ಪ್ರಯತ್ನಿಸಿದ್ದರು. ಆದರೆ ಆಡಳಿತ ಮಂಡಳಿ ಮತ್ತು ಸರ್ಕಾರ ಅವರಿಗೆ ಸ್ಪಂದಿಸಿರಲಿಲ್ಲ. ಕೊನೆಗೆ ಪ್ರಕರಣದಲ್ಲಿ ಅವರು ತಪ್ಪಿತಸ್ಥರು ಎಂದು ಆಪಾದನೆ ಹೊರಿಸಲಾಗಿತ್ತು. ಈ ಮೂಲಕ ಉತ್ತರ ಪ್ರದೇಶ ಸರ್ಕಾರ ತನ್ನ ತಪ್ಪನ್ನು ಮರೆಮಾಚಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...