Homeಮುಖಪುಟಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮುಂಜಾನೆ ಹೈತ್ಯೆಗೈದಿದ್ದಾರೆ.

ನಿನ್ನೆ ತಾನೇ ಮಧ್ಯಪ್ರದೇಶದಲ್ಲಿ ಶರಣಾಗಿದ್ದ ವಿಕಾಸ್ ದುಬೆಯನ್ನು ಅಲ್ಲಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ಸಚೇಂದಿಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಳೆಯ ಕಾರಣದಿಂದ ಕಾನ್ಪುರ ಬಳಿಯ ಸಚೇಂದಿಯಲ್ಲಿ ಕಾರು ಲಯ ತಪ್ಪಿತು. ಆ ಸಂದರ್ಭದಲ್ಲಿ ವಿಕಾಸ್ ದುಬೆ ಪೊಲೀಸ್ ಒಬ್ಬನಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಆತನ ಮೇಲೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ವಿಶೇಷ ಕಾರ್ಯಪಡೆಯ ಪೊಲೀಸರು ತಿಳಿಸಿದ್ದಾರೆ.

“ಇಂದು ಅಪಘಾತದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕಾಸ್ ದುಬೆ ಸಾವನ್ನಪ್ಪಿದ್ದಾನೆ” ಎಂದು ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಹೇಳಿದ್ದಾರೆ.

ನಿನ್ನೆಯ ವಿಕಾಸ್ ದುಬೆ ಬಂಧನವನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನ ಪೂರ್ವ ನಿರ್ಧರಿತ ಎಂದು ಟೀಕಿಸಿದ್ದರು. ಪೊಲೀಸರ, ರಾಜಕಾರಣಿಗಳ ಬೆಂಬಲದಿಂದಲೇ ವಿಕಾಸ್ ದುಬೆ ಇಷ್ಟು ಬೆಳೆಯಲು ಸಾಧ್ಯವಾಗಿದ್ದು ಎಂದು ಟೀಕಿಸಿದ್ದರು. ಇನ್ನು ಕೆಲವರು ದುಬೆ ಶರಣಾದರೂ ಸಹ ಅವನನ್ನು ಎನ್‌ಕೌಂಟರ್ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು. ಅದನ್ನು ಉತ್ತರ ಪ್ರದೇಶ ಪೊಲೀಸರು ಇಂದು ನಿಜ ಮಾಡಿದ್ದಾರೆ.

ಇಂದಿನ ಪೊಲೀಸ್ ಎನ್‌ಕೌಂಟರ್‌ ಅನ್ನು ಬಹಳಷ್ಟು ಜನ ಇದು ನೈಸರ್ಗಿಕವಾದುದ್ದಲ್ಲ ಬದಲಿಗೆ ಇದು ಕೂಡ ಪೂರ್ವ ನಿಯೋಜಿತವಾದುದು ಎಂದು ಆರೋಪಿಸಿದ್ದಾರೆ. ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ರಾಜಕೀಯ ಸಂಪರ್ಕಗಳಿರುವ ಕ್ರಿಮಿನಲ್ ಒಬ್ಬ ಸರ್ಕಾರಿ ವ್ಯವಸ್ಥೆಯ ಕೈಗೆ ಸೆರೆ ಸಿಕ್ಕರೆ ಜನ ತಕ್ಷಣವೇ “ಓ.. ಅವನು ಎನ್ಕೌಂಟರ್ ಆಗ್ತಾನೆ” ಅಂತ ಪ್ರತಿಕ್ರಿಯಿಸ್ತಾರೆ.
ಮರುದಿನ ಬೆಳಗ್ಗೆ ಅವನು ಎನ್ಕೌಂಟರ್‌ಗೆ ಈಡಾಗುತ್ತಾನೆ.
ಇದು ಸಿನಿಮಾವೂ ಅಲ್ಲ, ಆಫ್ರಿಕಾದ ಯಾವುದೋ ಕಾಡು ರಾಜ್ಯದ ಸುದ್ದಿಯೂ ಅಲ್ಲ. ನಮ್ಮದೇ ದೇಶದ ಸುದ್ದಿ…
ನಾಡಿಗಿಂತ ಕಾಡೇ ಹೆಚ್ಚು ನ್ಯಾಯಯುತ ಈಗ!
ಇಂತಹದೊಂದು ವ್ಯವಸ್ಥೆಯ ಭಾಗ ಆಗಿರುವುದಕ್ಕೆ ತಲೆತಗ್ಗಿಸೋಣ.
#ShameOnUs ಎಂದು ಹಿರಿಯ ಪತ್ರಕರ್ತ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಇದನ್ನೂ ಓದಿ: ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...