Homeಮುಖಪುಟಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮುಂಜಾನೆ ಹೈತ್ಯೆಗೈದಿದ್ದಾರೆ.

ನಿನ್ನೆ ತಾನೇ ಮಧ್ಯಪ್ರದೇಶದಲ್ಲಿ ಶರಣಾಗಿದ್ದ ವಿಕಾಸ್ ದುಬೆಯನ್ನು ಅಲ್ಲಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ಸಚೇಂದಿಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಳೆಯ ಕಾರಣದಿಂದ ಕಾನ್ಪುರ ಬಳಿಯ ಸಚೇಂದಿಯಲ್ಲಿ ಕಾರು ಲಯ ತಪ್ಪಿತು. ಆ ಸಂದರ್ಭದಲ್ಲಿ ವಿಕಾಸ್ ದುಬೆ ಪೊಲೀಸ್ ಒಬ್ಬನಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಆತನ ಮೇಲೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ವಿಶೇಷ ಕಾರ್ಯಪಡೆಯ ಪೊಲೀಸರು ತಿಳಿಸಿದ್ದಾರೆ.

“ಇಂದು ಅಪಘಾತದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕಾಸ್ ದುಬೆ ಸಾವನ್ನಪ್ಪಿದ್ದಾನೆ” ಎಂದು ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಹೇಳಿದ್ದಾರೆ.

ನಿನ್ನೆಯ ವಿಕಾಸ್ ದುಬೆ ಬಂಧನವನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನ ಪೂರ್ವ ನಿರ್ಧರಿತ ಎಂದು ಟೀಕಿಸಿದ್ದರು. ಪೊಲೀಸರ, ರಾಜಕಾರಣಿಗಳ ಬೆಂಬಲದಿಂದಲೇ ವಿಕಾಸ್ ದುಬೆ ಇಷ್ಟು ಬೆಳೆಯಲು ಸಾಧ್ಯವಾಗಿದ್ದು ಎಂದು ಟೀಕಿಸಿದ್ದರು. ಇನ್ನು ಕೆಲವರು ದುಬೆ ಶರಣಾದರೂ ಸಹ ಅವನನ್ನು ಎನ್‌ಕೌಂಟರ್ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು. ಅದನ್ನು ಉತ್ತರ ಪ್ರದೇಶ ಪೊಲೀಸರು ಇಂದು ನಿಜ ಮಾಡಿದ್ದಾರೆ.

ಇಂದಿನ ಪೊಲೀಸ್ ಎನ್‌ಕೌಂಟರ್‌ ಅನ್ನು ಬಹಳಷ್ಟು ಜನ ಇದು ನೈಸರ್ಗಿಕವಾದುದ್ದಲ್ಲ ಬದಲಿಗೆ ಇದು ಕೂಡ ಪೂರ್ವ ನಿಯೋಜಿತವಾದುದು ಎಂದು ಆರೋಪಿಸಿದ್ದಾರೆ. ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ರಾಜಕೀಯ ಸಂಪರ್ಕಗಳಿರುವ ಕ್ರಿಮಿನಲ್ ಒಬ್ಬ ಸರ್ಕಾರಿ ವ್ಯವಸ್ಥೆಯ ಕೈಗೆ ಸೆರೆ ಸಿಕ್ಕರೆ ಜನ ತಕ್ಷಣವೇ “ಓ.. ಅವನು ಎನ್ಕೌಂಟರ್ ಆಗ್ತಾನೆ” ಅಂತ ಪ್ರತಿಕ್ರಿಯಿಸ್ತಾರೆ.
ಮರುದಿನ ಬೆಳಗ್ಗೆ ಅವನು ಎನ್ಕೌಂಟರ್‌ಗೆ ಈಡಾಗುತ್ತಾನೆ.
ಇದು ಸಿನಿಮಾವೂ ಅಲ್ಲ, ಆಫ್ರಿಕಾದ ಯಾವುದೋ ಕಾಡು ರಾಜ್ಯದ ಸುದ್ದಿಯೂ ಅಲ್ಲ. ನಮ್ಮದೇ ದೇಶದ ಸುದ್ದಿ…
ನಾಡಿಗಿಂತ ಕಾಡೇ ಹೆಚ್ಚು ನ್ಯಾಯಯುತ ಈಗ!
ಇಂತಹದೊಂದು ವ್ಯವಸ್ಥೆಯ ಭಾಗ ಆಗಿರುವುದಕ್ಕೆ ತಲೆತಗ್ಗಿಸೋಣ.
#ShameOnUs ಎಂದು ಹಿರಿಯ ಪತ್ರಕರ್ತ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಇದನ್ನೂ ಓದಿ: ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....