Homeಮುಖಪುಟಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ಕ್ರಿಮಿನಲ್ ವಿಕಾಸ್ ದುಬೆಯನ್ನು ಹತ್ಯೆಗೈದ ಯುಪಿ ಪೊಲೀಸ್!

ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

- Advertisement -
- Advertisement -

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮುಂಜಾನೆ ಹೈತ್ಯೆಗೈದಿದ್ದಾರೆ.

ನಿನ್ನೆ ತಾನೇ ಮಧ್ಯಪ್ರದೇಶದಲ್ಲಿ ಶರಣಾಗಿದ್ದ ವಿಕಾಸ್ ದುಬೆಯನ್ನು ಅಲ್ಲಿಂದ ಉತ್ತರ ಪ್ರದೇಶಕ್ಕೆ ಕರೆತರುವಾಗ ಸಚೇಂದಿಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಕಾನ್ಪುರಕ್ಕೆ ಕರೆದೊಯ್ಯುತ್ತಿದ್ದಾಗ ಮಳೆಯ ಕಾರಣದಿಂದ ಕಾನ್ಪುರ ಬಳಿಯ ಸಚೇಂದಿಯಲ್ಲಿ ಕಾರು ಲಯ ತಪ್ಪಿತು. ಆ ಸಂದರ್ಭದಲ್ಲಿ ವಿಕಾಸ್ ದುಬೆ ಪೊಲೀಸ್ ಒಬ್ಬನಿಂದ ಬಂದೂಕು ಕಸಿದುಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಆತನ ಮೇಲೆ ಗುಂಡಿಕ್ಕಿ ಕೊಲ್ಲಲಾಯಿತು ಎಂದು ವಿಶೇಷ ಕಾರ್ಯಪಡೆಯ ಪೊಲೀಸರು ತಿಳಿಸಿದ್ದಾರೆ.

“ಇಂದು ಅಪಘಾತದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕಾಸ್ ದುಬೆ ಸಾವನ್ನಪ್ಪಿದ್ದಾನೆ” ಎಂದು ಕಾನ್ಪುರದ ಇನ್ಸ್ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಹೇಳಿದ್ದಾರೆ.

ನಿನ್ನೆಯ ವಿಕಾಸ್ ದುಬೆ ಬಂಧನವನ್ನು ವಿರೋಧ ಪಕ್ಷಗಳು ಸೇರಿದಂತೆ ಹಲವಾರು ಜನ ಪೂರ್ವ ನಿರ್ಧರಿತ ಎಂದು ಟೀಕಿಸಿದ್ದರು. ಪೊಲೀಸರ, ರಾಜಕಾರಣಿಗಳ ಬೆಂಬಲದಿಂದಲೇ ವಿಕಾಸ್ ದುಬೆ ಇಷ್ಟು ಬೆಳೆಯಲು ಸಾಧ್ಯವಾಗಿದ್ದು ಎಂದು ಟೀಕಿಸಿದ್ದರು. ಇನ್ನು ಕೆಲವರು ದುಬೆ ಶರಣಾದರೂ ಸಹ ಅವನನ್ನು ಎನ್‌ಕೌಂಟರ್ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದರು. ಅದನ್ನು ಉತ್ತರ ಪ್ರದೇಶ ಪೊಲೀಸರು ಇಂದು ನಿಜ ಮಾಡಿದ್ದಾರೆ.

ಇಂದಿನ ಪೊಲೀಸ್ ಎನ್‌ಕೌಂಟರ್‌ ಅನ್ನು ಬಹಳಷ್ಟು ಜನ ಇದು ನೈಸರ್ಗಿಕವಾದುದ್ದಲ್ಲ ಬದಲಿಗೆ ಇದು ಕೂಡ ಪೂರ್ವ ನಿಯೋಜಿತವಾದುದು ಎಂದು ಆರೋಪಿಸಿದ್ದಾರೆ. ವಿಕಾಸ್ ದುಬೆ ಬದುಕಿದ್ದಲ್ಲಿ ವಿಚಾರಣೆ ವೇಳೆ ಆತನ ಕುಕೃತ್ಯಗಳಲ್ಲಿ ಭಾಗಿಯಾದ ಮತ್ತು ಆತನಿಗೆ ರಕ್ಷಣೆ ನೀಡಿದ ಪೊಲೀಸರ ಮತ್ತು ರಾಜಕಾರಣಿಗಳ ಹೆಸರು ಬಾಯಿ ಬಿಡುತ್ತಾನೆಂದು ಆತನನ್ನು ಪೊಲೀಸರು ಮುಗಿಸಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

ರಾಜಕೀಯ ಸಂಪರ್ಕಗಳಿರುವ ಕ್ರಿಮಿನಲ್ ಒಬ್ಬ ಸರ್ಕಾರಿ ವ್ಯವಸ್ಥೆಯ ಕೈಗೆ ಸೆರೆ ಸಿಕ್ಕರೆ ಜನ ತಕ್ಷಣವೇ “ಓ.. ಅವನು ಎನ್ಕೌಂಟರ್ ಆಗ್ತಾನೆ” ಅಂತ ಪ್ರತಿಕ್ರಿಯಿಸ್ತಾರೆ.
ಮರುದಿನ ಬೆಳಗ್ಗೆ ಅವನು ಎನ್ಕೌಂಟರ್‌ಗೆ ಈಡಾಗುತ್ತಾನೆ.
ಇದು ಸಿನಿಮಾವೂ ಅಲ್ಲ, ಆಫ್ರಿಕಾದ ಯಾವುದೋ ಕಾಡು ರಾಜ್ಯದ ಸುದ್ದಿಯೂ ಅಲ್ಲ. ನಮ್ಮದೇ ದೇಶದ ಸುದ್ದಿ…
ನಾಡಿಗಿಂತ ಕಾಡೇ ಹೆಚ್ಚು ನ್ಯಾಯಯುತ ಈಗ!
ಇಂತಹದೊಂದು ವ್ಯವಸ್ಥೆಯ ಭಾಗ ಆಗಿರುವುದಕ್ಕೆ ತಲೆತಗ್ಗಿಸೋಣ.
#ShameOnUs ಎಂದು ಹಿರಿಯ ಪತ್ರಕರ್ತ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪೊಲೀಸ್ ಹಾಗೂ ರಾಜಕೀಯ ಸಂಬಂಧವೆ ವಿಕಾಸ್ ದುಬೆಯ ಅಪರಾಧಕ್ಕೆ ಕಾರಣ: ಇದು ಎಲ್ಲ ರಾಜ್ಯಗಳಿಗೂ ಪಾಠ

ಇದನ್ನೂ ಓದಿ: ವಿಕಾಸ್ ದುಬೆಯ ಬಂಧನ ಪೂರ್ವ ನಿರ್ಧರಿತ: ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...