Homeಮುಖಪುಟಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ...

- Advertisement -
- Advertisement -

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಚಿತ್ರಹಿಂಸೆ ಅನುಭವಿಸಿ ಮೃತಪಟ್ಟ ದಲಿತ ಯುವತಿಯ ಕುಟುಂಬದ ಭೇಟಿಗೆ ಹೊರಟಿದ್ದ ರಾಷ್ಟ್ರೀಯ ಲೋಕ ದಳ ಮತ್ತು ಸಮಾಜವಾದಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಯುಪಿ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆಯಂತೆ ಎಸ್​​ಪಿಯ 11 ಮಂದಿ ತಂಡದ ನಿಯೋಗ ಇಂದು ಹತ್ರಾಸ್​​ಗೆ ಭೇಟಿ ನೀಡಲು ಮುಂದಾಗಿತ್ತು. ಈ ವೇಳೆ ಉತ್ತರ ಪ್ರದೇಶದ ಪೊಲೀಸರು ಅವರನ್ನ ತಡೆದಿದ್ದಾರೆ. ಮಾತಿನ ಚಕಮಕಿ ನಡೆಯುತ್ತಿದ್ದಾಗ ಏಕಾಏಕಿ ಪೊಲೀಸರು ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಎಸ್‌ಪಿ ಜಿಲ್ಲಾಧ್ಯಕ್ಷ ಗಿರೀಶ್ ಯಾದವ್ ಸೇರಿದಂತೆ ಅನೇಕ ಕಾರ್ಯಕರ್ತರು ಲಾಠಿಚಾರ್ಜ್‌ನಲ್ಲಿ  ಗಾಯಗೊಂಡಿದ್ದಾರೆ. ಹತ್ರಾಸ್​​ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಆಗಿರೋದ್ರಿಂದ ಯಾರಿಗೂ ಸಂತ್ರಸ್ತ ಕುಟುಂಬದ ಭೇಟಿಗೆ ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೆ ಎಸ್​ಪಿ ನಿಯೋಗ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಕಾರ್ಯಕರ್ತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ಒಳ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಎಸ್​ಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​ ಮಾಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!


ಎಸ್​ಪಿ ನಿಯೋಗದಲ್ಲಿ ಉತ್ತರ ಪ್ರದೇಶದ ಎಸ್​ಪಿ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್, ರಾಮ್‌ಜಿ ಲಾಲ್ ಸುಮನ್, ಧರ್ಮೇಂದ್ರ ಯಾದವ್, ಅಕ್ಷಯ್ ಯಾದವ್, ಜುಗಲ್ ಕಿಶೋರ್ ವಾಲ್ಮೀಕಿ, ಜಸ್ವಂತ್ ಯಾದವ್, ಉದಯವೀರ್ ಸಿಂಗ್, ಸಂಜಯ್ ಲೆದರ್, ಅತುಲ್ ಪ್ರಧಾನ್, ರಾಮ್ ಕರಣ್ ನಿರ್ಮಲ್, ರಾಮ್ ಗೋಪಾಲ್ ಬಾಗೆಲ್ ಮೊದಲಾದವರು ಇದ್ದರು.

ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮುಖಂಡ ಜಯಂತ್ ಚೌಧರಿ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ಪಕ್ಷದ ಕೆಲವು ಕಾರ್ಯಕರ್ತರು ತಮ್ಮ ನಾಯಕನನ್ನು ಲಾಠಿಗಳಿಂದ ರಕ್ಷಿಸಲು ತಡೆಗೋಡೆ ರಚಿಸಿದ್ದರು. ಕೊನೆಗೂ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾದರು.

ಪೊಲೀಸರು ನಡೆಸಿರುವ ಲಾಠಿಚಾರ್ಜ್ ದೃಶ್ಯಾವಳಿಯನ್ನು ಗಮನಿಸಿ

’ಲಾಠಿ ಚಾರ್ಜ್‌ಗೆ ಒಳಗಾದ ಆರ್‌ಎಲ್‌ಡಿ ಮುಖಂಡ ಜಯಂತ್ ಚೌಧರಿ ಟ್ವೀಟ್ ಮಾಡಿ, ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ. ಅಕ್ಟೋಬರ್‌ 8ರಂದು ಮುಜಫರ್ ನಗರದಲ್ಲಿ ಭೇಟಿಯಾಗೋಣ’ ಎಂದಿದ್ದಾರೆ.

“ಹಳ್ಳಿಯೊಳಗೆ 5ಕ್ಕಿಂತ ಹೆಚ್ಚು ಜನರ ನಿಯೋಗದ ಭೇಟಿಯನ್ನ ನಿರ್ಬಂಧಿಸಲಾಗಿದೆ. ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಿಯೋಗಗಳು ಬಂದವು, ನಾವು 5 ಹೆಸರುಗಳನ್ನು ಪಟ್ಟಿ ಮಾಡಿದ್ದೇವೆ ಮತ್ತು ಅವರಿಗೆ ಅಲ್ಲಿಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ ಅವರ ಕಾರ್ಯಕರ್ತರು  ಮಹಿಳಾ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು. ಹಾಗಾಗಿ ಲಾಠಿಚಾರ್ಜ್ ಮಾಡಬೇಕಾಯಿತು” ಎಂದು ಹತ್ರಾಸ್ ಸದರ್ ಎಸ್‌ಡಿಎಂ ಹೇಳಿದ್ದಾರೆ.

ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಕೂಡ ಮೊದಲ ಪ್ರಯತ್ನದಲ್ಲಿ ತಡೆ ಹಿಡಿದು ಬಂಧಿಸಲಾಗಿತ್ತು. ನಂತರ ನಿನ್ನೆ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು. ಇಂದು ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಕೂಡ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ವೈ ಪ್ಲಸ್ ಭದ್ರತೆ ಕೊಡಿ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...