Homeಮುಖಪುಟಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ...

- Advertisement -
- Advertisement -

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಚಿತ್ರಹಿಂಸೆ ಅನುಭವಿಸಿ ಮೃತಪಟ್ಟ ದಲಿತ ಯುವತಿಯ ಕುಟುಂಬದ ಭೇಟಿಗೆ ಹೊರಟಿದ್ದ ರಾಷ್ಟ್ರೀಯ ಲೋಕ ದಳ ಮತ್ತು ಸಮಾಜವಾದಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಯುಪಿ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆಯಂತೆ ಎಸ್​​ಪಿಯ 11 ಮಂದಿ ತಂಡದ ನಿಯೋಗ ಇಂದು ಹತ್ರಾಸ್​​ಗೆ ಭೇಟಿ ನೀಡಲು ಮುಂದಾಗಿತ್ತು. ಈ ವೇಳೆ ಉತ್ತರ ಪ್ರದೇಶದ ಪೊಲೀಸರು ಅವರನ್ನ ತಡೆದಿದ್ದಾರೆ. ಮಾತಿನ ಚಕಮಕಿ ನಡೆಯುತ್ತಿದ್ದಾಗ ಏಕಾಏಕಿ ಪೊಲೀಸರು ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಎಸ್‌ಪಿ ಜಿಲ್ಲಾಧ್ಯಕ್ಷ ಗಿರೀಶ್ ಯಾದವ್ ಸೇರಿದಂತೆ ಅನೇಕ ಕಾರ್ಯಕರ್ತರು ಲಾಠಿಚಾರ್ಜ್‌ನಲ್ಲಿ  ಗಾಯಗೊಂಡಿದ್ದಾರೆ. ಹತ್ರಾಸ್​​ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಆಗಿರೋದ್ರಿಂದ ಯಾರಿಗೂ ಸಂತ್ರಸ್ತ ಕುಟುಂಬದ ಭೇಟಿಗೆ ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೆ ಎಸ್​ಪಿ ನಿಯೋಗ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಕಾರ್ಯಕರ್ತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ಒಳ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಎಸ್​ಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​ ಮಾಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!


ಎಸ್​ಪಿ ನಿಯೋಗದಲ್ಲಿ ಉತ್ತರ ಪ್ರದೇಶದ ಎಸ್​ಪಿ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್, ರಾಮ್‌ಜಿ ಲಾಲ್ ಸುಮನ್, ಧರ್ಮೇಂದ್ರ ಯಾದವ್, ಅಕ್ಷಯ್ ಯಾದವ್, ಜುಗಲ್ ಕಿಶೋರ್ ವಾಲ್ಮೀಕಿ, ಜಸ್ವಂತ್ ಯಾದವ್, ಉದಯವೀರ್ ಸಿಂಗ್, ಸಂಜಯ್ ಲೆದರ್, ಅತುಲ್ ಪ್ರಧಾನ್, ರಾಮ್ ಕರಣ್ ನಿರ್ಮಲ್, ರಾಮ್ ಗೋಪಾಲ್ ಬಾಗೆಲ್ ಮೊದಲಾದವರು ಇದ್ದರು.

ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮುಖಂಡ ಜಯಂತ್ ಚೌಧರಿ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ಪಕ್ಷದ ಕೆಲವು ಕಾರ್ಯಕರ್ತರು ತಮ್ಮ ನಾಯಕನನ್ನು ಲಾಠಿಗಳಿಂದ ರಕ್ಷಿಸಲು ತಡೆಗೋಡೆ ರಚಿಸಿದ್ದರು. ಕೊನೆಗೂ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾದರು.

ಪೊಲೀಸರು ನಡೆಸಿರುವ ಲಾಠಿಚಾರ್ಜ್ ದೃಶ್ಯಾವಳಿಯನ್ನು ಗಮನಿಸಿ

’ಲಾಠಿ ಚಾರ್ಜ್‌ಗೆ ಒಳಗಾದ ಆರ್‌ಎಲ್‌ಡಿ ಮುಖಂಡ ಜಯಂತ್ ಚೌಧರಿ ಟ್ವೀಟ್ ಮಾಡಿ, ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ. ಅಕ್ಟೋಬರ್‌ 8ರಂದು ಮುಜಫರ್ ನಗರದಲ್ಲಿ ಭೇಟಿಯಾಗೋಣ’ ಎಂದಿದ್ದಾರೆ.

“ಹಳ್ಳಿಯೊಳಗೆ 5ಕ್ಕಿಂತ ಹೆಚ್ಚು ಜನರ ನಿಯೋಗದ ಭೇಟಿಯನ್ನ ನಿರ್ಬಂಧಿಸಲಾಗಿದೆ. ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಿಯೋಗಗಳು ಬಂದವು, ನಾವು 5 ಹೆಸರುಗಳನ್ನು ಪಟ್ಟಿ ಮಾಡಿದ್ದೇವೆ ಮತ್ತು ಅವರಿಗೆ ಅಲ್ಲಿಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ ಅವರ ಕಾರ್ಯಕರ್ತರು  ಮಹಿಳಾ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು. ಹಾಗಾಗಿ ಲಾಠಿಚಾರ್ಜ್ ಮಾಡಬೇಕಾಯಿತು” ಎಂದು ಹತ್ರಾಸ್ ಸದರ್ ಎಸ್‌ಡಿಎಂ ಹೇಳಿದ್ದಾರೆ.

ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಕೂಡ ಮೊದಲ ಪ್ರಯತ್ನದಲ್ಲಿ ತಡೆ ಹಿಡಿದು ಬಂಧಿಸಲಾಗಿತ್ತು. ನಂತರ ನಿನ್ನೆ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು. ಇಂದು ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಕೂಡ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ವೈ ಪ್ಲಸ್ ಭದ್ರತೆ ಕೊಡಿ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....