Homeಮುಖಪುಟಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ...

- Advertisement -
- Advertisement -

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಚಿತ್ರಹಿಂಸೆ ಅನುಭವಿಸಿ ಮೃತಪಟ್ಟ ದಲಿತ ಯುವತಿಯ ಕುಟುಂಬದ ಭೇಟಿಗೆ ಹೊರಟಿದ್ದ ರಾಷ್ಟ್ರೀಯ ಲೋಕ ದಳ ಮತ್ತು ಸಮಾಜವಾದಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಯುಪಿ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆಯಂತೆ ಎಸ್​​ಪಿಯ 11 ಮಂದಿ ತಂಡದ ನಿಯೋಗ ಇಂದು ಹತ್ರಾಸ್​​ಗೆ ಭೇಟಿ ನೀಡಲು ಮುಂದಾಗಿತ್ತು. ಈ ವೇಳೆ ಉತ್ತರ ಪ್ರದೇಶದ ಪೊಲೀಸರು ಅವರನ್ನ ತಡೆದಿದ್ದಾರೆ. ಮಾತಿನ ಚಕಮಕಿ ನಡೆಯುತ್ತಿದ್ದಾಗ ಏಕಾಏಕಿ ಪೊಲೀಸರು ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಎಸ್‌ಪಿ ಜಿಲ್ಲಾಧ್ಯಕ್ಷ ಗಿರೀಶ್ ಯಾದವ್ ಸೇರಿದಂತೆ ಅನೇಕ ಕಾರ್ಯಕರ್ತರು ಲಾಠಿಚಾರ್ಜ್‌ನಲ್ಲಿ  ಗಾಯಗೊಂಡಿದ್ದಾರೆ. ಹತ್ರಾಸ್​​ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಆಗಿರೋದ್ರಿಂದ ಯಾರಿಗೂ ಸಂತ್ರಸ್ತ ಕುಟುಂಬದ ಭೇಟಿಗೆ ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೆ ಎಸ್​ಪಿ ನಿಯೋಗ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಕಾರ್ಯಕರ್ತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ಒಳ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಎಸ್​ಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​ ಮಾಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!


ಎಸ್​ಪಿ ನಿಯೋಗದಲ್ಲಿ ಉತ್ತರ ಪ್ರದೇಶದ ಎಸ್​ಪಿ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್, ರಾಮ್‌ಜಿ ಲಾಲ್ ಸುಮನ್, ಧರ್ಮೇಂದ್ರ ಯಾದವ್, ಅಕ್ಷಯ್ ಯಾದವ್, ಜುಗಲ್ ಕಿಶೋರ್ ವಾಲ್ಮೀಕಿ, ಜಸ್ವಂತ್ ಯಾದವ್, ಉದಯವೀರ್ ಸಿಂಗ್, ಸಂಜಯ್ ಲೆದರ್, ಅತುಲ್ ಪ್ರಧಾನ್, ರಾಮ್ ಕರಣ್ ನಿರ್ಮಲ್, ರಾಮ್ ಗೋಪಾಲ್ ಬಾಗೆಲ್ ಮೊದಲಾದವರು ಇದ್ದರು.

ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮುಖಂಡ ಜಯಂತ್ ಚೌಧರಿ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ಪಕ್ಷದ ಕೆಲವು ಕಾರ್ಯಕರ್ತರು ತಮ್ಮ ನಾಯಕನನ್ನು ಲಾಠಿಗಳಿಂದ ರಕ್ಷಿಸಲು ತಡೆಗೋಡೆ ರಚಿಸಿದ್ದರು. ಕೊನೆಗೂ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾದರು.

ಪೊಲೀಸರು ನಡೆಸಿರುವ ಲಾಠಿಚಾರ್ಜ್ ದೃಶ್ಯಾವಳಿಯನ್ನು ಗಮನಿಸಿ

’ಲಾಠಿ ಚಾರ್ಜ್‌ಗೆ ಒಳಗಾದ ಆರ್‌ಎಲ್‌ಡಿ ಮುಖಂಡ ಜಯಂತ್ ಚೌಧರಿ ಟ್ವೀಟ್ ಮಾಡಿ, ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ. ಅಕ್ಟೋಬರ್‌ 8ರಂದು ಮುಜಫರ್ ನಗರದಲ್ಲಿ ಭೇಟಿಯಾಗೋಣ’ ಎಂದಿದ್ದಾರೆ.

“ಹಳ್ಳಿಯೊಳಗೆ 5ಕ್ಕಿಂತ ಹೆಚ್ಚು ಜನರ ನಿಯೋಗದ ಭೇಟಿಯನ್ನ ನಿರ್ಬಂಧಿಸಲಾಗಿದೆ. ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಿಯೋಗಗಳು ಬಂದವು, ನಾವು 5 ಹೆಸರುಗಳನ್ನು ಪಟ್ಟಿ ಮಾಡಿದ್ದೇವೆ ಮತ್ತು ಅವರಿಗೆ ಅಲ್ಲಿಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ ಅವರ ಕಾರ್ಯಕರ್ತರು  ಮಹಿಳಾ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು. ಹಾಗಾಗಿ ಲಾಠಿಚಾರ್ಜ್ ಮಾಡಬೇಕಾಯಿತು” ಎಂದು ಹತ್ರಾಸ್ ಸದರ್ ಎಸ್‌ಡಿಎಂ ಹೇಳಿದ್ದಾರೆ.

ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಕೂಡ ಮೊದಲ ಪ್ರಯತ್ನದಲ್ಲಿ ತಡೆ ಹಿಡಿದು ಬಂಧಿಸಲಾಗಿತ್ತು. ನಂತರ ನಿನ್ನೆ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು. ಇಂದು ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಕೂಡ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ವೈ ಪ್ಲಸ್ ಭದ್ರತೆ ಕೊಡಿ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...