Homeಮುಖಪುಟಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ...

- Advertisement -
- Advertisement -

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಚಿತ್ರಹಿಂಸೆ ಅನುಭವಿಸಿ ಮೃತಪಟ್ಟ ದಲಿತ ಯುವತಿಯ ಕುಟುಂಬದ ಭೇಟಿಗೆ ಹೊರಟಿದ್ದ ರಾಷ್ಟ್ರೀಯ ಲೋಕ ದಳ ಮತ್ತು ಸಮಾಜವಾದಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಯುಪಿ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆಯಂತೆ ಎಸ್​​ಪಿಯ 11 ಮಂದಿ ತಂಡದ ನಿಯೋಗ ಇಂದು ಹತ್ರಾಸ್​​ಗೆ ಭೇಟಿ ನೀಡಲು ಮುಂದಾಗಿತ್ತು. ಈ ವೇಳೆ ಉತ್ತರ ಪ್ರದೇಶದ ಪೊಲೀಸರು ಅವರನ್ನ ತಡೆದಿದ್ದಾರೆ. ಮಾತಿನ ಚಕಮಕಿ ನಡೆಯುತ್ತಿದ್ದಾಗ ಏಕಾಏಕಿ ಪೊಲೀಸರು ದಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ಎಸ್‌ಪಿ ಜಿಲ್ಲಾಧ್ಯಕ್ಷ ಗಿರೀಶ್ ಯಾದವ್ ಸೇರಿದಂತೆ ಅನೇಕ ಕಾರ್ಯಕರ್ತರು ಲಾಠಿಚಾರ್ಜ್‌ನಲ್ಲಿ  ಗಾಯಗೊಂಡಿದ್ದಾರೆ. ಹತ್ರಾಸ್​​ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಆಗಿರೋದ್ರಿಂದ ಯಾರಿಗೂ ಸಂತ್ರಸ್ತ ಕುಟುಂಬದ ಭೇಟಿಗೆ ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದಕ್ಕೆ ಎಸ್​ಪಿ ನಿಯೋಗ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಕಾರ್ಯಕರ್ತರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ಒಳ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಎಸ್​ಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​ ಮಾಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!


ಎಸ್​ಪಿ ನಿಯೋಗದಲ್ಲಿ ಉತ್ತರ ಪ್ರದೇಶದ ಎಸ್​ಪಿ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್, ರಾಮ್‌ಜಿ ಲಾಲ್ ಸುಮನ್, ಧರ್ಮೇಂದ್ರ ಯಾದವ್, ಅಕ್ಷಯ್ ಯಾದವ್, ಜುಗಲ್ ಕಿಶೋರ್ ವಾಲ್ಮೀಕಿ, ಜಸ್ವಂತ್ ಯಾದವ್, ಉದಯವೀರ್ ಸಿಂಗ್, ಸಂಜಯ್ ಲೆದರ್, ಅತುಲ್ ಪ್ರಧಾನ್, ರಾಮ್ ಕರಣ್ ನಿರ್ಮಲ್, ರಾಮ್ ಗೋಪಾಲ್ ಬಾಗೆಲ್ ಮೊದಲಾದವರು ಇದ್ದರು.

ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮುಖಂಡ ಜಯಂತ್ ಚೌಧರಿ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ಪಕ್ಷದ ಕೆಲವು ಕಾರ್ಯಕರ್ತರು ತಮ್ಮ ನಾಯಕನನ್ನು ಲಾಠಿಗಳಿಂದ ರಕ್ಷಿಸಲು ತಡೆಗೋಡೆ ರಚಿಸಿದ್ದರು. ಕೊನೆಗೂ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾದರು.

ಪೊಲೀಸರು ನಡೆಸಿರುವ ಲಾಠಿಚಾರ್ಜ್ ದೃಶ್ಯಾವಳಿಯನ್ನು ಗಮನಿಸಿ

’ಲಾಠಿ ಚಾರ್ಜ್‌ಗೆ ಒಳಗಾದ ಆರ್‌ಎಲ್‌ಡಿ ಮುಖಂಡ ಜಯಂತ್ ಚೌಧರಿ ಟ್ವೀಟ್ ಮಾಡಿ, ನಿಮಗೆ ಲಾಠಿ ಚಲಾಯಿಸುವ ಹಕ್ಕು ಇದ್ದರೇ, ನಮಗೆ ನಮ್ಮ ಜನರ ಜೊತೆ ನಿಲ್ಲುವ ಹಕ್ಕು ಇದೆ. ಇನ್ನು ಹೆಚ್ಚು ಲಾಠಿಗಳನ್ನು ಬಳಸಿ, ನಮ್ಮ ನಿಶ್ವಯವು ಅಷ್ಟೇ ಬಲವಾಗುತ್ತದೆ. ಅಕ್ಟೋಬರ್‌ 8ರಂದು ಮುಜಫರ್ ನಗರದಲ್ಲಿ ಭೇಟಿಯಾಗೋಣ’ ಎಂದಿದ್ದಾರೆ.

“ಹಳ್ಳಿಯೊಳಗೆ 5ಕ್ಕಿಂತ ಹೆಚ್ಚು ಜನರ ನಿಯೋಗದ ಭೇಟಿಯನ್ನ ನಿರ್ಬಂಧಿಸಲಾಗಿದೆ. ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಿಯೋಗಗಳು ಬಂದವು, ನಾವು 5 ಹೆಸರುಗಳನ್ನು ಪಟ್ಟಿ ಮಾಡಿದ್ದೇವೆ ಮತ್ತು ಅವರಿಗೆ ಅಲ್ಲಿಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ ಅವರ ಕಾರ್ಯಕರ್ತರು  ಮಹಿಳಾ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು. ಹಾಗಾಗಿ ಲಾಠಿಚಾರ್ಜ್ ಮಾಡಬೇಕಾಯಿತು” ಎಂದು ಹತ್ರಾಸ್ ಸದರ್ ಎಸ್‌ಡಿಎಂ ಹೇಳಿದ್ದಾರೆ.

ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಕೂಡ ಮೊದಲ ಪ್ರಯತ್ನದಲ್ಲಿ ತಡೆ ಹಿಡಿದು ಬಂಧಿಸಲಾಗಿತ್ತು. ನಂತರ ನಿನ್ನೆ ಅವರು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು. ಇಂದು ಭೀಮ್ ಆರ್ಮಿ ಮುಖಂಡ ಚಂದ್ರಶೇಖರ್ ಆಜಾದ್ ಕೂಡ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ವೈ ಪ್ಲಸ್ ಭದ್ರತೆ ಕೊಡಿ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...