Homeಮುಖಪುಟಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ...

ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

- Advertisement -
- Advertisement -

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿ ಬರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಗಳು, ಅವುಗಳ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಝಪ್ಫರ್‌ನಗರ ಜಿಲ್ಲೆಯ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಝಪ್ಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಆರೋಪ ಪ್ರತ್ಯಾರೋಪಗಳು ಕೇಳಿ ಬರಬಾರದು. ಕಾನೂನು ಸುವ್ಯವಸ್ಥೆ ಹದೆಗೆಡಬಾರದು ಎಂಬ ಕಾರಣಕ್ಕೆ ಈ ಆದೇಶ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ.

2023ರಲ್ಲಿ, ಮುಝಪ್ಫರ್‌ನಗರದ ಆಶ್ರಮದ ಅರ್ಚಕ ಯಶ್ವೀರ್ ಮಹಾರಾಜ್, “ಮುಸ್ಲಿಂ ಹೋಟೆಲ್, ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದರು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಜುಲೈ 16ರಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಅರ್ಚಕ ಯಶ್ವೀರ್ ಮಹಾರಾಜ್ “ಜೂನ್ 24 ರಂದು, ಮುಝಫ್ಫರ್‌ನಗರ ಡಿಎಂ, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳು ಸ್ವಾಮಿ ಯಶ್ವೀರ್ ಮಹಾರಾಜ್ ಅವರಿಗೆ ಸಭೆಯಲ್ಲಿ ಭರವಸೆ ನೀಡಿದ್ದು, ಎಲ್ಲಾ ಮುಸ್ಲಿಮರು ತಮ್ಮ ಹೋಟೆಲ್‌, ಢಾಬಾ, ಚಹಾ-ಸಿಹಿ ಅಂಗಡಿಗಳು, ಹಣ್ಣು ಮತ್ತು ತರಕಾರಿ ಗಾಡಿಗಳಲ್ಲಿ ತಮ್ಮ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಹೇಳಿದ್ದಾರೆ. ಹೆಸರು ಪ್ರದರ್ಶಿಸದ ವ್ಯವಹಾರಗಳ ಬಗ್ಗೆ ದಯವಿಟ್ಟು ನಮಗೆ ತಿಳಿಸಿ, ನಾವು ಪೊಲೀಸರಿಗೆ ಮಾಹಿತಿ ನೀಡುತ್ತೇವೆ. ಜೈ ಸನಾತನ ಧರ್ಮ” ಎಂದಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಝಪ್ಫರ್‌ನಗರ ಶಾಸಕ ಹಾಗೂ ಸಚಿವ ಕಪಿಲ್ ದೇವ್ ಅಗರ್‌ವಾಲ್ ಒಂದು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. “ಯಾತ್ರೆ ಸಾಗುವ ದಾರಿಯಲ್ಲಿ ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲವಾದರೂ, ಘರ್ಷಣೆ ತಪ್ಪಿಸುವುದಕ್ಕಾಗಿ ಅವರು ತಮ್ಮ ಅಂಗಡಿಗಳಿಗೆ ಹಿಂದೂ ದೇವರ ಅಥವಾ ದೇವತೆಗಳ ಹೆಸರುಗಳನ್ನು ಇಡಬಾರದು” ಎಂದು ಹೇಳಿದ್ದರು.

ಮುಝಫ್ಫರ್‌ನಗರ ಜಿಲ್ಲಾ ಆಡಳಿತ ಮತ್ತು ಪೊಲೀಸರ ಆದೇಶಕ್ಕೆ ವಿರೋಧ ವ್ಯಕ್ತವಾಗಿದೆ. “ಉತ್ತರಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ನೀತಿ ಹಾಗೂ ನಾಝಿ ಜರ್ಮನಿಯ ಯಹೂದಿ ಉದ್ಯಮಗಳ ಬಹಿಷ್ಕಾರಕ್ಕೆ ಸಮವಾಗಿದೆ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಬಣ್ಣಿಸಿದ್ದಾರೆ.

“ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಆಹಾರ ಪದಾರ್ಥಗಳನ್ನು ಮಾರುವ ಹೊಟೇಲ್‌ಗಳಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’ ವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂಥ ಆದೇಶಗಳನ್ನು ತರಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

“ನಿರ್ದಿಷ್ಟ ಧಾರ್ಮಿಕ ಮೆರವಣಿಗೆಯೊಂದು ಸಾಗುವ ದಾರಿಯಲ್ಲಿ ಇರುವ ಎಲ್ಲಾ ಅಂಗಡಿಗಳು, ಹೊಟೇಲ್‌ಗಳು ಮತ್ತು ವಾಹನಗಳು ಕೂಡ ತಮ್ಮ ಮಾಲೀಕರ ಹೆಸರುಗಳನ್ನು ಎದ್ದು ಕಾಣುವಂತೆ ಮತ್ತು ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂಬುದಾಗಿ ಉತ್ತರ ಪ್ರದೇಶದ ಮುಝಫ್ಫರ್‌ನಗರ ಪೊಲೀಸರು ಆದೇಶ ನೀಡಿದ್ದಾರೆ. ಯಾಕೆ? ನಾಝಿ ಕಾಲದ ಜರ್ಮನಿಯಲ್ಲೂ, ಅವರು ನಿರ್ದಿಷ್ಟ ಅಂಗಡಿಗಳು ಮತ್ತು ಮನೆಗಳ ಮೇಲೆ ಗುರುತುಗಳನ್ನು ಮಾಡುತ್ತಿದ್ದರು” ಎಂದು ಖ್ಯಾತ ಚಿತ್ರಕತೆ ಲೇಖಕ ಹಾಗೂ ಹಾಡು ರಚನೆಕಾರ ಜಾವೇದ್ ಅಖ್ತರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಾರೆ.

ವಾರ್ಷಿಕ ಕನ್ವರ್ ತೀರ್ಥಯಾತ್ರೆಯ ಸಮಯದಲ್ಲಿ, ಶಿವನ ಭಕ್ತರು ಹರಿದ್ವಾರದ ಬಳಿ ಗಂಗಾ ನದಿಯಿಂದ ನೀರು ಸಂಗ್ರಹಿಸಿ ಅದನ್ನು ತಮ್ಮ ಊರುಗಳಿಗೆ ಕೊಂಡೊಯ್ಯುತ್ತಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಉತ್ತರಾಖಂಡಕ್ಕೆ ಆಗಮಿಸುವ ಕನ್ವರಿಗಳು ಗಂಗಾ ನದಿಯಿಂದ ನೀರು ಸಂಗ್ರಹಿಸಿ ಹಿಂದಿರುಗುತ್ತಾರೆ.

ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 2 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ : ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...