Homeಮುಖಪುಟಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ...

ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

- Advertisement -
- Advertisement -

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿ ಬರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಗಳು, ಅವುಗಳ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಝಪ್ಫರ್‌ನಗರ ಜಿಲ್ಲೆಯ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಝಪ್ಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಆರೋಪ ಪ್ರತ್ಯಾರೋಪಗಳು ಕೇಳಿ ಬರಬಾರದು. ಕಾನೂನು ಸುವ್ಯವಸ್ಥೆ ಹದೆಗೆಡಬಾರದು ಎಂಬ ಕಾರಣಕ್ಕೆ ಈ ಆದೇಶ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ.

2023ರಲ್ಲಿ, ಮುಝಪ್ಫರ್‌ನಗರದ ಆಶ್ರಮದ ಅರ್ಚಕ ಯಶ್ವೀರ್ ಮಹಾರಾಜ್, “ಮುಸ್ಲಿಂ ಹೋಟೆಲ್, ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದರು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಜುಲೈ 16ರಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಅರ್ಚಕ ಯಶ್ವೀರ್ ಮಹಾರಾಜ್ “ಜೂನ್ 24 ರಂದು, ಮುಝಫ್ಫರ್‌ನಗರ ಡಿಎಂ, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳು ಸ್ವಾಮಿ ಯಶ್ವೀರ್ ಮಹಾರಾಜ್ ಅವರಿಗೆ ಸಭೆಯಲ್ಲಿ ಭರವಸೆ ನೀಡಿದ್ದು, ಎಲ್ಲಾ ಮುಸ್ಲಿಮರು ತಮ್ಮ ಹೋಟೆಲ್‌, ಢಾಬಾ, ಚಹಾ-ಸಿಹಿ ಅಂಗಡಿಗಳು, ಹಣ್ಣು ಮತ್ತು ತರಕಾರಿ ಗಾಡಿಗಳಲ್ಲಿ ತಮ್ಮ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಹೇಳಿದ್ದಾರೆ. ಹೆಸರು ಪ್ರದರ್ಶಿಸದ ವ್ಯವಹಾರಗಳ ಬಗ್ಗೆ ದಯವಿಟ್ಟು ನಮಗೆ ತಿಳಿಸಿ, ನಾವು ಪೊಲೀಸರಿಗೆ ಮಾಹಿತಿ ನೀಡುತ್ತೇವೆ. ಜೈ ಸನಾತನ ಧರ್ಮ” ಎಂದಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಝಪ್ಫರ್‌ನಗರ ಶಾಸಕ ಹಾಗೂ ಸಚಿವ ಕಪಿಲ್ ದೇವ್ ಅಗರ್‌ವಾಲ್ ಒಂದು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. “ಯಾತ್ರೆ ಸಾಗುವ ದಾರಿಯಲ್ಲಿ ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲವಾದರೂ, ಘರ್ಷಣೆ ತಪ್ಪಿಸುವುದಕ್ಕಾಗಿ ಅವರು ತಮ್ಮ ಅಂಗಡಿಗಳಿಗೆ ಹಿಂದೂ ದೇವರ ಅಥವಾ ದೇವತೆಗಳ ಹೆಸರುಗಳನ್ನು ಇಡಬಾರದು” ಎಂದು ಹೇಳಿದ್ದರು.

ಮುಝಫ್ಫರ್‌ನಗರ ಜಿಲ್ಲಾ ಆಡಳಿತ ಮತ್ತು ಪೊಲೀಸರ ಆದೇಶಕ್ಕೆ ವಿರೋಧ ವ್ಯಕ್ತವಾಗಿದೆ. “ಉತ್ತರಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ನೀತಿ ಹಾಗೂ ನಾಝಿ ಜರ್ಮನಿಯ ಯಹೂದಿ ಉದ್ಯಮಗಳ ಬಹಿಷ್ಕಾರಕ್ಕೆ ಸಮವಾಗಿದೆ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಬಣ್ಣಿಸಿದ್ದಾರೆ.

“ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಆಹಾರ ಪದಾರ್ಥಗಳನ್ನು ಮಾರುವ ಹೊಟೇಲ್‌ಗಳಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’ ವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂಥ ಆದೇಶಗಳನ್ನು ತರಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

“ನಿರ್ದಿಷ್ಟ ಧಾರ್ಮಿಕ ಮೆರವಣಿಗೆಯೊಂದು ಸಾಗುವ ದಾರಿಯಲ್ಲಿ ಇರುವ ಎಲ್ಲಾ ಅಂಗಡಿಗಳು, ಹೊಟೇಲ್‌ಗಳು ಮತ್ತು ವಾಹನಗಳು ಕೂಡ ತಮ್ಮ ಮಾಲೀಕರ ಹೆಸರುಗಳನ್ನು ಎದ್ದು ಕಾಣುವಂತೆ ಮತ್ತು ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂಬುದಾಗಿ ಉತ್ತರ ಪ್ರದೇಶದ ಮುಝಫ್ಫರ್‌ನಗರ ಪೊಲೀಸರು ಆದೇಶ ನೀಡಿದ್ದಾರೆ. ಯಾಕೆ? ನಾಝಿ ಕಾಲದ ಜರ್ಮನಿಯಲ್ಲೂ, ಅವರು ನಿರ್ದಿಷ್ಟ ಅಂಗಡಿಗಳು ಮತ್ತು ಮನೆಗಳ ಮೇಲೆ ಗುರುತುಗಳನ್ನು ಮಾಡುತ್ತಿದ್ದರು” ಎಂದು ಖ್ಯಾತ ಚಿತ್ರಕತೆ ಲೇಖಕ ಹಾಗೂ ಹಾಡು ರಚನೆಕಾರ ಜಾವೇದ್ ಅಖ್ತರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಾರೆ.

ವಾರ್ಷಿಕ ಕನ್ವರ್ ತೀರ್ಥಯಾತ್ರೆಯ ಸಮಯದಲ್ಲಿ, ಶಿವನ ಭಕ್ತರು ಹರಿದ್ವಾರದ ಬಳಿ ಗಂಗಾ ನದಿಯಿಂದ ನೀರು ಸಂಗ್ರಹಿಸಿ ಅದನ್ನು ತಮ್ಮ ಊರುಗಳಿಗೆ ಕೊಂಡೊಯ್ಯುತ್ತಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಉತ್ತರಾಖಂಡಕ್ಕೆ ಆಗಮಿಸುವ ಕನ್ವರಿಗಳು ಗಂಗಾ ನದಿಯಿಂದ ನೀರು ಸಂಗ್ರಹಿಸಿ ಹಿಂದಿರುಗುತ್ತಾರೆ.

ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 2 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ : ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...