Homeಮುಖಪುಟಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ...

ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

- Advertisement -
- Advertisement -

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿ ಬರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಗಳು, ಅವುಗಳ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಝಪ್ಫರ್‌ನಗರ ಜಿಲ್ಲೆಯ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಝಪ್ಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಆರೋಪ ಪ್ರತ್ಯಾರೋಪಗಳು ಕೇಳಿ ಬರಬಾರದು. ಕಾನೂನು ಸುವ್ಯವಸ್ಥೆ ಹದೆಗೆಡಬಾರದು ಎಂಬ ಕಾರಣಕ್ಕೆ ಈ ಆದೇಶ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ.

2023ರಲ್ಲಿ, ಮುಝಪ್ಫರ್‌ನಗರದ ಆಶ್ರಮದ ಅರ್ಚಕ ಯಶ್ವೀರ್ ಮಹಾರಾಜ್, “ಮುಸ್ಲಿಂ ಹೋಟೆಲ್, ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದರು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಜುಲೈ 16ರಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಅರ್ಚಕ ಯಶ್ವೀರ್ ಮಹಾರಾಜ್ “ಜೂನ್ 24 ರಂದು, ಮುಝಫ್ಫರ್‌ನಗರ ಡಿಎಂ, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳು ಸ್ವಾಮಿ ಯಶ್ವೀರ್ ಮಹಾರಾಜ್ ಅವರಿಗೆ ಸಭೆಯಲ್ಲಿ ಭರವಸೆ ನೀಡಿದ್ದು, ಎಲ್ಲಾ ಮುಸ್ಲಿಮರು ತಮ್ಮ ಹೋಟೆಲ್‌, ಢಾಬಾ, ಚಹಾ-ಸಿಹಿ ಅಂಗಡಿಗಳು, ಹಣ್ಣು ಮತ್ತು ತರಕಾರಿ ಗಾಡಿಗಳಲ್ಲಿ ತಮ್ಮ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಹೇಳಿದ್ದಾರೆ. ಹೆಸರು ಪ್ರದರ್ಶಿಸದ ವ್ಯವಹಾರಗಳ ಬಗ್ಗೆ ದಯವಿಟ್ಟು ನಮಗೆ ತಿಳಿಸಿ, ನಾವು ಪೊಲೀಸರಿಗೆ ಮಾಹಿತಿ ನೀಡುತ್ತೇವೆ. ಜೈ ಸನಾತನ ಧರ್ಮ” ಎಂದಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಝಪ್ಫರ್‌ನಗರ ಶಾಸಕ ಹಾಗೂ ಸಚಿವ ಕಪಿಲ್ ದೇವ್ ಅಗರ್‌ವಾಲ್ ಒಂದು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. “ಯಾತ್ರೆ ಸಾಗುವ ದಾರಿಯಲ್ಲಿ ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲವಾದರೂ, ಘರ್ಷಣೆ ತಪ್ಪಿಸುವುದಕ್ಕಾಗಿ ಅವರು ತಮ್ಮ ಅಂಗಡಿಗಳಿಗೆ ಹಿಂದೂ ದೇವರ ಅಥವಾ ದೇವತೆಗಳ ಹೆಸರುಗಳನ್ನು ಇಡಬಾರದು” ಎಂದು ಹೇಳಿದ್ದರು.

ಮುಝಫ್ಫರ್‌ನಗರ ಜಿಲ್ಲಾ ಆಡಳಿತ ಮತ್ತು ಪೊಲೀಸರ ಆದೇಶಕ್ಕೆ ವಿರೋಧ ವ್ಯಕ್ತವಾಗಿದೆ. “ಉತ್ತರಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ನೀತಿ ಹಾಗೂ ನಾಝಿ ಜರ್ಮನಿಯ ಯಹೂದಿ ಉದ್ಯಮಗಳ ಬಹಿಷ್ಕಾರಕ್ಕೆ ಸಮವಾಗಿದೆ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಬಣ್ಣಿಸಿದ್ದಾರೆ.

“ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಆಹಾರ ಪದಾರ್ಥಗಳನ್ನು ಮಾರುವ ಹೊಟೇಲ್‌ಗಳಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’ ವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂಥ ಆದೇಶಗಳನ್ನು ತರಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

“ನಿರ್ದಿಷ್ಟ ಧಾರ್ಮಿಕ ಮೆರವಣಿಗೆಯೊಂದು ಸಾಗುವ ದಾರಿಯಲ್ಲಿ ಇರುವ ಎಲ್ಲಾ ಅಂಗಡಿಗಳು, ಹೊಟೇಲ್‌ಗಳು ಮತ್ತು ವಾಹನಗಳು ಕೂಡ ತಮ್ಮ ಮಾಲೀಕರ ಹೆಸರುಗಳನ್ನು ಎದ್ದು ಕಾಣುವಂತೆ ಮತ್ತು ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂಬುದಾಗಿ ಉತ್ತರ ಪ್ರದೇಶದ ಮುಝಫ್ಫರ್‌ನಗರ ಪೊಲೀಸರು ಆದೇಶ ನೀಡಿದ್ದಾರೆ. ಯಾಕೆ? ನಾಝಿ ಕಾಲದ ಜರ್ಮನಿಯಲ್ಲೂ, ಅವರು ನಿರ್ದಿಷ್ಟ ಅಂಗಡಿಗಳು ಮತ್ತು ಮನೆಗಳ ಮೇಲೆ ಗುರುತುಗಳನ್ನು ಮಾಡುತ್ತಿದ್ದರು” ಎಂದು ಖ್ಯಾತ ಚಿತ್ರಕತೆ ಲೇಖಕ ಹಾಗೂ ಹಾಡು ರಚನೆಕಾರ ಜಾವೇದ್ ಅಖ್ತರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಾರೆ.

ವಾರ್ಷಿಕ ಕನ್ವರ್ ತೀರ್ಥಯಾತ್ರೆಯ ಸಮಯದಲ್ಲಿ, ಶಿವನ ಭಕ್ತರು ಹರಿದ್ವಾರದ ಬಳಿ ಗಂಗಾ ನದಿಯಿಂದ ನೀರು ಸಂಗ್ರಹಿಸಿ ಅದನ್ನು ತಮ್ಮ ಊರುಗಳಿಗೆ ಕೊಂಡೊಯ್ಯುತ್ತಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಉತ್ತರಾಖಂಡಕ್ಕೆ ಆಗಮಿಸುವ ಕನ್ವರಿಗಳು ಗಂಗಾ ನದಿಯಿಂದ ನೀರು ಸಂಗ್ರಹಿಸಿ ಹಿಂದಿರುಗುತ್ತಾರೆ.

ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 2 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ : ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...