Homeಮುಖಪುಟಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ...

ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

- Advertisement -
- Advertisement -

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿ ಬರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಗಳು, ಅವುಗಳ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಝಪ್ಫರ್‌ನಗರ ಜಿಲ್ಲೆಯ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಝಪ್ಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಆರೋಪ ಪ್ರತ್ಯಾರೋಪಗಳು ಕೇಳಿ ಬರಬಾರದು. ಕಾನೂನು ಸುವ್ಯವಸ್ಥೆ ಹದೆಗೆಡಬಾರದು ಎಂಬ ಕಾರಣಕ್ಕೆ ಈ ಆದೇಶ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ.

2023ರಲ್ಲಿ, ಮುಝಪ್ಫರ್‌ನಗರದ ಆಶ್ರಮದ ಅರ್ಚಕ ಯಶ್ವೀರ್ ಮಹಾರಾಜ್, “ಮುಸ್ಲಿಂ ಹೋಟೆಲ್, ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದರು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಜುಲೈ 16ರಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಅರ್ಚಕ ಯಶ್ವೀರ್ ಮಹಾರಾಜ್ “ಜೂನ್ 24 ರಂದು, ಮುಝಫ್ಫರ್‌ನಗರ ಡಿಎಂ, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳು ಸ್ವಾಮಿ ಯಶ್ವೀರ್ ಮಹಾರಾಜ್ ಅವರಿಗೆ ಸಭೆಯಲ್ಲಿ ಭರವಸೆ ನೀಡಿದ್ದು, ಎಲ್ಲಾ ಮುಸ್ಲಿಮರು ತಮ್ಮ ಹೋಟೆಲ್‌, ಢಾಬಾ, ಚಹಾ-ಸಿಹಿ ಅಂಗಡಿಗಳು, ಹಣ್ಣು ಮತ್ತು ತರಕಾರಿ ಗಾಡಿಗಳಲ್ಲಿ ತಮ್ಮ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಹೇಳಿದ್ದಾರೆ. ಹೆಸರು ಪ್ರದರ್ಶಿಸದ ವ್ಯವಹಾರಗಳ ಬಗ್ಗೆ ದಯವಿಟ್ಟು ನಮಗೆ ತಿಳಿಸಿ, ನಾವು ಪೊಲೀಸರಿಗೆ ಮಾಹಿತಿ ನೀಡುತ್ತೇವೆ. ಜೈ ಸನಾತನ ಧರ್ಮ” ಎಂದಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಝಪ್ಫರ್‌ನಗರ ಶಾಸಕ ಹಾಗೂ ಸಚಿವ ಕಪಿಲ್ ದೇವ್ ಅಗರ್‌ವಾಲ್ ಒಂದು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. “ಯಾತ್ರೆ ಸಾಗುವ ದಾರಿಯಲ್ಲಿ ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲವಾದರೂ, ಘರ್ಷಣೆ ತಪ್ಪಿಸುವುದಕ್ಕಾಗಿ ಅವರು ತಮ್ಮ ಅಂಗಡಿಗಳಿಗೆ ಹಿಂದೂ ದೇವರ ಅಥವಾ ದೇವತೆಗಳ ಹೆಸರುಗಳನ್ನು ಇಡಬಾರದು” ಎಂದು ಹೇಳಿದ್ದರು.

ಮುಝಫ್ಫರ್‌ನಗರ ಜಿಲ್ಲಾ ಆಡಳಿತ ಮತ್ತು ಪೊಲೀಸರ ಆದೇಶಕ್ಕೆ ವಿರೋಧ ವ್ಯಕ್ತವಾಗಿದೆ. “ಉತ್ತರಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ನೀತಿ ಹಾಗೂ ನಾಝಿ ಜರ್ಮನಿಯ ಯಹೂದಿ ಉದ್ಯಮಗಳ ಬಹಿಷ್ಕಾರಕ್ಕೆ ಸಮವಾಗಿದೆ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಬಣ್ಣಿಸಿದ್ದಾರೆ.

“ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಆಹಾರ ಪದಾರ್ಥಗಳನ್ನು ಮಾರುವ ಹೊಟೇಲ್‌ಗಳಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’ ವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂಥ ಆದೇಶಗಳನ್ನು ತರಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

“ನಿರ್ದಿಷ್ಟ ಧಾರ್ಮಿಕ ಮೆರವಣಿಗೆಯೊಂದು ಸಾಗುವ ದಾರಿಯಲ್ಲಿ ಇರುವ ಎಲ್ಲಾ ಅಂಗಡಿಗಳು, ಹೊಟೇಲ್‌ಗಳು ಮತ್ತು ವಾಹನಗಳು ಕೂಡ ತಮ್ಮ ಮಾಲೀಕರ ಹೆಸರುಗಳನ್ನು ಎದ್ದು ಕಾಣುವಂತೆ ಮತ್ತು ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂಬುದಾಗಿ ಉತ್ತರ ಪ್ರದೇಶದ ಮುಝಫ್ಫರ್‌ನಗರ ಪೊಲೀಸರು ಆದೇಶ ನೀಡಿದ್ದಾರೆ. ಯಾಕೆ? ನಾಝಿ ಕಾಲದ ಜರ್ಮನಿಯಲ್ಲೂ, ಅವರು ನಿರ್ದಿಷ್ಟ ಅಂಗಡಿಗಳು ಮತ್ತು ಮನೆಗಳ ಮೇಲೆ ಗುರುತುಗಳನ್ನು ಮಾಡುತ್ತಿದ್ದರು” ಎಂದು ಖ್ಯಾತ ಚಿತ್ರಕತೆ ಲೇಖಕ ಹಾಗೂ ಹಾಡು ರಚನೆಕಾರ ಜಾವೇದ್ ಅಖ್ತರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಾರೆ.

ವಾರ್ಷಿಕ ಕನ್ವರ್ ತೀರ್ಥಯಾತ್ರೆಯ ಸಮಯದಲ್ಲಿ, ಶಿವನ ಭಕ್ತರು ಹರಿದ್ವಾರದ ಬಳಿ ಗಂಗಾ ನದಿಯಿಂದ ನೀರು ಸಂಗ್ರಹಿಸಿ ಅದನ್ನು ತಮ್ಮ ಊರುಗಳಿಗೆ ಕೊಂಡೊಯ್ಯುತ್ತಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಉತ್ತರಾಖಂಡಕ್ಕೆ ಆಗಮಿಸುವ ಕನ್ವರಿಗಳು ಗಂಗಾ ನದಿಯಿಂದ ನೀರು ಸಂಗ್ರಹಿಸಿ ಹಿಂದಿರುಗುತ್ತಾರೆ.

ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 2 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ : ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...