Homeಮುಖಪುಟಬರೇಲಿಗೆ ಹೊರಟಿದ್ದ ಎಸ್‌ಪಿ ನಿಯೋಗಕ್ಕೆ ಪೊಲೀಸರ ತಡೆ: ಸಂಸದ ಝಿಯಾವುರ್ ರೆಹಮಾನ್‌ಗೆ ಗೃಹ ಬಂಧನ

ಬರೇಲಿಗೆ ಹೊರಟಿದ್ದ ಎಸ್‌ಪಿ ನಿಯೋಗಕ್ಕೆ ಪೊಲೀಸರ ತಡೆ: ಸಂಸದ ಝಿಯಾವುರ್ ರೆಹಮಾನ್‌ಗೆ ಗೃಹ ಬಂಧನ

- Advertisement -
- Advertisement -

ಇತ್ತೀಚೆಗೆ ಹಿಂಸಾಚಾರ ನಡೆದಿದ್ದ ಬರೇಲಿಗೆ ಹೊರಟಿದ್ದ ಸಮಾಜವಾದಿ ಪಕ್ಷದ(ಎಸ್‌ಪಿ) ನಿಯೋಗಕ್ಕೆ ಶನಿವಾರ (ಅ.4) ಉತ್ತರ ಪ್ರದೇಶ ಪೊಲೀಸರು ತಡೆ ಒಡ್ಡಿದ್ದಾರೆ ಎಂದು ವರದಿಯಾಗಿದೆ.

ಈದ್ ಮೀಲಾದ್ ಪ್ರಯುಕ್ತ ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಐ ಲವ್ ಮುಹಮ್ಮದ್’ ಬರಹವಿದ್ದ ಬ್ಯಾನರ್ ಹಾಕಿದ್ದ ಯುವಕರನ್ನು ಸೆಪ್ಟೆಂಬರ್ 4ರಂದು ಪೊಲೀಸರು ಬಂಧಿಸಿದ್ದರು. ಇದನ್ನು ಖಂಡಿಸಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ಅದರಂತೆ ಸೆಪ್ಟೆಂಬರ್ 26ರಂದು ಬರೇಲಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಆದರೆ, ಈ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿತ್ತು. ಪರಿಣಾಮ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ಖಾನ್ ಸೇರಿದಂತೆ ಸುಮಾರು 35 ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪೊಲೀಸರು ಅಮಾಯಕರನ್ನೂ ಬಂಧಿಸಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ, ಉತ್ತರ ಪ್ರದೇಶದ ಪ್ರತಿಪಕ್ಷವಾದ ಸಮಾಜವಾದಿಯ ಮುಖ್ಯಸ್ಥ ಅಖಿಲೇಶ್ ಯಾದವ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ನೇತೃತ್ವದ 14 ಸದಸ್ಯರ ನಿಯೋಗಕ್ಕೆ ಬರೇಲಿಗೆ ಭೇಟಿ ನೀಡುವಂತೆ ನಿರ್ದೇಶಿಸಿದ್ದರು.

ಪೊಲೀಸರು ಮಾರ್ಗ ಮಧ್ಯೆ ತಡೆದಿರುವುದನ್ನು ‘ಪ್ರಜಾಪ್ರಭುತ್ವ ವಿರೋಧಿ’ ಮತ್ತು ‘ಸಂವಿಧಾನದ ಉಲ್ಲಂಘನೆ’ ಎಂದು ಮಾತಾ ಪ್ರಸಾದ್ ಪಾಂಡೆ ಟೀಕಿಸಿದ್ದಾರೆ.

“ಆರಂಭದಲ್ಲಿ ಮನೆಯಲ್ಲಿಯೇ ಇರಲು ನನಗೆ ಸೂಚಿಸಲಾಗಿತ್ತು. ಆದರೆ, ನಂತರ ಅದನ್ನು ಸರಿಪಡಿಸಲಾಯಿತು. ನಮ್ಮ ಭೇಟಿಯ ಬಗ್ಗೆ ಸರ್ಕಾರಕ್ಕೆ ಮಾಹಿತಿ ತಿಳಿದ ತಕ್ಷಣ, ಬರೇಲಿಗೆ ಹೋಗದಂತೆ ತಡೆಯಲು ಲಕ್ನೋದಲ್ಲಿರುವ ನಮ್ಮ ಖಾಸಗಿ ನಿವಾಸದಲ್ಲಿ ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದು ದುರದೃಷ್ಟಕರ ಮತ್ತು ಪ್ರಜಾಪ್ರಭುತ್ವ ವಿರೋಧಿ. ಇದು ಸಂವಿಧಾನವು ನೀಡಿರುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಮಾತಾ ಪ್ರಸಾದ್ ಪಾಂಡೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಈ ನಡುವೆ, ಬರೇಲಿಗೆ ಭೇಟಿ ನೀಡದಂತೆ ತಡೆಯಲು ಸಮಾಜವಾದಿ ಪಕ್ಷದ ಸಂಸದ ಝಿಯಾವುರ್ ರೆಹಮಾನ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಸಂಭಾಲ್‌ನಲ್ಲಿರುವ ಅವರ ಮನೆಯ ಹೊರಗೆ ಪೊಲೀಸರನ್ನು ನಿಯೋಜಿಸಿರುವ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿವೆ.

ಬರೇಲಿಗೆ ಭೇಟಿ ನೀಡಲು ಮುಂದಾಗಿರುವ ಎಸ್‌ಪಿ ನಾಯಕರದ್ದು ‘ಬಾಲಿಶ ನಡೆ’ ಎಂದು ಬಿಜೆಪಿ ಕರೆದಿದೆ.

“ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬರೇಲಿಗೆ ನಿಯೋಗ ಕಳುಹಿಸಿರುವುದು ಬಾಲಿಶ ನಡೆ. ಎಸ್‌ಪಿ ಮುಸ್ಲಿಂ ಓಲೈಕೆಯ ಕೊಳಕು ರಾಜಕೀಯಕ್ಕೆ ಹೆಸರುವಾಸಿಯಾಗಿದೆ. 2027ರ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಪಿಯ ಪತನ ಮತ್ತು ಸರ್ವನಾಶ ಖಚಿತ. ಗಲಭೆ ಮುಕ್ತ ಯುಪಿ, ಉತ್ತಮ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ನಮ್ಮ ಗುರುತು ಮತ್ತು ಸಾಧನೆ. ಎಸ್‌ಪಿ ಬೆಂಬಲಿಗರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ” ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸೆಪ್ಟೆಂಬರ್ 26ರಂದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಗುಂಡು ಹಾರಿಸಿದ್ದಾರೆ ಎಂದು ಬರೇಲಿಯ ಸ್ಥಳೀಯರು ಆರೋಪಿಸಿದ್ದಾರೆ.

ಘರ್ಷಣೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್ 26ರಂದು ನಡೆದ ಘಟನೆಯ ಹಿಂದೆ ‘ಯೋಜಿತ ಪಿತೂರಿ’ ಇದೆ. ಐಎಂಸಿ ಸದಸ್ಯರು ಕೇವಲ ಮನವಿ ಪತ್ರ ಸಲ್ಲಿಸುವ ಬದಲು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

‘ಐ ಲವ್ ಮುಹಮ್ಮದ್’ ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕೊತ್ವಾಲಿಯಲ್ಲಿ ಐದು, ಬರಾದರಿಯಲ್ಲಿ ಎರಡು ಮತ್ತು ಕಿಲಾ, ಕ್ಯಾಂಟ್ ಮತ್ತು ಪ್ರೇಮ್ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಎಫ್‌ಐಆರ್ ದಾಖಲಾಗಿದ್ದು, 125 ಜನರು ಮತ್ತು 3,000 ಗುರುತಿಸಲಾಗದ ವ್ಯಕ್ತಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೆಸರಿಸಲಾದ ಧಾರ್ಮಿಕ ನಾಯಕನೊಂದಿಗೆ ಸಂಪರ್ಕ ಹೊಂದಿದವರ ಆಸ್ತಿಗಳನ್ನು ಆಡಳಿತವು ಗುರಿಯಾಗಿಸಿಕೊಂಡಿದೆ. ಬರೇಲಿ ಅಭಿವೃದ್ಧಿ ಪ್ರಾಧಿಕಾರವು ಧರ್ಮಗುರುವಿಗೆ ಆಶ್ರಯ ನೀಡಿದ್ದ ಫಹಾಮ್ ಒಡೆತನದ ಹೋಟೆಲ್ ಸ್ಕೈಲಾರ್ಕ್ ಅನ್ನು ಸೀಲ್ ಮಾಡಿದೆ. ಮತ್ತೊಬ್ಬ ಆರೋಪಿಗೆ ಆಶ್ರಯ ನೀಡಿದ್ದ ಮೊಹಮ್ಮದ್ ಆರಿಫ್ ಒಡೆತನದ ಫಹಾಮ್ ಲಾನ್, ಫ್ಲೋರಾ ಗಾರ್ಡನ್ ಎಂಬ ಹೋಟೆಲ್‌ಗಳು, ಜಲ್ಸಾ ಗ್ರೀನ್ ಮ್ಯಾರೇಜ್ ಹಾಲ್ ಅನ್ನು ಅಧಿಕಾರಿಗಳು ಸೀಲ್ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಭಾರತವು ಸಂವಿಧಾನದ ಮೂಲಕ ಆಳಲ್ಪಡುತ್ತದೆ, ಬುಲ್ಡೋಜರ್ ನಿಯಮದಿಂದಲ್ಲ: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...