Homeಮುಖಪುಟಬರೇಲಿಗೆ ಹೊರಟಿದ್ದ ಎಸ್‌ಪಿ ನಿಯೋಗಕ್ಕೆ ಪೊಲೀಸರ ತಡೆ: ಸಂಸದ ಝಿಯಾವುರ್ ರೆಹಮಾನ್‌ಗೆ ಗೃಹ ಬಂಧನ

ಬರೇಲಿಗೆ ಹೊರಟಿದ್ದ ಎಸ್‌ಪಿ ನಿಯೋಗಕ್ಕೆ ಪೊಲೀಸರ ತಡೆ: ಸಂಸದ ಝಿಯಾವುರ್ ರೆಹಮಾನ್‌ಗೆ ಗೃಹ ಬಂಧನ

- Advertisement -
- Advertisement -

ಇತ್ತೀಚೆಗೆ ಹಿಂಸಾಚಾರ ನಡೆದಿದ್ದ ಬರೇಲಿಗೆ ಹೊರಟಿದ್ದ ಸಮಾಜವಾದಿ ಪಕ್ಷದ(ಎಸ್‌ಪಿ) ನಿಯೋಗಕ್ಕೆ ಶನಿವಾರ (ಅ.4) ಉತ್ತರ ಪ್ರದೇಶ ಪೊಲೀಸರು ತಡೆ ಒಡ್ಡಿದ್ದಾರೆ ಎಂದು ವರದಿಯಾಗಿದೆ.

ಈದ್ ಮೀಲಾದ್ ಪ್ರಯುಕ್ತ ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಐ ಲವ್ ಮುಹಮ್ಮದ್’ ಬರಹವಿದ್ದ ಬ್ಯಾನರ್ ಹಾಕಿದ್ದ ಯುವಕರನ್ನು ಸೆಪ್ಟೆಂಬರ್ 4ರಂದು ಪೊಲೀಸರು ಬಂಧಿಸಿದ್ದರು. ಇದನ್ನು ಖಂಡಿಸಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ಅದರಂತೆ ಸೆಪ್ಟೆಂಬರ್ 26ರಂದು ಬರೇಲಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಆದರೆ, ಈ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿತ್ತು. ಪರಿಣಾಮ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ಖಾನ್ ಸೇರಿದಂತೆ ಸುಮಾರು 35 ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪೊಲೀಸರು ಅಮಾಯಕರನ್ನೂ ಬಂಧಿಸಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ, ಉತ್ತರ ಪ್ರದೇಶದ ಪ್ರತಿಪಕ್ಷವಾದ ಸಮಾಜವಾದಿಯ ಮುಖ್ಯಸ್ಥ ಅಖಿಲೇಶ್ ಯಾದವ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ನೇತೃತ್ವದ 14 ಸದಸ್ಯರ ನಿಯೋಗಕ್ಕೆ ಬರೇಲಿಗೆ ಭೇಟಿ ನೀಡುವಂತೆ ನಿರ್ದೇಶಿಸಿದ್ದರು.

ಪೊಲೀಸರು ಮಾರ್ಗ ಮಧ್ಯೆ ತಡೆದಿರುವುದನ್ನು ‘ಪ್ರಜಾಪ್ರಭುತ್ವ ವಿರೋಧಿ’ ಮತ್ತು ‘ಸಂವಿಧಾನದ ಉಲ್ಲಂಘನೆ’ ಎಂದು ಮಾತಾ ಪ್ರಸಾದ್ ಪಾಂಡೆ ಟೀಕಿಸಿದ್ದಾರೆ.

“ಆರಂಭದಲ್ಲಿ ಮನೆಯಲ್ಲಿಯೇ ಇರಲು ನನಗೆ ಸೂಚಿಸಲಾಗಿತ್ತು. ಆದರೆ, ನಂತರ ಅದನ್ನು ಸರಿಪಡಿಸಲಾಯಿತು. ನಮ್ಮ ಭೇಟಿಯ ಬಗ್ಗೆ ಸರ್ಕಾರಕ್ಕೆ ಮಾಹಿತಿ ತಿಳಿದ ತಕ್ಷಣ, ಬರೇಲಿಗೆ ಹೋಗದಂತೆ ತಡೆಯಲು ಲಕ್ನೋದಲ್ಲಿರುವ ನಮ್ಮ ಖಾಸಗಿ ನಿವಾಸದಲ್ಲಿ ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದು ದುರದೃಷ್ಟಕರ ಮತ್ತು ಪ್ರಜಾಪ್ರಭುತ್ವ ವಿರೋಧಿ. ಇದು ಸಂವಿಧಾನವು ನೀಡಿರುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಮಾತಾ ಪ್ರಸಾದ್ ಪಾಂಡೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಈ ನಡುವೆ, ಬರೇಲಿಗೆ ಭೇಟಿ ನೀಡದಂತೆ ತಡೆಯಲು ಸಮಾಜವಾದಿ ಪಕ್ಷದ ಸಂಸದ ಝಿಯಾವುರ್ ರೆಹಮಾನ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಸಂಭಾಲ್‌ನಲ್ಲಿರುವ ಅವರ ಮನೆಯ ಹೊರಗೆ ಪೊಲೀಸರನ್ನು ನಿಯೋಜಿಸಿರುವ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿವೆ.

ಬರೇಲಿಗೆ ಭೇಟಿ ನೀಡಲು ಮುಂದಾಗಿರುವ ಎಸ್‌ಪಿ ನಾಯಕರದ್ದು ‘ಬಾಲಿಶ ನಡೆ’ ಎಂದು ಬಿಜೆಪಿ ಕರೆದಿದೆ.

“ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬರೇಲಿಗೆ ನಿಯೋಗ ಕಳುಹಿಸಿರುವುದು ಬಾಲಿಶ ನಡೆ. ಎಸ್‌ಪಿ ಮುಸ್ಲಿಂ ಓಲೈಕೆಯ ಕೊಳಕು ರಾಜಕೀಯಕ್ಕೆ ಹೆಸರುವಾಸಿಯಾಗಿದೆ. 2027ರ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಪಿಯ ಪತನ ಮತ್ತು ಸರ್ವನಾಶ ಖಚಿತ. ಗಲಭೆ ಮುಕ್ತ ಯುಪಿ, ಉತ್ತಮ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ನಮ್ಮ ಗುರುತು ಮತ್ತು ಸಾಧನೆ. ಎಸ್‌ಪಿ ಬೆಂಬಲಿಗರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ” ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸೆಪ್ಟೆಂಬರ್ 26ರಂದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಗುಂಡು ಹಾರಿಸಿದ್ದಾರೆ ಎಂದು ಬರೇಲಿಯ ಸ್ಥಳೀಯರು ಆರೋಪಿಸಿದ್ದಾರೆ.

ಘರ್ಷಣೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್ 26ರಂದು ನಡೆದ ಘಟನೆಯ ಹಿಂದೆ ‘ಯೋಜಿತ ಪಿತೂರಿ’ ಇದೆ. ಐಎಂಸಿ ಸದಸ್ಯರು ಕೇವಲ ಮನವಿ ಪತ್ರ ಸಲ್ಲಿಸುವ ಬದಲು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

‘ಐ ಲವ್ ಮುಹಮ್ಮದ್’ ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕೊತ್ವಾಲಿಯಲ್ಲಿ ಐದು, ಬರಾದರಿಯಲ್ಲಿ ಎರಡು ಮತ್ತು ಕಿಲಾ, ಕ್ಯಾಂಟ್ ಮತ್ತು ಪ್ರೇಮ್ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಎಫ್‌ಐಆರ್ ದಾಖಲಾಗಿದ್ದು, 125 ಜನರು ಮತ್ತು 3,000 ಗುರುತಿಸಲಾಗದ ವ್ಯಕ್ತಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೆಸರಿಸಲಾದ ಧಾರ್ಮಿಕ ನಾಯಕನೊಂದಿಗೆ ಸಂಪರ್ಕ ಹೊಂದಿದವರ ಆಸ್ತಿಗಳನ್ನು ಆಡಳಿತವು ಗುರಿಯಾಗಿಸಿಕೊಂಡಿದೆ. ಬರೇಲಿ ಅಭಿವೃದ್ಧಿ ಪ್ರಾಧಿಕಾರವು ಧರ್ಮಗುರುವಿಗೆ ಆಶ್ರಯ ನೀಡಿದ್ದ ಫಹಾಮ್ ಒಡೆತನದ ಹೋಟೆಲ್ ಸ್ಕೈಲಾರ್ಕ್ ಅನ್ನು ಸೀಲ್ ಮಾಡಿದೆ. ಮತ್ತೊಬ್ಬ ಆರೋಪಿಗೆ ಆಶ್ರಯ ನೀಡಿದ್ದ ಮೊಹಮ್ಮದ್ ಆರಿಫ್ ಒಡೆತನದ ಫಹಾಮ್ ಲಾನ್, ಫ್ಲೋರಾ ಗಾರ್ಡನ್ ಎಂಬ ಹೋಟೆಲ್‌ಗಳು, ಜಲ್ಸಾ ಗ್ರೀನ್ ಮ್ಯಾರೇಜ್ ಹಾಲ್ ಅನ್ನು ಅಧಿಕಾರಿಗಳು ಸೀಲ್ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಭಾರತವು ಸಂವಿಧಾನದ ಮೂಲಕ ಆಳಲ್ಪಡುತ್ತದೆ, ಬುಲ್ಡೋಜರ್ ನಿಯಮದಿಂದಲ್ಲ: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...