Homeಮುಖಪುಟನಿಮ್ಮನ್ನು ನಾಶಮಾಡುತ್ತೇವೆ, ಪಾಕಿಸ್ತಾನಕ್ಕೆ ಹೋಗಿ: ಮುಸ್ಲಿಮರ ವಿರುದ್ಧ ಯುಪಿ ಪೊಲೀಸರ ಅಟ್ಟಹಾಸ..

ನಿಮ್ಮನ್ನು ನಾಶಮಾಡುತ್ತೇವೆ, ಪಾಕಿಸ್ತಾನಕ್ಕೆ ಹೋಗಿ: ಮುಸ್ಲಿಮರ ವಿರುದ್ಧ ಯುಪಿ ಪೊಲೀಸರ ಅಟ್ಟಹಾಸ..

- Advertisement -
- Advertisement -

ಪಶ್ಚಿಮ ಉತ್ತರ ಪ್ರದೇಶದ ಸೂಕ್ಷ್ಮ ಪಟ್ಟಣವಾದ ಮೀರತ್‌ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಿಎಎ ವಿರೋಧಿ ಪ್ರತಿಭಟನಾನಿರತ ಮುಸ್ಲಿಮರ ವಿರುದ್ಧ ಕೋಮುವಾದಿ ಹೇಳಿಕೆ ನೀಡಿರುವುದು ವಿಡಿಯೋದಲ್ಲಿ ಚಿತ್ರೀಕರಣವಾಗಿದ್ದು ವಿವಾದ ಉಂಟುಮಾಡಿದೆ.

ಕಳೆದ ಶುಕ್ರವಾರ ಮುಸ್ಲಿಂ ಬಾಹುಳ್ಯವುಳ್ಳ ಪ್ರದೇಶದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾಗ ಮೀರತ್‌ ನಗರದ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅಖಿಲೇಶ್ ನಾರಾಯಣ್ ಸಿಂಗ್ “ಕಪ್ಪು ಮತ್ತು ಹಸಿರು ಬ್ಯಾಂಡ್‌ ಧರಿಸಿರುವವರು ಯಾರು? ಅವರಿಗೆ ಪಾಕಿಸ್ತಾನಕ್ಕೆ ಹೋಗಲು ಹೇಳು” ಎಂದು ನಿಂದಿಸಿದ್ದಾರೆ.

ವಿಡಿಯೋ ನೋಡಿ:

ನಿಮಗೆ ಇಲ್ಲಿರಲಿ ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ, ನೀವು ಇಲ್ಲಿಗೆ ಬಂದು ಅಲ್ಲಿರುವವರನ್ನು ಹೊಗಳಿದರೆ ನಾವು ಸುಮ್ಮನಿರಲು ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ನಾನು ಇಲ್ಲಿನ ಪ್ರತಿಯೊಬ್ಬರನ್ನು ಮನೆಯಿಂದ ಜೈಲಿಗೆ ಅಟ್ಟುತ್ತೇನೆ, ನಿಮ್ಮೆಲ್ಲರನ್ನು ನಾಶಮಾಡುತ್ತೇನೆ ಎಂದು ಸಹ ಪೊಲೀಸರು ಹೇಳಿದ್ದಾರೆ.

ಅಲ್ಲಿದ್ದ ಮೂವರು ಮುಸ್ಲಿಮರು ಪೊಲೀಸರ ಮಾತುಗಳಿಗೆ ಮರುಮಾತಾಡದೆ ಸುಮ್ಮನಿರುವುದು ಕಂಡುಬಂದಿದೆ. ಅವರು ಹು ಅಂತಷ್ಟೇ ಹೇಳಿದ್ದಾರೆ. ಈ ರೀತಿಯಾಗಿ ಪೊಲೀಸರು ದೌರ್ಜನ್ಯವೆಸಗಿರುವುದು ಸರಿಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುತ್ತಿದ್ದರು. ಹಾಗಾಗಿ ಹಾಗೆ ಹೇಳಿದೆವು ಅಷ್ಟೇ ಎಂದು ಪೊಲೀಸರು ಜಾರಿಕೊಂಡಿದ್ದಾರೆ.

ಕಳೆದ ವಾರ ಸಹ ಎರಡು ನಿಮಿಷದ 30 ಸೆಕೆಂಡ್‌ನ ವಿಡಿಯೋವೊಂದರಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ಗಳು ಹಿಂಸಾಚಾರ ನಡೆಯುತ್ತಿರುವ ರಸ್ತೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿರುವಾಗ ಅತ್ಯಂತ ನಿಂದನೀಯ ಮತ್ತು ಕೋಮು ಭಾಷೆಯನ್ನು ಬಳಸಿರುವುದು ಸಹ ಕಂಡುಬಂದಿದೆ.

“ನಾವು ನಿಮ್ಮನ್ನು ಭಾರತದಲ್ಲಿ ಉಳಿಯಲು ಬಿಡುವುದಿಲ್ಲ” ಎಂದು ಪೊಲೀಸ್‌ ಕೂಗಿ ಹೇಳುತ್ತಿರುವುದು ಕಂಡುಬಂದಿದೆ. ಏನೇ ಆದರೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಆಂದೋಲನಗಳ ವಿರುದ್ಧ ತಮ್ಮ ಸರ್ಕಾರದ ದಬ್ಬಾಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕ್ರಮದಿಂದ ಪ್ರತಿಭಟನಾಕಾರರು ಸುಮ್ಮನಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...