Homeಮುಖಪುಟಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಈ ಪ್ರಕರಣಕ್ಕೆ ಸಂಬಂಧಿಸಿದ ಠಾಣೆಯ ಇನ್‌ಚಾರ್ಜ್ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ - ಕಾನ್ಪುರ ಪೊಲೀಸ್

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದೈಹಿಕ ವಿಕಲಾಂಗ ಮಹಿಳೆಯೊಬ್ಬರು, ಮಗಳನ್ನು ಹುಡುಕಿ ಕೊಡಲು ಪೊಲೀಸರಿಗೆ ಅವರ ವಾಹನಗಳಿಗೆ ಡಿಸೇಲ್ ತುಂಬಿಸಲು 15 ಸಾವಿರ ರೂ. ನೀಡಿರುವುದಾಗಿ ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗುಡಿಯಾ ಎಂಬ ಹೆಸರಿನ ಈ ಮಹಿಳೆ, ‘ತನ್ನ ಅಪ್ರಾಪ್ತ ಮಗಳನ್ನು ಕಳೆದ ತಿಂಗಳು ಸಂಬಂಧಿಯೊಬ್ಬ ಅಪಹರಿಸಿದ್ದಾನೆ. ಪೊಲೀಸರಿಗೆ ಹುಡುಕಿ ಕೊಡಿ ಎಂದರೆ ವಾಹನಗಳಿಗೆ ಡಿಸೇಲ್ ಹಾಕಿಸು, ಹುಡುಕುತ್ತೇವೆ ಎಂದರು. ಅದಕ್ಕೇ ಸಂಬಂಧಿಕರೊಬ್ಬರ ಬಳಿ ಸಾಲ ಮಾಡಿ 15 ಸಾವಿರ ರೂ ನೀಡಿದ್ದೇನೆ’ ಎಂದು ಆರೋಪಿಸಿದ್ದಾರೆ.

ಈ ಕುರಿತು ಸೋಮವಾರ ಕಾನ್ಪುರ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿ ಹಣ ಪಡೆದ ಪೊಲೀಸರ ವಿರುದ್ದ ದೂರು ಸಲ್ಲಿಸಿದ್ದಾರೆ. ಆಯುಕ್ತರ ಕಚೇರಿಯ ಹೊರಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಗುಡಿಯಾ, ತಾನು ಅಲ್ಪ ಭೂ ಹಿಡುವಳಿ ಹೊಂದಿರುವ ವಿಧವೆ. ಕಳೆದ ತಿಂಗಳು ಕಾಣೆಯಾದ ತನ್ನ ಮಗಳ ಬಗ್ಗೆ ಪ್ರಕರಣ ದಾಖಲಿಸಿದ್ದೇನೆ. ಆದರೆ ಪೊಲೀಸರು ಆಕೆಗೆ ಸಹಾಯ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಪೊಲೀಸರು ‘ನಾವು ನೋಡುತ್ತಿದ್ದೇವೆ’ ಎಂದು ಹೇಳುತ್ತಾರೆ. ಕೆಲವೊಮ್ಮೆ ಅವರು ನನ್ನನ್ನು ದೂರವಿಡುತ್ತಾರೆ, ನನ್ನ ಮಗಳ ಚಾರಿತ್ರ್ಯವನ್ನೇ ಸಂಶಯಿಸುತ್ತಾರೆ. ಪೊಲೀಸರು ‘ನಮ್ಮ ವಾಹನಗಳಲ್ಲಿ ಡೀಸೆಲ್ ತುಂಬಿಸು ಮತ್ತು ನಿಮ್ಮ ಮಗಳನ್ನು ಹುಡುಕುತ್ತೇವೆ’ ಎಂದು ಹೇಳುತ್ತಾರೆ’ ಎಂದು ಗುಡಿಯಾ ಹೇಳಿದ್ದಾರೆ.

“ಕೆಲವೊಮ್ಮೆ ಅವರು, ಇಲ್ಲಿಂದ ಹೊರಟು ಹೋಗು ಎಂದು ಜೋರು ಮಾಡುತ್ತಾರೆ. ನಾನು ಪೊಲೀಸರಿಗೆ ಲಂಚ ನೀಡಿಲ್ಲ, ನಾನು ಸುಳ್ಳು ಹೇಳುವುದಿಲ್ಲ. ಆದರೆ ನಾನು ಅವರ ವಾಹನಗಳಲ್ಲಿ ಡೀಸೆಲ್ ತುಂಬಿಸಿದ್ದೇನೆ. ನಾನು 3-4 ಟ್ರಿಪ್‌ಗಳಿಗೆ ಪಾವತಿಸಿದ್ದೇನೆ. ಅಲ್ಲಿ ಸಂಬಂಧಪಟ್ಟ ಪೊಲೀಸ್ ಚೌಕಿಯಲ್ಲಿ ಇಬ್ಬರು ಸಿಬ್ಬಂದಿ ಇದ್ದಾರೆ, ಅವರಲ್ಲಿ ಒಬ್ಬರು ನನಗೆ ಸಹಾಯ ಮಾಡುತ್ತಿದ್ದಾರೆ, ಇನ್ನೊಬ್ಬರು ಇಲ್ಲ” ಎಂದು ಗುಡಿಯಾ ಹೇಳಿದ್ದಾರೆ.

ಡಿಸೇಲ್‌ಗಾಗಿ ಹಣವನ್ನು ವ್ಯವಸ್ಥೆ ಮಾಡಲು ಸಂಬಂಧಿಕರಿಂದ ಸಾಲ ಪಡೆದಿದ್ದೇನೆ ಎಂದು ಅವರು ಹೇಳಿದರು. “ನಾನು 10-15 ಸಾವಿರ ಮೌಲ್ಯದ ಡೀಸೆಲ್ ವ್ಯವಸ್ಥೆ ಮಾಡಿದ್ದೇನೆ ಎಂದು ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದೆ. ಇದೇ ರೀತಿ ಮುಂದುವರಿಯುವುದರೆ ಹೇಗೆ?” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಗುಡಿಯಾ ಮಾಧ್ಯಮಗಳ ಜೊತೆ ಮಾತನಾಡಿದ ವಿಡಿಯೋ ತುಣುಕುಗಳು ವೈರಲ್ ಆದ ನಂತರ, ಕಾನ್ಪುರ ಪೊಲೀಸರು ಸಂಬಂಧಿಸಿದ ಠಾಣಾ ಅಧಿಕಾರಿಯನ್ನು ಅಮಾನತ್ತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಆಯುಕ್ತರ ಕಚೇರಿಯಿಂದ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವಯಸ್ಸಾದ ಗುಡಿಯಾರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗುವ ವಿಡಿಯೋವನ್ನು ಪೊಲೀಸ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಮಗಳನ್ನು ಹುಡುಕಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

“ಈ ಪ್ರಕರಣದ ಬಗ್ಗೆ ತಕ್ಷಣ ಕ್ರಮಕೈಗೊಳ್ಳುವಂತೆ ನಾವು ಪೊಲೀಸ್ ಠಾಣೆಯ ಉಸ್ತುವಾರಿಗೆ ಆದೇಶಿಸಿದ್ದೇವೆ. ಗುಡಿಯಾ ಅವರ ಮಗಳನ್ನು ಶೀಘ್ರದಲ್ಲೆ ಹುಡುಕಿ ಕೊಡಲು ಪೊಲೀಸ್ ತಂಡಕ್ಕೆ ನೆರವು ನಿಡಲು ಸೂಚಿಸಿದ್ದೇವೆ. ಗುಡಿಯಾ ಅವರ ಎಲ್ಲಾ ಆರೋಪಗಳನ್ನು ಪರಿಶೀಲಿಸಲಾಗುವುದು ಮತ್ತು ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಬ್ರಜೇಶ್ ಕುಮಾರ್ ಶ್ರೀವಾಸ್ತವ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...