Homeಮುಖಪುಟಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಈ ಪ್ರಕರಣಕ್ಕೆ ಸಂಬಂಧಿಸಿದ ಠಾಣೆಯ ಇನ್‌ಚಾರ್ಜ್ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ - ಕಾನ್ಪುರ ಪೊಲೀಸ್

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದೈಹಿಕ ವಿಕಲಾಂಗ ಮಹಿಳೆಯೊಬ್ಬರು, ಮಗಳನ್ನು ಹುಡುಕಿ ಕೊಡಲು ಪೊಲೀಸರಿಗೆ ಅವರ ವಾಹನಗಳಿಗೆ ಡಿಸೇಲ್ ತುಂಬಿಸಲು 15 ಸಾವಿರ ರೂ. ನೀಡಿರುವುದಾಗಿ ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗುಡಿಯಾ ಎಂಬ ಹೆಸರಿನ ಈ ಮಹಿಳೆ, ‘ತನ್ನ ಅಪ್ರಾಪ್ತ ಮಗಳನ್ನು ಕಳೆದ ತಿಂಗಳು ಸಂಬಂಧಿಯೊಬ್ಬ ಅಪಹರಿಸಿದ್ದಾನೆ. ಪೊಲೀಸರಿಗೆ ಹುಡುಕಿ ಕೊಡಿ ಎಂದರೆ ವಾಹನಗಳಿಗೆ ಡಿಸೇಲ್ ಹಾಕಿಸು, ಹುಡುಕುತ್ತೇವೆ ಎಂದರು. ಅದಕ್ಕೇ ಸಂಬಂಧಿಕರೊಬ್ಬರ ಬಳಿ ಸಾಲ ಮಾಡಿ 15 ಸಾವಿರ ರೂ ನೀಡಿದ್ದೇನೆ’ ಎಂದು ಆರೋಪಿಸಿದ್ದಾರೆ.

ಈ ಕುರಿತು ಸೋಮವಾರ ಕಾನ್ಪುರ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿ ಹಣ ಪಡೆದ ಪೊಲೀಸರ ವಿರುದ್ದ ದೂರು ಸಲ್ಲಿಸಿದ್ದಾರೆ. ಆಯುಕ್ತರ ಕಚೇರಿಯ ಹೊರಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಗುಡಿಯಾ, ತಾನು ಅಲ್ಪ ಭೂ ಹಿಡುವಳಿ ಹೊಂದಿರುವ ವಿಧವೆ. ಕಳೆದ ತಿಂಗಳು ಕಾಣೆಯಾದ ತನ್ನ ಮಗಳ ಬಗ್ಗೆ ಪ್ರಕರಣ ದಾಖಲಿಸಿದ್ದೇನೆ. ಆದರೆ ಪೊಲೀಸರು ಆಕೆಗೆ ಸಹಾಯ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಪೊಲೀಸರು ‘ನಾವು ನೋಡುತ್ತಿದ್ದೇವೆ’ ಎಂದು ಹೇಳುತ್ತಾರೆ. ಕೆಲವೊಮ್ಮೆ ಅವರು ನನ್ನನ್ನು ದೂರವಿಡುತ್ತಾರೆ, ನನ್ನ ಮಗಳ ಚಾರಿತ್ರ್ಯವನ್ನೇ ಸಂಶಯಿಸುತ್ತಾರೆ. ಪೊಲೀಸರು ‘ನಮ್ಮ ವಾಹನಗಳಲ್ಲಿ ಡೀಸೆಲ್ ತುಂಬಿಸು ಮತ್ತು ನಿಮ್ಮ ಮಗಳನ್ನು ಹುಡುಕುತ್ತೇವೆ’ ಎಂದು ಹೇಳುತ್ತಾರೆ’ ಎಂದು ಗುಡಿಯಾ ಹೇಳಿದ್ದಾರೆ.

“ಕೆಲವೊಮ್ಮೆ ಅವರು, ಇಲ್ಲಿಂದ ಹೊರಟು ಹೋಗು ಎಂದು ಜೋರು ಮಾಡುತ್ತಾರೆ. ನಾನು ಪೊಲೀಸರಿಗೆ ಲಂಚ ನೀಡಿಲ್ಲ, ನಾನು ಸುಳ್ಳು ಹೇಳುವುದಿಲ್ಲ. ಆದರೆ ನಾನು ಅವರ ವಾಹನಗಳಲ್ಲಿ ಡೀಸೆಲ್ ತುಂಬಿಸಿದ್ದೇನೆ. ನಾನು 3-4 ಟ್ರಿಪ್‌ಗಳಿಗೆ ಪಾವತಿಸಿದ್ದೇನೆ. ಅಲ್ಲಿ ಸಂಬಂಧಪಟ್ಟ ಪೊಲೀಸ್ ಚೌಕಿಯಲ್ಲಿ ಇಬ್ಬರು ಸಿಬ್ಬಂದಿ ಇದ್ದಾರೆ, ಅವರಲ್ಲಿ ಒಬ್ಬರು ನನಗೆ ಸಹಾಯ ಮಾಡುತ್ತಿದ್ದಾರೆ, ಇನ್ನೊಬ್ಬರು ಇಲ್ಲ” ಎಂದು ಗುಡಿಯಾ ಹೇಳಿದ್ದಾರೆ.

ಡಿಸೇಲ್‌ಗಾಗಿ ಹಣವನ್ನು ವ್ಯವಸ್ಥೆ ಮಾಡಲು ಸಂಬಂಧಿಕರಿಂದ ಸಾಲ ಪಡೆದಿದ್ದೇನೆ ಎಂದು ಅವರು ಹೇಳಿದರು. “ನಾನು 10-15 ಸಾವಿರ ಮೌಲ್ಯದ ಡೀಸೆಲ್ ವ್ಯವಸ್ಥೆ ಮಾಡಿದ್ದೇನೆ ಎಂದು ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದೆ. ಇದೇ ರೀತಿ ಮುಂದುವರಿಯುವುದರೆ ಹೇಗೆ?” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಗುಡಿಯಾ ಮಾಧ್ಯಮಗಳ ಜೊತೆ ಮಾತನಾಡಿದ ವಿಡಿಯೋ ತುಣುಕುಗಳು ವೈರಲ್ ಆದ ನಂತರ, ಕಾನ್ಪುರ ಪೊಲೀಸರು ಸಂಬಂಧಿಸಿದ ಠಾಣಾ ಅಧಿಕಾರಿಯನ್ನು ಅಮಾನತ್ತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಆಯುಕ್ತರ ಕಚೇರಿಯಿಂದ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವಯಸ್ಸಾದ ಗುಡಿಯಾರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗುವ ವಿಡಿಯೋವನ್ನು ಪೊಲೀಸ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಮಗಳನ್ನು ಹುಡುಕಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

“ಈ ಪ್ರಕರಣದ ಬಗ್ಗೆ ತಕ್ಷಣ ಕ್ರಮಕೈಗೊಳ್ಳುವಂತೆ ನಾವು ಪೊಲೀಸ್ ಠಾಣೆಯ ಉಸ್ತುವಾರಿಗೆ ಆದೇಶಿಸಿದ್ದೇವೆ. ಗುಡಿಯಾ ಅವರ ಮಗಳನ್ನು ಶೀಘ್ರದಲ್ಲೆ ಹುಡುಕಿ ಕೊಡಲು ಪೊಲೀಸ್ ತಂಡಕ್ಕೆ ನೆರವು ನಿಡಲು ಸೂಚಿಸಿದ್ದೇವೆ. ಗುಡಿಯಾ ಅವರ ಎಲ್ಲಾ ಆರೋಪಗಳನ್ನು ಪರಿಶೀಲಿಸಲಾಗುವುದು ಮತ್ತು ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಬ್ರಜೇಶ್ ಕುಮಾರ್ ಶ್ರೀವಾಸ್ತವ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....