Homeಮುಖಪುಟಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಈ ಪ್ರಕರಣಕ್ಕೆ ಸಂಬಂಧಿಸಿದ ಠಾಣೆಯ ಇನ್‌ಚಾರ್ಜ್ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ - ಕಾನ್ಪುರ ಪೊಲೀಸ್

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದೈಹಿಕ ವಿಕಲಾಂಗ ಮಹಿಳೆಯೊಬ್ಬರು, ಮಗಳನ್ನು ಹುಡುಕಿ ಕೊಡಲು ಪೊಲೀಸರಿಗೆ ಅವರ ವಾಹನಗಳಿಗೆ ಡಿಸೇಲ್ ತುಂಬಿಸಲು 15 ಸಾವಿರ ರೂ. ನೀಡಿರುವುದಾಗಿ ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗುಡಿಯಾ ಎಂಬ ಹೆಸರಿನ ಈ ಮಹಿಳೆ, ‘ತನ್ನ ಅಪ್ರಾಪ್ತ ಮಗಳನ್ನು ಕಳೆದ ತಿಂಗಳು ಸಂಬಂಧಿಯೊಬ್ಬ ಅಪಹರಿಸಿದ್ದಾನೆ. ಪೊಲೀಸರಿಗೆ ಹುಡುಕಿ ಕೊಡಿ ಎಂದರೆ ವಾಹನಗಳಿಗೆ ಡಿಸೇಲ್ ಹಾಕಿಸು, ಹುಡುಕುತ್ತೇವೆ ಎಂದರು. ಅದಕ್ಕೇ ಸಂಬಂಧಿಕರೊಬ್ಬರ ಬಳಿ ಸಾಲ ಮಾಡಿ 15 ಸಾವಿರ ರೂ ನೀಡಿದ್ದೇನೆ’ ಎಂದು ಆರೋಪಿಸಿದ್ದಾರೆ.

ಈ ಕುರಿತು ಸೋಮವಾರ ಕಾನ್ಪುರ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿ ಹಣ ಪಡೆದ ಪೊಲೀಸರ ವಿರುದ್ದ ದೂರು ಸಲ್ಲಿಸಿದ್ದಾರೆ. ಆಯುಕ್ತರ ಕಚೇರಿಯ ಹೊರಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಗುಡಿಯಾ, ತಾನು ಅಲ್ಪ ಭೂ ಹಿಡುವಳಿ ಹೊಂದಿರುವ ವಿಧವೆ. ಕಳೆದ ತಿಂಗಳು ಕಾಣೆಯಾದ ತನ್ನ ಮಗಳ ಬಗ್ಗೆ ಪ್ರಕರಣ ದಾಖಲಿಸಿದ್ದೇನೆ. ಆದರೆ ಪೊಲೀಸರು ಆಕೆಗೆ ಸಹಾಯ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಪೊಲೀಸರು ‘ನಾವು ನೋಡುತ್ತಿದ್ದೇವೆ’ ಎಂದು ಹೇಳುತ್ತಾರೆ. ಕೆಲವೊಮ್ಮೆ ಅವರು ನನ್ನನ್ನು ದೂರವಿಡುತ್ತಾರೆ, ನನ್ನ ಮಗಳ ಚಾರಿತ್ರ್ಯವನ್ನೇ ಸಂಶಯಿಸುತ್ತಾರೆ. ಪೊಲೀಸರು ‘ನಮ್ಮ ವಾಹನಗಳಲ್ಲಿ ಡೀಸೆಲ್ ತುಂಬಿಸು ಮತ್ತು ನಿಮ್ಮ ಮಗಳನ್ನು ಹುಡುಕುತ್ತೇವೆ’ ಎಂದು ಹೇಳುತ್ತಾರೆ’ ಎಂದು ಗುಡಿಯಾ ಹೇಳಿದ್ದಾರೆ.

“ಕೆಲವೊಮ್ಮೆ ಅವರು, ಇಲ್ಲಿಂದ ಹೊರಟು ಹೋಗು ಎಂದು ಜೋರು ಮಾಡುತ್ತಾರೆ. ನಾನು ಪೊಲೀಸರಿಗೆ ಲಂಚ ನೀಡಿಲ್ಲ, ನಾನು ಸುಳ್ಳು ಹೇಳುವುದಿಲ್ಲ. ಆದರೆ ನಾನು ಅವರ ವಾಹನಗಳಲ್ಲಿ ಡೀಸೆಲ್ ತುಂಬಿಸಿದ್ದೇನೆ. ನಾನು 3-4 ಟ್ರಿಪ್‌ಗಳಿಗೆ ಪಾವತಿಸಿದ್ದೇನೆ. ಅಲ್ಲಿ ಸಂಬಂಧಪಟ್ಟ ಪೊಲೀಸ್ ಚೌಕಿಯಲ್ಲಿ ಇಬ್ಬರು ಸಿಬ್ಬಂದಿ ಇದ್ದಾರೆ, ಅವರಲ್ಲಿ ಒಬ್ಬರು ನನಗೆ ಸಹಾಯ ಮಾಡುತ್ತಿದ್ದಾರೆ, ಇನ್ನೊಬ್ಬರು ಇಲ್ಲ” ಎಂದು ಗುಡಿಯಾ ಹೇಳಿದ್ದಾರೆ.

ಡಿಸೇಲ್‌ಗಾಗಿ ಹಣವನ್ನು ವ್ಯವಸ್ಥೆ ಮಾಡಲು ಸಂಬಂಧಿಕರಿಂದ ಸಾಲ ಪಡೆದಿದ್ದೇನೆ ಎಂದು ಅವರು ಹೇಳಿದರು. “ನಾನು 10-15 ಸಾವಿರ ಮೌಲ್ಯದ ಡೀಸೆಲ್ ವ್ಯವಸ್ಥೆ ಮಾಡಿದ್ದೇನೆ ಎಂದು ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದೆ. ಇದೇ ರೀತಿ ಮುಂದುವರಿಯುವುದರೆ ಹೇಗೆ?” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಗುಡಿಯಾ ಮಾಧ್ಯಮಗಳ ಜೊತೆ ಮಾತನಾಡಿದ ವಿಡಿಯೋ ತುಣುಕುಗಳು ವೈರಲ್ ಆದ ನಂತರ, ಕಾನ್ಪುರ ಪೊಲೀಸರು ಸಂಬಂಧಿಸಿದ ಠಾಣಾ ಅಧಿಕಾರಿಯನ್ನು ಅಮಾನತ್ತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಆಯುಕ್ತರ ಕಚೇರಿಯಿಂದ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವಯಸ್ಸಾದ ಗುಡಿಯಾರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗುವ ವಿಡಿಯೋವನ್ನು ಪೊಲೀಸ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಮಗಳನ್ನು ಹುಡುಕಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

“ಈ ಪ್ರಕರಣದ ಬಗ್ಗೆ ತಕ್ಷಣ ಕ್ರಮಕೈಗೊಳ್ಳುವಂತೆ ನಾವು ಪೊಲೀಸ್ ಠಾಣೆಯ ಉಸ್ತುವಾರಿಗೆ ಆದೇಶಿಸಿದ್ದೇವೆ. ಗುಡಿಯಾ ಅವರ ಮಗಳನ್ನು ಶೀಘ್ರದಲ್ಲೆ ಹುಡುಕಿ ಕೊಡಲು ಪೊಲೀಸ್ ತಂಡಕ್ಕೆ ನೆರವು ನಿಡಲು ಸೂಚಿಸಿದ್ದೇವೆ. ಗುಡಿಯಾ ಅವರ ಎಲ್ಲಾ ಆರೋಪಗಳನ್ನು ಪರಿಶೀಲಿಸಲಾಗುವುದು ಮತ್ತು ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಬ್ರಜೇಶ್ ಕುಮಾರ್ ಶ್ರೀವಾಸ್ತವ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...