Homeಮುಖಪುಟಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಮಗಳನ್ನು ಹುಡುಕಿ ಕೊಡಲು ಡಿಸೇಲ್‌ಗೆಂದು 15 ಸಾವಿರ ಪಡೆದ ಯುಪಿ ಪೊಲೀಸರು: ಮಹಿಳೆಯ ಆರೋಪ

ಈ ಪ್ರಕರಣಕ್ಕೆ ಸಂಬಂಧಿಸಿದ ಠಾಣೆಯ ಇನ್‌ಚಾರ್ಜ್ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ - ಕಾನ್ಪುರ ಪೊಲೀಸ್

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದೈಹಿಕ ವಿಕಲಾಂಗ ಮಹಿಳೆಯೊಬ್ಬರು, ಮಗಳನ್ನು ಹುಡುಕಿ ಕೊಡಲು ಪೊಲೀಸರಿಗೆ ಅವರ ವಾಹನಗಳಿಗೆ ಡಿಸೇಲ್ ತುಂಬಿಸಲು 15 ಸಾವಿರ ರೂ. ನೀಡಿರುವುದಾಗಿ ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗುಡಿಯಾ ಎಂಬ ಹೆಸರಿನ ಈ ಮಹಿಳೆ, ‘ತನ್ನ ಅಪ್ರಾಪ್ತ ಮಗಳನ್ನು ಕಳೆದ ತಿಂಗಳು ಸಂಬಂಧಿಯೊಬ್ಬ ಅಪಹರಿಸಿದ್ದಾನೆ. ಪೊಲೀಸರಿಗೆ ಹುಡುಕಿ ಕೊಡಿ ಎಂದರೆ ವಾಹನಗಳಿಗೆ ಡಿಸೇಲ್ ಹಾಕಿಸು, ಹುಡುಕುತ್ತೇವೆ ಎಂದರು. ಅದಕ್ಕೇ ಸಂಬಂಧಿಕರೊಬ್ಬರ ಬಳಿ ಸಾಲ ಮಾಡಿ 15 ಸಾವಿರ ರೂ ನೀಡಿದ್ದೇನೆ’ ಎಂದು ಆರೋಪಿಸಿದ್ದಾರೆ.

ಈ ಕುರಿತು ಸೋಮವಾರ ಕಾನ್ಪುರ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿ ಹಣ ಪಡೆದ ಪೊಲೀಸರ ವಿರುದ್ದ ದೂರು ಸಲ್ಲಿಸಿದ್ದಾರೆ. ಆಯುಕ್ತರ ಕಚೇರಿಯ ಹೊರಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಗುಡಿಯಾ, ತಾನು ಅಲ್ಪ ಭೂ ಹಿಡುವಳಿ ಹೊಂದಿರುವ ವಿಧವೆ. ಕಳೆದ ತಿಂಗಳು ಕಾಣೆಯಾದ ತನ್ನ ಮಗಳ ಬಗ್ಗೆ ಪ್ರಕರಣ ದಾಖಲಿಸಿದ್ದೇನೆ. ಆದರೆ ಪೊಲೀಸರು ಆಕೆಗೆ ಸಹಾಯ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಪೊಲೀಸರು ‘ನಾವು ನೋಡುತ್ತಿದ್ದೇವೆ’ ಎಂದು ಹೇಳುತ್ತಾರೆ. ಕೆಲವೊಮ್ಮೆ ಅವರು ನನ್ನನ್ನು ದೂರವಿಡುತ್ತಾರೆ, ನನ್ನ ಮಗಳ ಚಾರಿತ್ರ್ಯವನ್ನೇ ಸಂಶಯಿಸುತ್ತಾರೆ. ಪೊಲೀಸರು ‘ನಮ್ಮ ವಾಹನಗಳಲ್ಲಿ ಡೀಸೆಲ್ ತುಂಬಿಸು ಮತ್ತು ನಿಮ್ಮ ಮಗಳನ್ನು ಹುಡುಕುತ್ತೇವೆ’ ಎಂದು ಹೇಳುತ್ತಾರೆ’ ಎಂದು ಗುಡಿಯಾ ಹೇಳಿದ್ದಾರೆ.

“ಕೆಲವೊಮ್ಮೆ ಅವರು, ಇಲ್ಲಿಂದ ಹೊರಟು ಹೋಗು ಎಂದು ಜೋರು ಮಾಡುತ್ತಾರೆ. ನಾನು ಪೊಲೀಸರಿಗೆ ಲಂಚ ನೀಡಿಲ್ಲ, ನಾನು ಸುಳ್ಳು ಹೇಳುವುದಿಲ್ಲ. ಆದರೆ ನಾನು ಅವರ ವಾಹನಗಳಲ್ಲಿ ಡೀಸೆಲ್ ತುಂಬಿಸಿದ್ದೇನೆ. ನಾನು 3-4 ಟ್ರಿಪ್‌ಗಳಿಗೆ ಪಾವತಿಸಿದ್ದೇನೆ. ಅಲ್ಲಿ ಸಂಬಂಧಪಟ್ಟ ಪೊಲೀಸ್ ಚೌಕಿಯಲ್ಲಿ ಇಬ್ಬರು ಸಿಬ್ಬಂದಿ ಇದ್ದಾರೆ, ಅವರಲ್ಲಿ ಒಬ್ಬರು ನನಗೆ ಸಹಾಯ ಮಾಡುತ್ತಿದ್ದಾರೆ, ಇನ್ನೊಬ್ಬರು ಇಲ್ಲ” ಎಂದು ಗುಡಿಯಾ ಹೇಳಿದ್ದಾರೆ.

ಡಿಸೇಲ್‌ಗಾಗಿ ಹಣವನ್ನು ವ್ಯವಸ್ಥೆ ಮಾಡಲು ಸಂಬಂಧಿಕರಿಂದ ಸಾಲ ಪಡೆದಿದ್ದೇನೆ ಎಂದು ಅವರು ಹೇಳಿದರು. “ನಾನು 10-15 ಸಾವಿರ ಮೌಲ್ಯದ ಡೀಸೆಲ್ ವ್ಯವಸ್ಥೆ ಮಾಡಿದ್ದೇನೆ ಎಂದು ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದೆ. ಇದೇ ರೀತಿ ಮುಂದುವರಿಯುವುದರೆ ಹೇಗೆ?” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಗುಡಿಯಾ ಮಾಧ್ಯಮಗಳ ಜೊತೆ ಮಾತನಾಡಿದ ವಿಡಿಯೋ ತುಣುಕುಗಳು ವೈರಲ್ ಆದ ನಂತರ, ಕಾನ್ಪುರ ಪೊಲೀಸರು ಸಂಬಂಧಿಸಿದ ಠಾಣಾ ಅಧಿಕಾರಿಯನ್ನು ಅಮಾನತ್ತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಆಯುಕ್ತರ ಕಚೇರಿಯಿಂದ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವಯಸ್ಸಾದ ಗುಡಿಯಾರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗುವ ವಿಡಿಯೋವನ್ನು ಪೊಲೀಸ್ ಹ್ಯಾಂಡಲ್ ಟ್ವೀಟ್ ಮಾಡಿದೆ. ಮಗಳನ್ನು ಹುಡುಕಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.

“ಈ ಪ್ರಕರಣದ ಬಗ್ಗೆ ತಕ್ಷಣ ಕ್ರಮಕೈಗೊಳ್ಳುವಂತೆ ನಾವು ಪೊಲೀಸ್ ಠಾಣೆಯ ಉಸ್ತುವಾರಿಗೆ ಆದೇಶಿಸಿದ್ದೇವೆ. ಗುಡಿಯಾ ಅವರ ಮಗಳನ್ನು ಶೀಘ್ರದಲ್ಲೆ ಹುಡುಕಿ ಕೊಡಲು ಪೊಲೀಸ್ ತಂಡಕ್ಕೆ ನೆರವು ನಿಡಲು ಸೂಚಿಸಿದ್ದೇವೆ. ಗುಡಿಯಾ ಅವರ ಎಲ್ಲಾ ಆರೋಪಗಳನ್ನು ಪರಿಶೀಲಿಸಲಾಗುವುದು ಮತ್ತು ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಬ್ರಜೇಶ್ ಕುಮಾರ್ ಶ್ರೀವಾಸ್ತವ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...