Homeಮುಖಪುಟಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

ಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪಕ್ಷಾಂತರ ಪರ್ವವೂ ಆರಂಭಗೊಂಡಿದೆ. ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರತೊಡಗಿದ್ದಾರೆ. ಬಿಎಸ್‌ಪಿಯ 9 ಶಾಸಕರು ನಿನ್ನೆ ಮಂಗಳವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಆದರೆ ಇವರು ತಮ್ಮ ಪಕ್ಷದ ಶಾಸಕರೇ ಅಲ್ಲ. ಬಿಎಸ್‌ಪಿಯಿಂದ ಈ 9 ಜನರನ್ನು ಬಹಳ ಹಿಂದೆಯೇ ಅಮಾನತು ಮಾಡಲಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ. ಬಿಎಸ್‌ಪಿಯ ನಾಯಕರು ಸಮಾಜವಾದಿ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಂತೆ ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಟೀಕಾ ಪ್ರಹಾರವನ್ನೇ ಆರಂಭಿಸಿದ್ದಾರೆ.

ಒಂದು ಕಾಲದಲ್ಲಿ ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಕಳೆದ ಲೋಕಸಭೆ ಚುನಾವಣೆಯನ್ನು ಎರಡು ಪಕ್ಷಗಳು ಒಟ್ಟಾಗಿ ಎದುರಿಸಿದ್ದವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಬಿಎಸ್‌ಪಿ ಮತ್ತು ಎಸ್‌ಪಿ ನಡುವಿನ ಅಂತರ ಹೆಚ್ಚಿದೆ. ಎರಡು ಪಕ್ಷಗಳ ನಾಯಕರು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬಿಎಸ್‌ಪಿಯ ಶಾಸಕರು ಸಮಾಜವಾದಿ ಪಕ್ಷದ ದಾರಿ ಹಿಡಿದಿರುವುದು ಮಾಯವತಿಗೆ ನುಂಗಲಾರದ ತುತ್ತಾಗಿ ಮಾರ್ಪಟ್ಟಿದೆ. ವಿಧಾನ ಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಬಿಎಸ್‌ಪಿಯು ಸಮಾಜವಾದಿ ಪಕ್ಷವನ್ನು ತನ್ನ ಮುಖ್ಯ ಎದುರಾಳಿಯನ್ನಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಜೊತೆಗೆ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳಲು ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಮಧ್ಯಪ್ರದೇಶ: ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್​ ಪತ್ತೆ

ಸಮಾಜವಾದಿ ಪಕ್ಷವು ಬಿಎಸ್‌ಪಿಯ ಕೆಲವು ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲೇ ಸಮಾಜವಾದಿ ಪಕ್ಷವನ್ನು ಸೇರಲಿದ್ದಾರೆ ಎಂದು ಮಾಧ್ಯಮಗಳ ಮೂಲಕ ಬಿಂಬಿಸುತ್ತಿದೆ. ಆದರೆ ಸಮಾಜವಾದಿ ಪಕ್ಷದ ಸಂಪರ್ಕದಲ್ಲಿರುವ ಶಾಸಕರು ಬಿಎಸ್‌ಪಿಯಿಂದ ಈಗಾಗಲೇ ಅಮಾನತುಗೊಂಡವರಾಗಿದ್ದಾರೆ. ಸಮಾಜವಾದಿ ಪಕ್ಷಕ್ಕೆ ಕನಿಷ್ಠ ಪ್ರಾಮಾಣಿಕತೆಯಿದ್ದರೆ ಸಂಪರ್ಕದಲ್ಲಿರುವ ಬಿಎಸ್‌ಪಿ ಶಾಸಕರ ಹೆಸರನ್ನು ಬಹಿರಂಗಗೊಳಿಸಲಿ. ಒಂದು ವೇಳೆ ಸಮಾಜವಾದಿ ಪಕ್ಷವು  ಬಿಎಸ್‌ಪಿಯಿಂದ ಅಮಾನತುಗೊಂಡ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಸಮಾಜವಾದಿ ಪಕ್ಷ ಎರಡು ಹೋಳಾಗುತ್ತದೆ. ಸಮಾಜವಾದಿ ಪಕ್ಷ ದಲಿತ ವಿರೋಧಿ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿಯೆ ಹಿಂದೆ ರಾಜ್ಯ ಸಭೆ ಚುನಾವಣೆಯಲ್ಲಿ ಬಿಎಸ್‌ಪಿಯ ಕೆಲವು ಶಾಸಕರನ್ನು ಸೆಳೆದು ದಲಿತ ಅಭ್ಯರ್ಥಿಯನ್ನು ಸೋಲಿಸಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರಣಿ ಟ್ವೀಟ್ ಮೂಲಕ ಸಮಾಜವಾದಿ ಪಕ್ಷದ ವಿರುದ್ಧ ಕೆಂಡ ಕಾರಿದ್ದಾರೆ.

ಲಾಲ್‌ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬಾರ್ ಹಿಂದೆ ಬಿಎಸ್‌ಪಿಯನ್ನು ತೊರೆದಿದ್ದರು. ಇವರಿಬ್ಬರು ಅತ್ಯಂತ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು. ಬಿಎಸ್‌ಪಿಯ ಸ್ಥಾಪಕ ಸದಸ್ಯರಾದ ಇವರಿಬ್ಬರು ಬಿಎಸ್‌ಪಿ ತೊರೆದಿರುವುದು ಮಾಯಾವತಿಯವರ ಬಿಎಸ್‌ಪಿಗೆ ಉತ್ತರ ಪ್ರದೇಶದಲ್ಲಿ ದೊಡ್ಡ ಹೊಡೆತವನ್ನು ನೀಡಿದೆ.

ಇವರ ಬೆನ್ನಲ್ಲೇ ಕಳೆದ ವರ್ಷ ಅಸ್ಲಾಮ್ ಚೌಧರಿ, ಅಸ್ಲಾಮ ರೈನಿ, ಮುಝ್ತಬಾ ಸಿದ್ಧಿಕಿ, ಹಕಮ್ ಲಾಲ್ ಬಿಂಡ್ ಮತ್ತು ಗೋವಿಂದ್ ಜಾಟವ್ ಎಂಬ 5 ಜನ ಶಾಸಕರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಸೇರಿದ್ದರು.

ಇದನ್ನೂ ಓದಿ : ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...