Homeಮುಖಪುಟಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

ಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪಕ್ಷಾಂತರ ಪರ್ವವೂ ಆರಂಭಗೊಂಡಿದೆ. ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರತೊಡಗಿದ್ದಾರೆ. ಬಿಎಸ್‌ಪಿಯ 9 ಶಾಸಕರು ನಿನ್ನೆ ಮಂಗಳವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಆದರೆ ಇವರು ತಮ್ಮ ಪಕ್ಷದ ಶಾಸಕರೇ ಅಲ್ಲ. ಬಿಎಸ್‌ಪಿಯಿಂದ ಈ 9 ಜನರನ್ನು ಬಹಳ ಹಿಂದೆಯೇ ಅಮಾನತು ಮಾಡಲಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ. ಬಿಎಸ್‌ಪಿಯ ನಾಯಕರು ಸಮಾಜವಾದಿ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಂತೆ ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಟೀಕಾ ಪ್ರಹಾರವನ್ನೇ ಆರಂಭಿಸಿದ್ದಾರೆ.

ಒಂದು ಕಾಲದಲ್ಲಿ ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಕಳೆದ ಲೋಕಸಭೆ ಚುನಾವಣೆಯನ್ನು ಎರಡು ಪಕ್ಷಗಳು ಒಟ್ಟಾಗಿ ಎದುರಿಸಿದ್ದವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಬಿಎಸ್‌ಪಿ ಮತ್ತು ಎಸ್‌ಪಿ ನಡುವಿನ ಅಂತರ ಹೆಚ್ಚಿದೆ. ಎರಡು ಪಕ್ಷಗಳ ನಾಯಕರು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬಿಎಸ್‌ಪಿಯ ಶಾಸಕರು ಸಮಾಜವಾದಿ ಪಕ್ಷದ ದಾರಿ ಹಿಡಿದಿರುವುದು ಮಾಯವತಿಗೆ ನುಂಗಲಾರದ ತುತ್ತಾಗಿ ಮಾರ್ಪಟ್ಟಿದೆ. ವಿಧಾನ ಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಬಿಎಸ್‌ಪಿಯು ಸಮಾಜವಾದಿ ಪಕ್ಷವನ್ನು ತನ್ನ ಮುಖ್ಯ ಎದುರಾಳಿಯನ್ನಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಜೊತೆಗೆ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳಲು ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಮಧ್ಯಪ್ರದೇಶ: ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್​ ಪತ್ತೆ

ಸಮಾಜವಾದಿ ಪಕ್ಷವು ಬಿಎಸ್‌ಪಿಯ ಕೆಲವು ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲೇ ಸಮಾಜವಾದಿ ಪಕ್ಷವನ್ನು ಸೇರಲಿದ್ದಾರೆ ಎಂದು ಮಾಧ್ಯಮಗಳ ಮೂಲಕ ಬಿಂಬಿಸುತ್ತಿದೆ. ಆದರೆ ಸಮಾಜವಾದಿ ಪಕ್ಷದ ಸಂಪರ್ಕದಲ್ಲಿರುವ ಶಾಸಕರು ಬಿಎಸ್‌ಪಿಯಿಂದ ಈಗಾಗಲೇ ಅಮಾನತುಗೊಂಡವರಾಗಿದ್ದಾರೆ. ಸಮಾಜವಾದಿ ಪಕ್ಷಕ್ಕೆ ಕನಿಷ್ಠ ಪ್ರಾಮಾಣಿಕತೆಯಿದ್ದರೆ ಸಂಪರ್ಕದಲ್ಲಿರುವ ಬಿಎಸ್‌ಪಿ ಶಾಸಕರ ಹೆಸರನ್ನು ಬಹಿರಂಗಗೊಳಿಸಲಿ. ಒಂದು ವೇಳೆ ಸಮಾಜವಾದಿ ಪಕ್ಷವು  ಬಿಎಸ್‌ಪಿಯಿಂದ ಅಮಾನತುಗೊಂಡ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಸಮಾಜವಾದಿ ಪಕ್ಷ ಎರಡು ಹೋಳಾಗುತ್ತದೆ. ಸಮಾಜವಾದಿ ಪಕ್ಷ ದಲಿತ ವಿರೋಧಿ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿಯೆ ಹಿಂದೆ ರಾಜ್ಯ ಸಭೆ ಚುನಾವಣೆಯಲ್ಲಿ ಬಿಎಸ್‌ಪಿಯ ಕೆಲವು ಶಾಸಕರನ್ನು ಸೆಳೆದು ದಲಿತ ಅಭ್ಯರ್ಥಿಯನ್ನು ಸೋಲಿಸಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರಣಿ ಟ್ವೀಟ್ ಮೂಲಕ ಸಮಾಜವಾದಿ ಪಕ್ಷದ ವಿರುದ್ಧ ಕೆಂಡ ಕಾರಿದ್ದಾರೆ.

ಲಾಲ್‌ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬಾರ್ ಹಿಂದೆ ಬಿಎಸ್‌ಪಿಯನ್ನು ತೊರೆದಿದ್ದರು. ಇವರಿಬ್ಬರು ಅತ್ಯಂತ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು. ಬಿಎಸ್‌ಪಿಯ ಸ್ಥಾಪಕ ಸದಸ್ಯರಾದ ಇವರಿಬ್ಬರು ಬಿಎಸ್‌ಪಿ ತೊರೆದಿರುವುದು ಮಾಯಾವತಿಯವರ ಬಿಎಸ್‌ಪಿಗೆ ಉತ್ತರ ಪ್ರದೇಶದಲ್ಲಿ ದೊಡ್ಡ ಹೊಡೆತವನ್ನು ನೀಡಿದೆ.

ಇವರ ಬೆನ್ನಲ್ಲೇ ಕಳೆದ ವರ್ಷ ಅಸ್ಲಾಮ್ ಚೌಧರಿ, ಅಸ್ಲಾಮ ರೈನಿ, ಮುಝ್ತಬಾ ಸಿದ್ಧಿಕಿ, ಹಕಮ್ ಲಾಲ್ ಬಿಂಡ್ ಮತ್ತು ಗೋವಿಂದ್ ಜಾಟವ್ ಎಂಬ 5 ಜನ ಶಾಸಕರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಸೇರಿದ್ದರು.

ಇದನ್ನೂ ಓದಿ : ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...