Homeಮುಖಪುಟಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

ಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪಕ್ಷಾಂತರ ಪರ್ವವೂ ಆರಂಭಗೊಂಡಿದೆ. ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರತೊಡಗಿದ್ದಾರೆ. ಬಿಎಸ್‌ಪಿಯ 9 ಶಾಸಕರು ನಿನ್ನೆ ಮಂಗಳವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಆದರೆ ಇವರು ತಮ್ಮ ಪಕ್ಷದ ಶಾಸಕರೇ ಅಲ್ಲ. ಬಿಎಸ್‌ಪಿಯಿಂದ ಈ 9 ಜನರನ್ನು ಬಹಳ ಹಿಂದೆಯೇ ಅಮಾನತು ಮಾಡಲಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ. ಬಿಎಸ್‌ಪಿಯ ನಾಯಕರು ಸಮಾಜವಾದಿ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಂತೆ ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಟೀಕಾ ಪ್ರಹಾರವನ್ನೇ ಆರಂಭಿಸಿದ್ದಾರೆ.

ಒಂದು ಕಾಲದಲ್ಲಿ ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಕಳೆದ ಲೋಕಸಭೆ ಚುನಾವಣೆಯನ್ನು ಎರಡು ಪಕ್ಷಗಳು ಒಟ್ಟಾಗಿ ಎದುರಿಸಿದ್ದವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಬಿಎಸ್‌ಪಿ ಮತ್ತು ಎಸ್‌ಪಿ ನಡುವಿನ ಅಂತರ ಹೆಚ್ಚಿದೆ. ಎರಡು ಪಕ್ಷಗಳ ನಾಯಕರು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬಿಎಸ್‌ಪಿಯ ಶಾಸಕರು ಸಮಾಜವಾದಿ ಪಕ್ಷದ ದಾರಿ ಹಿಡಿದಿರುವುದು ಮಾಯವತಿಗೆ ನುಂಗಲಾರದ ತುತ್ತಾಗಿ ಮಾರ್ಪಟ್ಟಿದೆ. ವಿಧಾನ ಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಬಿಎಸ್‌ಪಿಯು ಸಮಾಜವಾದಿ ಪಕ್ಷವನ್ನು ತನ್ನ ಮುಖ್ಯ ಎದುರಾಳಿಯನ್ನಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಜೊತೆಗೆ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳಲು ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಮಧ್ಯಪ್ರದೇಶ: ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್​ ಪತ್ತೆ

ಸಮಾಜವಾದಿ ಪಕ್ಷವು ಬಿಎಸ್‌ಪಿಯ ಕೆಲವು ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲೇ ಸಮಾಜವಾದಿ ಪಕ್ಷವನ್ನು ಸೇರಲಿದ್ದಾರೆ ಎಂದು ಮಾಧ್ಯಮಗಳ ಮೂಲಕ ಬಿಂಬಿಸುತ್ತಿದೆ. ಆದರೆ ಸಮಾಜವಾದಿ ಪಕ್ಷದ ಸಂಪರ್ಕದಲ್ಲಿರುವ ಶಾಸಕರು ಬಿಎಸ್‌ಪಿಯಿಂದ ಈಗಾಗಲೇ ಅಮಾನತುಗೊಂಡವರಾಗಿದ್ದಾರೆ. ಸಮಾಜವಾದಿ ಪಕ್ಷಕ್ಕೆ ಕನಿಷ್ಠ ಪ್ರಾಮಾಣಿಕತೆಯಿದ್ದರೆ ಸಂಪರ್ಕದಲ್ಲಿರುವ ಬಿಎಸ್‌ಪಿ ಶಾಸಕರ ಹೆಸರನ್ನು ಬಹಿರಂಗಗೊಳಿಸಲಿ. ಒಂದು ವೇಳೆ ಸಮಾಜವಾದಿ ಪಕ್ಷವು  ಬಿಎಸ್‌ಪಿಯಿಂದ ಅಮಾನತುಗೊಂಡ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಸಮಾಜವಾದಿ ಪಕ್ಷ ಎರಡು ಹೋಳಾಗುತ್ತದೆ. ಸಮಾಜವಾದಿ ಪಕ್ಷ ದಲಿತ ವಿರೋಧಿ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿಯೆ ಹಿಂದೆ ರಾಜ್ಯ ಸಭೆ ಚುನಾವಣೆಯಲ್ಲಿ ಬಿಎಸ್‌ಪಿಯ ಕೆಲವು ಶಾಸಕರನ್ನು ಸೆಳೆದು ದಲಿತ ಅಭ್ಯರ್ಥಿಯನ್ನು ಸೋಲಿಸಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರಣಿ ಟ್ವೀಟ್ ಮೂಲಕ ಸಮಾಜವಾದಿ ಪಕ್ಷದ ವಿರುದ್ಧ ಕೆಂಡ ಕಾರಿದ್ದಾರೆ.

ಲಾಲ್‌ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬಾರ್ ಹಿಂದೆ ಬಿಎಸ್‌ಪಿಯನ್ನು ತೊರೆದಿದ್ದರು. ಇವರಿಬ್ಬರು ಅತ್ಯಂತ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು. ಬಿಎಸ್‌ಪಿಯ ಸ್ಥಾಪಕ ಸದಸ್ಯರಾದ ಇವರಿಬ್ಬರು ಬಿಎಸ್‌ಪಿ ತೊರೆದಿರುವುದು ಮಾಯಾವತಿಯವರ ಬಿಎಸ್‌ಪಿಗೆ ಉತ್ತರ ಪ್ರದೇಶದಲ್ಲಿ ದೊಡ್ಡ ಹೊಡೆತವನ್ನು ನೀಡಿದೆ.

ಇವರ ಬೆನ್ನಲ್ಲೇ ಕಳೆದ ವರ್ಷ ಅಸ್ಲಾಮ್ ಚೌಧರಿ, ಅಸ್ಲಾಮ ರೈನಿ, ಮುಝ್ತಬಾ ಸಿದ್ಧಿಕಿ, ಹಕಮ್ ಲಾಲ್ ಬಿಂಡ್ ಮತ್ತು ಗೋವಿಂದ್ ಜಾಟವ್ ಎಂಬ 5 ಜನ ಶಾಸಕರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಸೇರಿದ್ದರು.

ಇದನ್ನೂ ಓದಿ : ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...