Homeಮುಖಪುಟಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

ಸಮಾಜವಾದಿ ಪಕ್ಷ ಹೊಡೆದು ಎರಡು ಹೋಳಾಗಲಿದೆ: ಮಾಯಾವತಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪಕ್ಷಾಂತರ ಪರ್ವವೂ ಆರಂಭಗೊಂಡಿದೆ. ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರತೊಡಗಿದ್ದಾರೆ. ಬಿಎಸ್‌ಪಿಯ 9 ಶಾಸಕರು ನಿನ್ನೆ ಮಂಗಳವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಆದರೆ ಇವರು ತಮ್ಮ ಪಕ್ಷದ ಶಾಸಕರೇ ಅಲ್ಲ. ಬಿಎಸ್‌ಪಿಯಿಂದ ಈ 9 ಜನರನ್ನು ಬಹಳ ಹಿಂದೆಯೇ ಅಮಾನತು ಮಾಡಲಾಗಿದೆ ಎಂದು ಮಾಯಾವತಿ ತಿಳಿಸಿದ್ದಾರೆ. ಬಿಎಸ್‌ಪಿಯ ನಾಯಕರು ಸಮಾಜವಾದಿ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಂತೆ ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಟೀಕಾ ಪ್ರಹಾರವನ್ನೇ ಆರಂಭಿಸಿದ್ದಾರೆ.

ಒಂದು ಕಾಲದಲ್ಲಿ ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಕಳೆದ ಲೋಕಸಭೆ ಚುನಾವಣೆಯನ್ನು ಎರಡು ಪಕ್ಷಗಳು ಒಟ್ಟಾಗಿ ಎದುರಿಸಿದ್ದವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಬಿಎಸ್‌ಪಿ ಮತ್ತು ಎಸ್‌ಪಿ ನಡುವಿನ ಅಂತರ ಹೆಚ್ಚಿದೆ. ಎರಡು ಪಕ್ಷಗಳ ನಾಯಕರು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬಿಎಸ್‌ಪಿಯ ಶಾಸಕರು ಸಮಾಜವಾದಿ ಪಕ್ಷದ ದಾರಿ ಹಿಡಿದಿರುವುದು ಮಾಯವತಿಗೆ ನುಂಗಲಾರದ ತುತ್ತಾಗಿ ಮಾರ್ಪಟ್ಟಿದೆ. ವಿಧಾನ ಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಬಿಎಸ್‌ಪಿಯು ಸಮಾಜವಾದಿ ಪಕ್ಷವನ್ನು ತನ್ನ ಮುಖ್ಯ ಎದುರಾಳಿಯನ್ನಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಜೊತೆಗೆ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳಲು ಮಾಯವತಿ ಸಮಾಜವಾದಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ :ಮಧ್ಯಪ್ರದೇಶ: ಕೊರೊನಾದಿಂದ ಗುಣಮುಖರಾದ ವ್ಯಕ್ತಿಯಲ್ಲಿ ಗ್ರೀನ್​ ಫಂಗಸ್​ ಪತ್ತೆ

ಸಮಾಜವಾದಿ ಪಕ್ಷವು ಬಿಎಸ್‌ಪಿಯ ಕೆಲವು ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲೇ ಸಮಾಜವಾದಿ ಪಕ್ಷವನ್ನು ಸೇರಲಿದ್ದಾರೆ ಎಂದು ಮಾಧ್ಯಮಗಳ ಮೂಲಕ ಬಿಂಬಿಸುತ್ತಿದೆ. ಆದರೆ ಸಮಾಜವಾದಿ ಪಕ್ಷದ ಸಂಪರ್ಕದಲ್ಲಿರುವ ಶಾಸಕರು ಬಿಎಸ್‌ಪಿಯಿಂದ ಈಗಾಗಲೇ ಅಮಾನತುಗೊಂಡವರಾಗಿದ್ದಾರೆ. ಸಮಾಜವಾದಿ ಪಕ್ಷಕ್ಕೆ ಕನಿಷ್ಠ ಪ್ರಾಮಾಣಿಕತೆಯಿದ್ದರೆ ಸಂಪರ್ಕದಲ್ಲಿರುವ ಬಿಎಸ್‌ಪಿ ಶಾಸಕರ ಹೆಸರನ್ನು ಬಹಿರಂಗಗೊಳಿಸಲಿ. ಒಂದು ವೇಳೆ ಸಮಾಜವಾದಿ ಪಕ್ಷವು  ಬಿಎಸ್‌ಪಿಯಿಂದ ಅಮಾನತುಗೊಂಡ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಸಮಾಜವಾದಿ ಪಕ್ಷ ಎರಡು ಹೋಳಾಗುತ್ತದೆ. ಸಮಾಜವಾದಿ ಪಕ್ಷ ದಲಿತ ವಿರೋಧಿ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿಯೆ ಹಿಂದೆ ರಾಜ್ಯ ಸಭೆ ಚುನಾವಣೆಯಲ್ಲಿ ಬಿಎಸ್‌ಪಿಯ ಕೆಲವು ಶಾಸಕರನ್ನು ಸೆಳೆದು ದಲಿತ ಅಭ್ಯರ್ಥಿಯನ್ನು ಸೋಲಿಸಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರಣಿ ಟ್ವೀಟ್ ಮೂಲಕ ಸಮಾಜವಾದಿ ಪಕ್ಷದ ವಿರುದ್ಧ ಕೆಂಡ ಕಾರಿದ್ದಾರೆ.

ಲಾಲ್‌ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬಾರ್ ಹಿಂದೆ ಬಿಎಸ್‌ಪಿಯನ್ನು ತೊರೆದಿದ್ದರು. ಇವರಿಬ್ಬರು ಅತ್ಯಂತ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು. ಬಿಎಸ್‌ಪಿಯ ಸ್ಥಾಪಕ ಸದಸ್ಯರಾದ ಇವರಿಬ್ಬರು ಬಿಎಸ್‌ಪಿ ತೊರೆದಿರುವುದು ಮಾಯಾವತಿಯವರ ಬಿಎಸ್‌ಪಿಗೆ ಉತ್ತರ ಪ್ರದೇಶದಲ್ಲಿ ದೊಡ್ಡ ಹೊಡೆತವನ್ನು ನೀಡಿದೆ.

ಇವರ ಬೆನ್ನಲ್ಲೇ ಕಳೆದ ವರ್ಷ ಅಸ್ಲಾಮ್ ಚೌಧರಿ, ಅಸ್ಲಾಮ ರೈನಿ, ಮುಝ್ತಬಾ ಸಿದ್ಧಿಕಿ, ಹಕಮ್ ಲಾಲ್ ಬಿಂಡ್ ಮತ್ತು ಗೋವಿಂದ್ ಜಾಟವ್ ಎಂಬ 5 ಜನ ಶಾಸಕರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಸೇರಿದ್ದರು.

ಇದನ್ನೂ ಓದಿ : ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...